Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರುವ...

ಉಡುಪಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರುವ ಪ್ರಶ್ನೆಯೇ ಇಲ್ಲ : ಡಿಸಿ ಜಗದೀಶ್

ಮಾಸ್ಕ್ ಇಲ್ಲದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ತರಾಟೆ, ದಂಡ

ವಾರ್ತಾಭಾರತಿವಾರ್ತಾಭಾರತಿ25 March 2021 9:30 PM IST
share
ಉಡುಪಿ ಜಿಲ್ಲೆಯಲ್ಲಿ ಲಾಕ್‌ಡೌನ್ ಹೇರುವ ಪ್ರಶ್ನೆಯೇ ಇಲ್ಲ : ಡಿಸಿ ಜಗದೀಶ್

ಕುಂದಾಪುರ, ಮಾ. 25: ಕುಂದಾಪುರ ಪೇಟೆಯಲ್ಲಿ ಗುರುವಾರ ಬೆಳಗ್ಗೆ ಕೋವಿಡ್ ಮಾರ್ಗಸೂಚಿಗಳನ್ನು, ಜಿಲ್ಲಾಡಳಿತದ ಆದೇಶಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಕೋವಿಡ್ ವಿರುದ್ಧ ಕಡ್ಡಾಯವಾಗಿ ಧರಿಸಬೇಕಿದ್ದ ಮಾಸ್ಕ್ ಧರಿಸದೇ, ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳದೇ ಓಡಾಡುತಿದ್ದ ಸಾರ್ವಜನಿಕರು, ವಿದ್ಯಾರ್ಥಿಗಳು, ಆಟೋ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಎಚ್ಚರಿಕೆಯನ್ನು ನೀಡಿದರಲ್ಲದೇ ಹಲವರಿಗೆ ಕೊರೋನ ಕ್ಲಾಸ್‌ಗಳನ್ನು ತೆಗೆದುಕೊಂಡರು.

ಇವರೆಲ್ಲರ ವಿರುದ್ಧ ಜಿಲ್ಲಾದಿಕಾರಿಗಳ ಆದೇಶದಂತೆ ಕುಂದಾಪುರ ಪುರಸಭೆ ವತಿಯಿಂದ ದಂಡವನ್ನು ವಿಧಿಸಲಾಯಿತು. ಇದೇ ವೇಳೆ ಆಸುಪಾಸಿನ ಕೆಲವೊಂದು ಅಂಗಡಿಗಳಿಗೆ ದಾಳಿ ಮಾಡಿ ಕೊರೋನ ನಿಯಮ ಉಲ್ಲಂಘನೆ ಮಾಡಿದ ಅಂಗಡಿ ಮಾಲಕರನ್ನು ಹಾಗೂ ನೌಕರರನ್ನು ಸಹ ತರಾಟೆಗೆ ತೆಗೆದುಕೊಂಡು ಅವರಿಗೆ ದಂಡ ವಿಧಿಸಿ ಎಚ್ಚರಿಕೆಯನ್ನು ನೀಡಿದರು.

ಲಾಕ್‌ಡೌನ್ ಪ್ರಶ್ನೆಯೇ ಇಲ್ಲ: ಇದೇ ವೇಳೆ ಕುಂದಾಪುರದ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲೆಯ ಹಲವು ಶಿಕ್ಷಣ ಸಂಸ್ಥೆಯಲ್ಲಿ ಕೊರೋನ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಕಂಡುಬರುತ್ತದೆ. ಮಣಿಪಾಲದ ಎಂಐಟಿ, ಕುರ್ಕಾಲು ಪಾಜಕದ ಆನಂದತೀರ್ಥ ವಸತಿ ಶಾಲೆ ಹಾಗೂ ಕಾರ್ಕಳದಲ್ಲಿ ಹಲವು ಪ್ರಕರಣಗಳು ಕಂಡು ಕಂಡುಬಂದಿವೆ. ಇದಕ್ಕಾಗಿ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದರು.

ವಿದ್ಯಾಸಂಸ್ಥೆಗಳು ಸಾಧ್ಯವಾದಷ್ಟು ಆನ್‌ಲೈನ್ ಕ್ಲಾಸ್ ಮಾಡಬೇಕು. ಇದರಿಂದ ಕೊರೋನ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಡೆಯಬಹುದು. ಅದಕ್ಕಾಗಿ ಶಿಕ್ಷಣ ಸಚಿವರಿಗೂ ಹಾಗೂ ಸರಕಾರಕ್ಕೂ ಮನವಿ ಮಾಡಿದ್ದೇನೆ ಎಂದರು.
ಸದ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲೆಯನ್ನು ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಏಕೆಂದರೆ ಪ್ರತಿದಿನ 400 ಕೊರೋನ ಪ್ರಕರಣ ಬಂದರೂ ಅದನ್ನು ನಿಭಾಯಿಸುವ ವೈದ್ಯಕೀಯ ಸಾಮರ್ಥ್ಯ ನಮ್ಮ ಜಿಲ್ಲೆ ಹೊಂದಿದೆ ಎಂದವರು ವಿಶ್ವಾಸದಿಂದ ನುಡಿದರು.

ಯಾವುದೇ ಕಾರಣಕ್ಕೂ ಒಬ್ಬರಿಂದ ಇನ್ನೊಬ್ಬರಿಗೆ ಕೊರೋನ ಹರಡಬಾರದು ಎನ್ನುವ ಉದ್ದೇಶ ನಮ್ಮದಾಗಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಸರಕಾರದ ಆದೇಶವನ್ನು ಉಲ್ಲಂಘನೆ ಮಾಡದೆ ಮಾಸ್ಕ್ ಮತ್ತು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಲು ಸಾವಜನಿಕರಲ್ಲಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X