Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೈಲ ಬೆಲೆಗಳನ್ನು ನಿಯಂತ್ರಿಸಲು...

ತೈಲ ಬೆಲೆಗಳನ್ನು ನಿಯಂತ್ರಿಸಲು ದಾಸ್ತಾನಿರಿಸಿದ ತೈಲ ಬಳಸುವ ಸೌದಿ ಅರೇಬಿಯಾದ ಸಲಹೆ ತಿರಸ್ಕರಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ27 March 2021 10:18 PM IST
share
ತೈಲ ಬೆಲೆಗಳನ್ನು ನಿಯಂತ್ರಿಸಲು ದಾಸ್ತಾನಿರಿಸಿದ ತೈಲ ಬಳಸುವ ಸೌದಿ ಅರೇಬಿಯಾದ ಸಲಹೆ ತಿರಸ್ಕರಿಸಿದ ಭಾರತ

ಹೊಸದಿಲ್ಲಿ, ಮಾ.27: ಕಚ್ಛಾ ತೈಲ ಬೆಲೆ ಹೆಚ್ಚಳದಿಂದ ಗಗನಕ್ಕೇರಿರುವ ತೈಲ ಬೆಲೆಗಳನ್ನು ನಿಯಂತ್ರಿಸಲು ದಾಸ್ತಾನಿರಿಸಿದ ತೈಲ ಬಳಸುವಂತೆ ಸೌದಿ ಅರೇಬಿಯಾ ನೀಡಿದ ಸಲಹೆ ಸಂವೇದನಾಶೂನ್ಯ ಮತ್ತು ನಿಷ್ಠುರ ಹೇಳಿಕೆಯಾಗಿದೆ ಎಂದು ಕೇಂದ್ರ ಸರಕಾರ ಪ್ರತಿಕ್ರಿಯಿಸಿದೆ.

ಇದು ನಮ್ಮ ಹಳೆಯ ಮಿತ್ರರಿಂದ ಬಂದಿರುವ ಸಂವೇದನಾಶೂನ್ಯ ಉತ್ತರವಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕು ಇಲಾಖೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ಭಾರತದ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಇಂತಹ ದೃಷ್ಟಿಕೋನವನ್ನು ನಾನು ವಿನಯಪೂರ್ವಕವಾಗಿ ವಿರೋಧಿಸುತ್ತೇನೆ. ತನ್ನಲ್ಲಿರುವ ತೈಲ ಸಂಗ್ರಹವನ್ನು ಯಾವಾಗ, ಎಷ್ಟು ಬಳಸಬೇಕೆಂಬ ಬಗ್ಗೆ ಭಾರತಕ್ಕೆ ತನ್ನದೇ ಆದ ಕಾರ್ಯತಂತ್ರವಿದೆ.

ದೇಶದ ಹಿತಾಸಕ್ತಿಯ ಬಗ್ಗೆ ನಮಗೆ ತಿಳಿದಿದೆ ಎಂದವರು ಹೇಳಿದರು. ಭಾರತ ಎಂದಿಗೂ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ದೇಶದ ಅಗತ್ಯಗಳಿಗೆ ಅನುಸಾರವಾಗಿ ತೈಲವನ್ನು ಯಾರು ಪೂರೈಸುತ್ತಾರೆಯೋ ಅವರಿಂದ ಖರೀದಿಸಲು ಭಾರತ ಸ್ವತಂತ್ರವಾಗಿದೆ. ನಮ್ಮದು ಮುಕ್ತ ಮಾರುಕಟ್ಟೆ ವ್ಯವಸ್ಥೆಯಾಗಿದೆ. ನಮ್ಮ ತೈಲ ಮಾರುಕಟ್ಟೆ ಸಂಸ್ಥೆಗಳು ಹಾಗೂ ಖಾಸಗಿ ಸಂಸ್ಥೆಗಳು ದೇಶದ ಯಾವುದೇ ಭಾಗದಿಂದ ತೈಲ ಖರೀದಿಸಲು ಸ್ವತಂತ್ರವಾಗಿವೆ. ಇಲ್ಲಿ ದೇಶದ ಸಾಮಾನ್ಯ ಹಿತಾಸಕ್ತಿಯ ರಕ್ಷಣೆಯೇ ಪ್ರಮುಖವಾಗಿದೆ ಎಂದು ಪ್ರಧಾನ್ ಹೇಳಿದರು.

2020ರ ಎಪ್ರಿಲ್-ಮೇ ಅವಧಿಯಲ್ಲಿ ಭಾರತ 16.71 ಮಿಲಿಯನ್ ಬ್ಯಾರಲ್ ಕಚ್ಛಾತೈಲವನ್ನು ಖರೀದಿಸಿ ಆಂಧ್ರಪ್ರದೇಶದ ವಿಶಾಖಪಟ್ಟಣಂ, ಕರ್ನಾಟಕದ ಮಂಗಳೂರು ಮತ್ತು ಪಾದೂರು ತೈಲ ಸಂಗ್ರಹಾಗಾರಗಳಲ್ಲಿ ಶೇಖರಿಸಿಟ್ಟಿದೆ. ಇತ್ತೀಚೆಗೆ ತೈಲ ದರ ಗಗನಕ್ಕೇರಿದ ಹಿನ್ನೆಲೆಯಲ್ಲಿ , ತೈಲ ಸರಬರಾಜು ನಿರ್ಬಂಧವನ್ನು ಸಡಿಲಗೊಳಿಸಿ ಕಚ್ಛಾ ತೈಲದ ಬೆಲೆ ಇಳಿಸುವಂತೆ ಭಾರತವು ಒಪೆಕ್ (ತೈಲ ರಫ್ತು ದೇಶಗಳ ಒಕ್ಕೂಟ) ದೇಶಗಳಿಗೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸೌದಿ ಅರೇಬಿಯಾದ ಇಂಧನ ಸಚಿವರು, ಕಚ್ಛಾತೈಲ ಬೆಲೆ ಕಡಿಮೆಯಾಗಿದ್ದಾಗ ಖರೀದಿಸಿ ತೈಲ ಸಂಗ್ರಹಾಗಾರಗಳಲ್ಲಿ ದಾಸ್ತಾನಿರಿಸಿರುವ ತೈಲವನ್ನು ಬಳಸುವಂತೆ ಭಾರತಕ್ಕೆ ಸಲಹೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X