Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಐದು ನಿಮಿಷಗಳ ಅವಧಿಯಲ್ಲಿ ಮತದಾನ ಪ್ರಮಾಣ...

"ಐದು ನಿಮಿಷಗಳ ಅವಧಿಯಲ್ಲಿ ಮತದಾನ ಪ್ರಮಾಣ ಅರ್ಧದಷ್ಟು ಕಡಿಮೆ"

ಪಶ್ಚಿಮ ಬಂಗಾಳದಲ್ಲಿ ಮತದಾನ ಪ್ರಮಾಣ ಸಂಖ್ಯೆಯಲ್ಲಿ ಅಸಮರ್ಪಕತೆ, ಇವಿಎಂ ದೋಷಗಳ ಬಗ್ಗೆ ಟಿಎಂಸಿ ಆರೋಪ

ವಾರ್ತಾಭಾರತಿವಾರ್ತಾಭಾರತಿ27 March 2021 3:01 PM IST
share
ಐದು ನಿಮಿಷಗಳ ಅವಧಿಯಲ್ಲಿ ಮತದಾನ ಪ್ರಮಾಣ ಅರ್ಧದಷ್ಟು ಕಡಿಮೆ

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆ ಆರಂಭಗೊಂಡ ಬೆನ್ನಲ್ಲೇ ಮತದಾನ ಪ್ರಮಾಣದಲ್ಲಿ "ಅಸಮರ್ಪಕತೆ'' ಹಾಗೂ ಇವಿಎಂ ದೋಷಗಳ ಕುರಿತಂತೆ ತೃಣಮೂಲ ಕಾಂಗ್ರೆಸ್ ಪಕ್ಷ ಆರೋಪಗಳನ್ನು ಹೊರಿಸಿದೆ.

ಪಕ್ಷದ ಸಂಸದ ಡೆರೆಕ್ ಒ'ಬ್ರಿಯಾನ್ ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರಲ್ಲದೆ ಪಕ್ಷದ ನಿಯೋಗವೊಂದು ಇಂದು ಅಪರಾಹ್ನ ಚುನಾವಣಾ ಆಯುಕ್ತರನ್ನು ಭೇಟಿಯಾಗಿದೆ.

ಪೂರ್ವ ಮೆದಿನಿಪುರ್ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಸಂಖ್ಯೆಗಳನ್ನು ಟ್ವೀಟ್ ಒಂದರಲ್ಲಿ ಶೇರ್ ಮಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಏನು ನಡೆಯುತ್ತಿದೆ? ಮತದಾನ  ಪ್ರಮಾಣ ಕೇವಲ 5 ನಿಮಿಷಗಳ ಅವಧಿಯಲ್ಲಿ ಅರ್ಧದಷ್ಟು ಹೇಗೆ ಕಡಿಮೆಯಾಯಿತೆಂದು ನೀವು ವಿವರಿಸುತ್ತೀರಾ? ಆಘಾತಕಾರಿ, ಇದರ ಬಗ್ಗೆ ತುರ್ತಾಗಿ ಗಮನ ಹರಿಸಿ,'' ಎಂದು ಟ್ವೀಟ್ ಮಾಡಿದ್ದಾರೆ.

ಜನರಿಗೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಾಧ್ಯವಾಗುತ್ತಿಲ್ಲವೆಂಬ ಆರೋಪಗಳ ಕುರಿತೂ ಟಿಎಂಸಿ ಇನ್ನೊಂದು ಟ್ವೀಟ್‍ನಲ್ಲಿ ಬರೆದಿದೆ.

"ಮತದಾರರಿಂದ ಆಘಾತಕಾರಿ ಹೇಳಿಕೆಗಳು, ಚುನಾವಣಾ ಆಯೋಗ ಇತ್ತ ಗಮನ ನೀಡಬೇಕು. ಕಾಂತಿ ದಕ್ಷಿಣ್ ವಿಧಾನಸಭಾ ಕ್ಷೇತ್ರದಲ್ಲಿ ತಾವು ಟಿಎಂಸಿಗೆ ಮತ ಹಾಕಿದ್ದರೂ ವಿವಿಪ್ಯಾಟ್ ಬಿಜೆಪಿ ಚಿಹ್ನೆ ತೋರಿಸಿದೆ ಎಂದು ಹಲವು ಮತದಾರರು ಆರೋಪಿಸಿದ್ದಾರೆ. ಇದು ಗಂಭೀರ, ಇದು ಕ್ಷಮಾರ್ಹವಲ್ಲ,'' ಎಂದು ಟಿಎಂಸಿ ಟ್ವೀಟ್ ಮಾಡಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾದ ತೃಣಮೂಲ ನಾಯಕ ಸುದೀಪ್ ಬಂದ್ಯೋಪಾಧ್ಯಾಯ ನಂತರ ಸುದ್ದಿಗಾರರ ಜತೆ ಮಾತನಾಡಿ  ತಮ್ಮ ಪಕ್ಷದ  ಕಳವಳವನ್ನು ಆಯುಕ್ತರ ಜತೆ ಹಂಚಿಕೊಂಡಿದ್ದಾಗಿ ತಿಳಿಸಿದರು. ಬೂತ್ ಏಜಂಟ್ ಆಗಿರುವವರು ಅದೇ ಬೂತ್‍ನ ಮತದಾರರಾಗಿರಬೇಕೆಂಬ ನಿಯಮವನ್ನು ಬದಲಾಯಿಸಿ ಯಾರು ಕೂಡ ಯಾವ ಬೂತ್‍ನಲ್ಲಿಯೂ ಏಜಂಟ್ ಆಗಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದನ್ನು ಉಲ್ಲೇಖಿಸಿದ ಅವರು, "ಈ ಹೊಸ ವ್ಯವಸ್ಥೆ ನಮಗೆ ಸ್ವೀಕಾರಾರ್ಹವಲ್ಲ, ಮುಂದಿನ ಹಂತದ ಚುನಾವಣೆಯಲ್ಲಿ ಬೂತ್ ಏಜಂಟ್ ಆ ಬೂತ್‍ನವರೇ ಆಗಿರಬೇಕೆಂದು ನಮ್ಮ ಮನವಿ. ಇದನ್ನು ಪರಿಗಣಿಸುವುದಾಗಿ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ,'' ಎಂದು  ಸುದೀಪ್ ಹೇಳಿದರು.

What is happening @ECISVEEP?!

Could you explain how voting percentage drastically reduced to half within a gap of just 5 minutes?!

Shocking!@CEOWestBengal, please look into this urgently! pic.twitter.com/LK1lSvKa8q

— All India Trinamool Congress (@AITCofficial) March 27, 2021

Shocking claim by voters which must be immediately looked into by @ECISVEEP and @CEOWestBengal.

Many voters in Kanthi Dakshin assembly seat allege that they voted for TMC but VVPAT showed them the BJP symbol. THIS IS SERIOUS! THIS IS UNPARDONABLE! pic.twitter.com/E0Bjjbc89y

— All India Trinamool Congress (@AITCofficial) March 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X