Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಕೆಶಿಗೆ ರಮೇಶ್ ಜಾರಕಿಹೊಳಿ...

ಡಿಕೆಶಿಗೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಪ್ಪು ಬಾವುಟ ಪ್ರದರ್ಶನ: ಬೆಂಗಾವಲು ವಾಹನಕ್ಕೆ ಚಪ್ಪಲಿ, ಕಲ್ಲು ತೂರಾಟ

ಪೊಲೀಸರಿಂದ ಲಾಠಿ ಚಾರ್ಜ್

ವಾರ್ತಾಭಾರತಿವಾರ್ತಾಭಾರತಿ28 March 2021 6:43 PM IST
share
ಡಿಕೆಶಿಗೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಪ್ಪು ಬಾವುಟ ಪ್ರದರ್ಶನ: ಬೆಂಗಾವಲು ವಾಹನಕ್ಕೆ ಚಪ್ಪಲಿ, ಕಲ್ಲು ತೂರಾಟ

ಬೆಳಗಾವಿ, ಮಾ. 28: ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಸಿಕ್ಕರೆ, ಮತ್ತೊಂದೆಡೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲು ವಾಹನದ ಮೇಲೆ ಚಪ್ಪಲಿ, ಕಲ್ಲು ತೂರುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. 

ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ಕೋರಿದರು. ಈ ಮಧ್ಯೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನಕ್ಕೆ ಚಪ್ಪಲಿ ತೂರಿದ ಘಟನೆ ವರದಿಯಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಬೇಕಾಯಿತು.

ಒಂದೆಡೆ ಸ್ವಾಗತ, ಮತ್ತೊಂದೆಡೆ ಪ್ರತಿಭಟನೆ ಹಿನ್ನೆಲೆಯಲ್ಲಿ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ಶಿವಕುಮಾರ್ ಬೆಂಬಲಿಗರು ನೆರೆದಿದ್ದರು. ಆದರೆ, ಈ ನಡುವೆ ಕೆಲ ಕಿಡಿಗೇಡಿಗಳು ಶಿವಕುಮಾರ್ ಕಾರಿಗೆ ಚಪ್ಪಲಿ ತೂರಿದ್ದು ಕಾಂಗ್ರೆಸಿಗರನ್ನು ಕೆರಳಿಸಿದೆ. ಎರಡು ಕಡೆಯವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದೇ ವೇಳೆ ಭದ್ರತೆಗಾಗಿ ದೊಡ್ಡಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ನನ್ನ ಸ್ವಾಗತಕ್ಕೆ ಅಭಿನಂದನೆ: ‘ರಮೇಶ್ ಜಾರಕಿಹೊಳಿ ಬೆಂಬಲಿಗರು ನನ್ನನ್ನು ಬೆಳಗಾವಿ ಜಿಲ್ಲೆಗೆ ಸ್ವಾಗತ ಮಾಡುತ್ತಿದ್ದಾರೆ. ಅವರೆಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರು ನನ್ನನ್ನು ಸ್ವಾಗತ ಮಾಡುವ ಮೂಲಕ ನನಗೆ ಶಕ್ತಿ ತುಂಬುತ್ತಿದ್ದಾರೆ. ಎಂತೆಂಥ ಘನ ಕಾರ್ಯ ಮಾಡಿದ್ದಾರೆಂದು ಪ್ರತಿಭಟನೆ ಮಾಡ್ತಿದ್ದಾರೆ' ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ಲೇವಡಿ ಮಾಡಿದರು.

