Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನತಾ ಕರ್ಫ್ಯೂ ಜಗತ್ತಿನ ಜನರಿಗೆ...

ಜನತಾ ಕರ್ಫ್ಯೂ ಜಗತ್ತಿನ ಜನರಿಗೆ ʼಸ್ಫೂರ್ತಿಯಾಗಿʼ ಮಾರ್ಪಟ್ಟಿತು: ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿ ಮೋದಿ

"ಚಪ್ಪಾಳೆ ತಟ್ಟಿದ್ದು ಮತ್ತು ಪಾತ್ರೆಗಳಿಂದ ಶಬ್ಧ ಮಾಡಿದ್ದನ್ನು ಹಲವರು ಪ್ರಶಂಸಿಸಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ28 March 2021 12:00 PM IST
share
ಜನತಾ ಕರ್ಫ್ಯೂ ಜಗತ್ತಿನ ಜನರಿಗೆ ʼಸ್ಫೂರ್ತಿಯಾಗಿʼ ಮಾರ್ಪಟ್ಟಿತು: ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿ ಮೋದಿ

ಹೊಸದಿಲ್ಲಿ: ಕೊರೋನ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ದೇಶವು ಕೈಗೊಂಡಿರುವ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ. 'ಮನ್ ಕಿ ಬಾತ್' ನ 75 ನೇ ಆವೃತ್ತಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನತಾ ಕರ್ಫ್ಯೂ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿದರು.

"ಕಳೆದ ಮಾರ್ಚ್ ನಲ್ಲಿ ರಾಷ್ಟ್ರವು ಜನತಾ ಕರ್ಫ್ಯೂ ಕೈಗೊಂಡಿತ್ತು. ಮೊದಲಿನಿಂದಲೂ ಭಾರತದ ಜನರು ಕೋವಿಡ್ -19 ವಿರುದ್ಧ ಉತ್ಸಾಹಭರಿತ ಹೋರಾಟ ನಡೆಸಿದ್ದಾರೆ" ಎಂದು ಪ್ರಧಾನಿ ಮೋದಿ ಮಾಸಿಕ ರೇಡಿಯೋ ಭಾಷಣದಲ್ಲಿ ಹೇಳಿದರು.

ಭಾರತದ ಜನರು ನಡೆಸಿದ ಜನತಾ ಕರ್ಫ್ಯೂ ನಂತರ ಜಗತ್ತಿಗೆ ಸ್ಫೂರ್ತಿಯಾಯಿತು ಎಂದು ಅವರು ಹೇಳಿದರು.

"ಮುಂಚೂಣಿ ಕಾರ್ಮಿಕರನ್ನು ಗೌರವಿಸುವ ಸಲುವಾಗಿ ಚಪ್ಪಾಳೆ ತಟ್ಟುವ ಮತ್ತು ಪಾತ್ರೆಗಳಿಂದ ಶಬ್ಧ ಮಾಡಿದ್ದನ್ನು ಎಲ್ಲ ಆರೋಗ್ಯ ಕಾರ್ಯಕರ್ತರು ವ್ಯಾಪಕವಾಗಿ ಪ್ರಶಂಸಿಸಿದ್ದಾರೆ" ಎಂದು ಮೋದಿ ಹೇಳಿದರು.

"ಕಳೆದ ವರ್ಷ ಈ ಸಂದರ್ಭದಲ್ಲಿ, ಕೋವಿಡ್ -19 ಗೆ ಲಸಿಕೆ ನೀಡಬಹುದೇ ಮತ್ತು ಅದನ್ನು ಯಾವಾಗ ಹೊರತರಲಾಗುವುದು ಎಂಬ ಪ್ರಶ್ನೆ ಇತ್ತು. ಇಂದು, ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ" ಎಂದು ಅವರು ಹೇಳಿದರು.

ಜನತಾ ಕರ್ಫ್ಯೂ 2020 ರ ಮಾರ್ಚ್ 22 ರಂದು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ 14 ಗಂಟೆಗಳ ಕಾಲ ಸ್ವಯಂ ಹೇರಿದ ಕರ್ಫ್ಯೂ ಆಗಿತ್ತು. ಪ್ರಧಾನಿ ಮೋದಿ ಮನವಿಯ ನಂತರ ಇದನ್ನು ಜಾರಿಗೆ ತರಲಾಯಿತು. ಬಳಿಕ ಅದು ಲಾಕ್‌ ಡೌನ್‌ ಆಗಿ ಮಾರ್ಪಟ್ಟಿತ್ತು.

ಮಿಥಾಲಿ ರಾಜ್, ಸಿಂಧು ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ

  ಭಾರತ ಮಹಿಳಾ ಕ್ರೀಡಾಪಟುಗಳಾದ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿಶ್ಲಾಘಿಸಿದರು,

ಮಾರ್ಚ್ ತಿಂಗಳಲ್ಲಿ ನಾವು ಮಹಿಳಾ ದಿನಾಚರಣೆಯನ್ನು ಆಚರಿಸುತ್ತೇವೆ. ಹಲವು ಮಹಿಳಾ ಆಟಗಾರ್ತಿಯರು ತಮ್ಮ ಹೆಸರಲ್ಲಿ ದಾಖಲೆಗಳನ್ನು ಹಾಗೂ ಪದಕಗಳನ್ನು ಗಳಿಸಿದ್ದಾರೆ. ದಿಲ್ಲಿಯಲ್ಲಿ ನಡೆದಿದ್ದ ಐಎಸ್ ಎಸ್ ಎಫ್ ವಿಶ್ವಕಪ್ ಶೂಟಿಂಗ್ ನಲ್ಲಿ ಭಾರತವು ಅಗ್ರಸ್ಥಾನ ಪಡೆದಿತ್ತು. ಚಿನ್ನದ ಪದಕ ಗೆಲ್ಲುವಲ್ಲಿಯೂ ಭಾರತ ಅಗ್ರಸ್ಥಾನ ಗಳಿಸಿತ್ತು ಎಂದು ಮೋದಿ ಹೇಳಿದರು.

ಅಂತರ್‍ರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000 ರನ್ ಗಳಿಸಿದ ಸಾಧನೆ ಮಾಡಿರುವ ಭಾರತೀಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ, ಬಿಡಬ್ಲುಎಫ್ ಸ್ವಿಸ್ ಓಪನ್ ಸೂಪರ್ 300 ಟೂರ್ನಮೆಂಟ್ ನಲ್ಲಿ ಪಿ.ವಿ. ಸಿಂಧು ಬೆಳ್ಳಿ ಪದಕವನ್ನು ಜಯಿಸಿದ್ದಕ್ಕೂ ಅಭಿನಂದನೆ ಸಲ್ಲಿಸಿದ್ದಾರೆ. ಭಾರತೀಯ ಮಹಿಳೆಯರು ವಿಜ್ಞಾನ, ಕ್ರೀಡೆಗಳು ಹಾಗೂ ಇತರ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X