Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ನಗರ ಪಂಚಾಯಿತಿ ಬಜೆಟ್ ಮಂಡನೆ:...

ಸುಳ್ಯ ನಗರ ಪಂಚಾಯಿತಿ ಬಜೆಟ್ ಮಂಡನೆ: ರೂ.9 ಕೋಟಿ 91 ಲಕ್ಷ ಆದಾಯ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ26 March 2021 11:34 PM IST
share
ಸುಳ್ಯ ನಗರ ಪಂಚಾಯಿತಿ ಬಜೆಟ್ ಮಂಡನೆ: ರೂ.9 ಕೋಟಿ 91 ಲಕ್ಷ ಆದಾಯ ನಿರೀಕ್ಷೆ

ಸುಳ್ಯ: ಸುಳ್ಯ ನಗರ ಪಂಚಾಯತ್‍ನ 2021-22 ನೇ ಸಾಲಿನ ಮುಂಗಡ ಆಯವ್ಯಯ ಮಂಡನಾ ಸಭೆ ಸುಳ್ಯ ನ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಅಧ್ಯಕ್ಷ ವಿನಯಕುಮಾರ್ ಕಂದಡ್ಕ 2021-22ರ ಆಯ ವ್ಯಯ ಪತ್ರ ಮಂಡಿಸಿದರು. ರೂ.9.91ಕೋಟಿ ಆದಾಯ ನಿರೀಕ್ಷಿಸಲಾಗಿದ್ದು,ರೂ. 11.16 ಕೋ ವೆಚ್ಚ ಅಂದಾಜಿಸಲಾಗಿದೆ. ಕಳೆದ ಸಾಲಿನ ಉಳಿಕೆ 3.21ಕೋಟಿ ಇದೆಯೆಂದು ಅವರು ತಿಳಿಸಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿ ಸದಸ್ಯ ಎಂ. ವೆಂಕಪ್ಪ ಗೌಡ ಒಂದೊಂದು ವಾರ್ಡಿಗೆ ಅಭಿವೃದ್ಧಿ ಕೆಲಸಗಳಿಗೆ ಇರಿಸಿದ ಹಣ ತೀರಾ ಕಡಿಮೆಯಾಗಿದ್ದು, ಈಗ ಪ್ರತಿ ವಾರ್ಡಿಗೆ ಮೂರು ಲಕ್ಷ ನೀಡಲಾಗಿದೆ. ಕನಿಷ್ಟ 10 ಲಕ್ಷ ಇರಿಸಬೇಕು. ಸಚಿವರ ಮೂಲಕ ಸುಳ್ಯ ನ.ಪಂಗೆ ವಿಶೇಷ ಅನುದಾನ ತಂದು ಅಭಿವೃದ್ದಿಗೆ ಒತ್ತು ನೀಡಬೇಕು. ಎಂದು ವೆಂಕಪ್ಪ ಗೌಡ ಒತ್ತಾಯಿಸಿದರು. ಅದಕ್ಕುತ್ತರಿಸಿದ ಅಧ್ಯಕ್ಷರು ವಾರ್ಡ್‍ನ ಅಗತ್ಯ ಕೆಲಸಗಳ ಪಟ್ಟಿ ತಯಾರಿಸಿ ಕೊಟ್ಟರೆ ತಲಾ ರೂ. 20 ಲಕ್ಷ ನೀಡಲಾಗುವುದು ಎಂದರು. 

ಸದಸ್ಯ ಕೆ.ಎಸ್. ಉಮ್ಮರ್ ಮಾತನಾಡಿ ಈ ಬಜೆಟ್ ಸಮನ್ವಯ ಕೊರತೆಯಿಂದ ಕಾಡಿದೆ. ಅಧಿಕಾರಿಗಳು ಈ ಬಜೆಟ್ ತಯಾರು ಮಾಡಿದ್ದಾರೆ. ಪ್ರತಿ ವಾರ್ಡಿಗೆ 10 ಲಕ್ಷ ರೂ ಅನುದಾನ ನೀಡಲೇಬೇಕು ಎಂದರು.  

ಹೆಚ್ಚಿನ ಅನುದಾನ ಕುಡಿಯುವ ನೀರು, ವಿದ್ಯುತ್, ಮತ್ತು ತ್ಯಾಜ್ಯ ನಿರ್ವಹಣೆಗೆ ಖರ್ಚಾಗುತ್ತಿದೆ. ಕಟ್ಟಡಗಳ ಬಾಡಿಗೆ, ನೀರಿನ ಶುಲ್ಕ, ಪುರಭವನದ ಬಾಡಿಗೆ ಇತ್ಯಾದಿ ನಿರೀಕ್ಷಿಸಿದಷ್ಟು ವಸೂಲಾಗುತ್ತಿಲ್ಲ. ಅದನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು. ಆದಾಯ ಕ್ರೋಢೀಕರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.

ನಗರದಲ್ಲಿ ಮತ್ತೆ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಪ್ಲಾಸ್ಟಿಕ್ ಕೊಡುತ್ತಿರುವ ಅಂಗಡಿಗಳ ಮೇಲೆ ಕ್ರಮ ಜರಗಿಸಲು ಅಧಿಕಾರಿಗಳು ಉದಾಸೀನ ಮಾಡುತ್ತಿರುವುದು ಕಂಡುಬರುತ್ತಿದೆ. ಎಂದು ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ನ.ಪಂ. ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ದನಾಯ್ಕ್, ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ನ.ಪಂ. ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X