ಒಳ್ಳೆಯ ಅಭ್ಯರ್ಥಿ: ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಉಪಚುನಾವಣೆ ಆಕಸ್ಮಿಕವಾಗಿ ಬಂದಿದೆ. ಈ ಚುನಾವಣೆ ಬರಬಾರದಿತ್ತು, ಬಂದಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುತ್ತಿದೆ. ನಾವೆಲ್ಲರೂ ಸೇರಿ ಒಂದೇ ಒಂದು ಅಭ್ಯರ್ಥಿಯನ್ನು ಸೂಚಿಸಿದ್ದೇವೆ. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಜನ ಬೆಂಬಲವಾಗಿ ನಿಂತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಸತೀಶ್ ಜಾರಕಿಹೊಳಿ ಅವರು ಎಲ್ಲದಕ್ಕೂ ಹೊಂದಿಕೊಂಡು ಬಾಳುವ ಸೌಮ್ಯ, ಸಜ್ಜನ ಅಭ್ಯರ್ಥಿ. ರಾಜ್ಯದಲ್ಲಿ ಬಿಜೆಪಿ 25 ಮಂದಿ ಸಂಸದರಿದ್ದರೂ ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳ ವಿರುದ್ಧ, ಜನತೆ ಪರವಾಗಿ ಒಮ್ಮೆಯೂ ಧ್ವನಿ ಎತ್ತಲಿಲ್ಲ. ಅಲ್ಲದೆ, ಬಿಜೆಪಿ ನುಡಿದಂತೆ ನಡೆಯಲಿಲ್ಲ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೊರೋನ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಬಿಜೆಪಿ ಸರಕಾರ ನಡೆದುಕೊಳ್ಳಲಿಲ್ಲ. ರಿಕ್ಷಾ ಚಾಲಕರು, ಮಡಿವಾಳರು, ನೇಕಾರರು ಸೇರಿದಂತೆ ಯಾರೊಬ್ಬರಿಗೂ ಬಿಡಿಗಾಸು ನೆರವು ನೀಡಲಿಲ್ಲ. 15 ಲಕ್ಷ ರೂ. ಪ್ರತಿಯೊಬ್ಬರ ಖಾತೆಗೆ ಹಾಕ್ತೀವಿ ಅಂದ್ರು ಹಾಕಲಿಲ್ಲ. ಅಡುಗೆ ಅನಿಲ 900 ರೂ., ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆಯಿಂದ ಹೆಣ್ಣು ಮಕ್ಕಳು ಸೇರಿದಂತೆ ಜನತೆ ಕುದಿಯುತ್ತಿದ್ದಾರೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ನಾನು ಬೆಳಗಾವಿಗೆ ಆಗಮಿಸಿದ್ದೇನೆ. ನಾಳೆ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಎಂ.ಬಿ. ಪಾಟೀಲ್, ಆರ್.ವಿ.ದೇಶಪಾಂಡೆ ಸೇರಿದಂತೆ ಜಿಲ್ಲೆಯ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

‘ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೋಟೆಲ್‍ಗೆ ತೆರಳುವ ವೇಳೆ ಅವರ ಬೆಂಗಾವಲು ವಾಹನದ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರೆನ್ನಲಾದ ಕೆಲ ಕಿಡಿಗೇಡಿಗಳು ಚಪ್ಪಲಿ, ಕಲ್ಲು ತೂರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಇದರಿಂದ ವಾಹನದ ಗಾಜು ಪುಡಿಯಾಗಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಗೊತ್ತಾಗಿದೆ'

ರಾಜ್ಯದ ಜನರ ಪಾಡೇನು: ಸಿದ್ದರಾಮಯ್ಯ

‘ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ಸರಕಾರದ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ, ಎಚ್ಚರ ಇರಲಿ. ಬಿಜೆಪಿ ಆಳ್ವಿಕೆಯಲ್ಲಿ ವಿಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ, ಸಾಮಾನ್ಯ ಜನರ ಪಾಡೇನು? ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ ‘ಮೂಕನಾಟಕ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

‘ರಾಜಕಾರಣದಲ್ಲಿ ಜೈಕಾರ, ಹೂವಿನಹಾರ, ಧಿಕ್ಕಾರ, ಮೊಟ್ಟೆ, ಕಲ್ಲು ಎಸೆತ ಎಲ್ಲವೂ ಸರ್ವೇಸಾಮಾನ್ಯ. ನಾನು ಬರುವಾಗ ಏನಾಯಿತು? ಎಂದು ನನಗೆ ಗೊತ್ತಿಲ್ಲ. ನಾನು ಇದನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತೇನೆ. ಎಲ್ಲ ಘಟನೆಗಳನ್ನು ಬೆಳಗಾವಿ ಜನರು ನೋಡುತ್ತಿದ್ದಾರೆ. ನಾವು ಚುನಾವಣೆ ಮಾಡಲು ಇಲ್ಲಿಗೆ ಬಂದಿದ್ದೇವೆ. ಶಾಂತ ರೀತಿಯಿಂದ ಚುನಾವಣೆ ಮಾಡಿ ಹೋಗುತ್ತೇವೆ. ಬಿಜೆಪಿಯವರು ಇಂಥ ಮುತ್ತು-ರತ್ನಗಳನ್ನು ತಮ್ಮ ಬಳಿ ಇಟ್ಟುಕೊಳ್ಳಲಿ. ಅವರೇನೇ ಮಾಡಿದರೂ ನಮಗೆ ಅನುಕೂಲ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X