Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜನಾಂಗೀಯ ನಿಂದನೆ, ಪೀಡನೆಗೆ ಬೇಸತ್ತು...

ಜನಾಂಗೀಯ ನಿಂದನೆ, ಪೀಡನೆಗೆ ಬೇಸತ್ತು ಸಾಮಾಜಿಕ ಮಾಧ್ಯಮಗಳಿಂದ ನಿರ್ಗಮಿಸಿದ ಮಾಜಿ ಫುಟ್ಬಾಲ್ ಆಟಗಾರ ಥಿಯರಿ ಹೆನ್ರಿ

ವಾರ್ತಾಭಾರತಿವಾರ್ತಾಭಾರತಿ27 March 2021 7:42 PM IST
share
ಜನಾಂಗೀಯ ನಿಂದನೆ, ಪೀಡನೆಗೆ ಬೇಸತ್ತು ಸಾಮಾಜಿಕ ಮಾಧ್ಯಮಗಳಿಂದ ನಿರ್ಗಮಿಸಿದ ಮಾಜಿ ಫುಟ್ಬಾಲ್ ಆಟಗಾರ ಥಿಯರಿ ಹೆನ್ರಿ

 ಪ್ಯಾರಿಸ್, ಮಾ. 27: ಸಾಮಾಜಿಕ ಜಾಲತಾಣಗಳಲ್ಲಿ ಜನಾಂಗೀಯ ನಿಂದನೆ ಮತ್ತು ಕಿರುಕುಳವನ್ನು ನಿಭಾಯಿಸಲು ಕಂಪೆನಿಗಳು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುವವರೆಗೆ ಎಲ್ಲ ಸಾಮಾಜಿಕ ಮಾಧ್ಯಮಗಳಿಂದ ನಾನು ಹೊರಹೋಗುತ್ತಿದ್ದೇನೆ ಎಂದು ಫ್ರಾನ್ಸ್ ರಾಷ್ಟ್ರೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ ಥಿಯರಿ ಹೆನ್ರಿ ಹೇಳಿದ್ದಾರೆ.

ಇದರೊಂದಿಗೆ ನಿಂದನೆಗೆ ಬೇಸತ್ತು ತಮ್ಮ ಆನ್‌ಲೈನ್ ಉಪಸ್ಥಿತಿಯನ್ನು ಸೀಮಿತಗೊಳಿಸಿರುವ ತಾರೆಯರ ಪಟ್ಟಿಗೆ ಹೆನ್ರಿ ಸೇರಿಕೊಂಡಿದ್ದಾರೆ.

ಶನಿವಾರ ನಾನು ಎಲ್ಲ ಸಾಮಾಜಿಕ ಮಾಧ್ಯಮಗಳಿಂದ ಹೊರಹೋಗುತ್ತಿದ್ದೇನೆ ಎಂಬುದಾಗಿ ಆರ್ಸೆನಲ್ ಫುಟ್ಬಾಲ್ ಕ್ಲಬ್‌ನ ಮಾಜಿ ಆಟಗಾರನೂ ಆಗಿರುವ ಥಿಯರಿ ಹೆನ್ರಿ ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ಹಾಕಿದ ಹೇಳಿಕೆಗಳಲ್ಲಿ ತಿಳಿಸಿದ್ದಾರೆ. ಈ ಮೂರೂ ಮಾಧ್ಯಮಗಳಲ್ಲಿ ಅವರು ಒಟ್ಟು 1.48 ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ.

‘‘ಉಪೇಕ್ಷಿಸಲು ಸಾಧ್ಯವಾಗದಷ್ಟು ಪ್ರಮಾಣದಲ್ಲಿ ಜನಾಂಗೀಯ ನಿಂದನೆ ಮತ್ತು ಪೀಡನೆಯನ್ನು ನಾನು ಎದುರಿಸುತ್ತಿದ್ದೇನೆ. ಅದರಿಂದ ಹುಟ್ಟಿಕೊಳ್ಳುವ ಮಾನಸಿಕ ಹಿಂಸೆಯನ್ನು ತಡೆದುಕೊಳ್ಳಲು ಸಾಧ್ಯವಿಲ್ಲ’’ ಎಂದು ಥಿಯರಿ ಹೆನ್ರಿ ಹೇಳಿದ್ದಾರೆ.

ಈ ಪಿಡುಗುಗಳನ್ನು ನಿಭಾಯಿಸಲು ಹೆಚ್ಚಿನ ಆನ್‌ಲೈನ್ ಉತ್ತರದಾಯಿತ್ವದ ಅಗತ್ಯವಿದೆ ಎಂದು ಆಫ್ರಿಕ ಮೂಲದ ಆಟಗಾರ ಅಭಿಪ್ರಾಯಪಟ್ಟಿದ್ದಾರೆ.

ಅಂತರ್‌ರಾಷ್ಟ್ರೀಯ ಪಂದ್ಯಗಳಲ್ಲಿ ಫ್ರಾನ್ಸ್ ಪರವಾಗಿ ಗರಿಷ್ಠ ಗೋಲುಗಳನ್ನು ಗಳಿಸಿರುವ ಹೆಗ್ಗಳಿಕೆಯನ್ನು ಹೊಂದಿರುವ ಥಿಯರಿ ಹೆನ್ರಿ, ಫುಟ್ಬಾಲ್‌ನಲ್ಲಿರುವ ಜನಾಂಗೀಯ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿಯೆತ್ತುತ್ತಾ ಬಂದಿದ್ದಾರೆ.

 ‘ಎಲ್ಲವನ್ನು ಮಾಡಿಯೂ ಅನಾಮಧೇಯನಾಗಿ ಉಳಿಯಬಹುದಾಗಿದೆ!’

‘‘ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆಗಳನ್ನು ತೆರೆಯುವುದು ಅತ್ಯಂತ ಸುಲಭವಾಗಿದೆ. ಯಾವುದೇ ಪರಿಣಾಮಗಳ ಹೆದರಿಕೆಯಿಲ್ಲದೆ ಜನರನ್ನು ಪೀಡಿಸಲು ಮತ್ತು ಅವರಿಗೆ ಕಿರುಕುಳ ನೀಡಲು ಈ ಖಾತೆಗಳನ್ನು ಬಳಸಬಹುದಾಗಿದೆ ಹಾಗೂ ಕೊನೆಯವರೆಗೂ ಅನಾಮಧೇಯನಾಗಿಯೇ ಉಳಿಯಬಹುದಾಗಿದೆ’’ ಎಂದು ಥಿಯರಿ ಹೆನ್ರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X