Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜೆ ಅಣೆಕಟ್ಟಿನಲ್ಲಿ 5.26ಮೀಟರ್ ನೀರಿನ...

ಬಜೆ ಅಣೆಕಟ್ಟಿನಲ್ಲಿ 5.26ಮೀಟರ್ ನೀರಿನ ಸಂಗ್ರಹ: ಜೂನ್ ತಿಂಗಳವರೆಗೆ ನೀರು ಪೂರೈಸಲು ಕಾರ್ಯ ಯೋಜನೆ

ವಾರ್ತಾಭಾರತಿವಾರ್ತಾಭಾರತಿ28 March 2021 8:38 PM IST
share
ಬಜೆ ಅಣೆಕಟ್ಟಿನಲ್ಲಿ 5.26ಮೀಟರ್ ನೀರಿನ ಸಂಗ್ರಹ: ಜೂನ್ ತಿಂಗಳವರೆಗೆ ನೀರು ಪೂರೈಸಲು ಕಾರ್ಯ ಯೋಜನೆ

ಉಡುಪಿ, ಮಾ. 28: ಬಿಸಿಲಿನ ಝಳ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಗ್ರಾಪಂ ಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಅನುಸಾರ ಜೂನ್ ತಿಂಗಳವರೆಗೆ ನೀರು ಪೂರೈಸಲು ಅಧಿಕಾರಿಗಳು ಕಾರ್ಯ ಯೋಜನೆಗಳನ್ನು ರೂಪಿಸಿದ್ದಾರೆ.

ಮಾ.28ರಂದು ಬಜೆ ಅಣೆಕಟ್ಟಿನಲ್ಲಿ 5.26ಮೀಟರ್ ನೀರಿನ ಸಂಗ್ರಹ ಇದ್ದು, ಕಳೆದ ವರ್ಷ ಇದೇ ದಿನ ಬಜೆಯಲ್ಲಿ ನೀರಿನ ಸಂಗ್ರಹ 5.04 ಮೀಟರ್ ನಷ್ಟಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ನೀರಿನ ಸಂಗ್ರಹ 21ಸೆ.ಮೀಟರ್‌ನಷ್ಟು ಹೆಚ್ಚಿದೆ.

6 ದಿನಗಳ ಹೆಚ್ಚುವರಿ ನೀರು: ಪ್ರಸ್ತುತ ಶಿರೂರಿನಲ್ಲಿ ಒಳ ಹರಿವು ಈಗಲೂ ಮುಂದುವರೆದಿದ್ದು, ಸದ್ಯಕ್ಕೆ ಶಿರೂರು ಮತ್ತು ಬಜೆ ಅಣೆಕಟ್ಟಿನಲ್ಲಿರುವ ನೀರಿನ ಸಂಗ್ರಹದಲ್ಲಿ ಮುಂದಿನ 58-60 ದಿನಗಳ ನೀರು ಪೂರೈಕೆ ಮಾಡ ಬಹುದು ಎಂಬುದು ನಗರಸಭೆ ಅಧಿಕಾರಿಗಳ ಲೆಕ್ಕಚಾರ ಆಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿ ಲೆಕ್ಕಚಾರ ಹಾಕಿದರೆ ಈ ಎರಡು ಕಡೆಗಳಲ್ಲಿ 6-7 ದಿನಗಳ ಹೆಚ್ಚುವರಿ ನೀರಿನ ಸಂಗ್ರಹ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿದಿನ ಪಂಪಿಂಗ್ ಮಾಡಿ ಪೂರೈಕೆ ಮಾಡಿದರೂ 58-60 ದಿನಗಳಿಗೆ ಬೇಕಾಗುವಷ್ಟು ನೀರಿನ ಸಂಗ್ರಹವು ಬಜೆ ಡ್ಯಾಂನಲ್ಲಿದೆ. ಅಂದರೆ ಮೇ ಅಂತ್ಯ ದವರೆಗೂ ನೀರು ನೀಡಬಹುದಾಗಿದೆ. ಕಳೆದ ವರ್ಷ ಮೇ 18ಕ್ಕೆ ಮಳೆ ಬಂದಿದ್ದು, ಈ ವರ್ಷ ಮೇ 25 ಒಳಗಡೆ ಮಳೆ ಬಂದರೂ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದು ಅಧಿಕಾರಿಗಳ ವಿಶ್ವಾಸ.

ಈಗ ಇರುವ ನೀರಿನ ಸಂಗ್ರಹ 5.26 ಮೀಟರ್‌ನಲ್ಲಿ 1.26 ಡೆಡ್ ಸ್ಟೋರೇಜ್ ಆಗಿದೆ. ಅಂದರೆ ಇಲ್ಲಿರುವ 400ಸೆ.ಮೀಟರ್‌ನಷ್ಟು ಮಾತ್ರ ನೀರನ್ನು ಪಂಪ್ ಮಾಡಲು ಸಾಧ್ಯ. ದಿನಕ್ಕೆ 10ಸೆ.ಮೀಟರ್‌ನಷ್ಟು ನೀರು ಪಂಪಿಂಗ್ ಮಾಡಿದರೂ 40ದಿನಗಳ ನೀರು ಪಂಪ್ ಮಾಡಬಹುದು. ನಮ್ಮಲ್ಲಿ ದಿನಕ್ಕೆ ನೀರು ಖರ್ಚಗುವುದು 6.7 ಸೆ.ಮೀ. ನೀರು ಮಾತ್ರ. ಆ ರೀತಿ ಲೆಕ್ಕಚಾರ ಹಾಕಿದರೆ ನಮ್ಮಲ್ಲಿ 60 ದಿನಗಳಿಗೆ ಬೇಕಾಗುವಷ್ಟು ನೀರಿನ ಸಂಗ್ರಹ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಪಿಂಗ್‌ಗೆ ಟೆಂಡರ್: ಒಂದು ವೇಳೆ ಜೂನ್ ತಿಂಗಳಲ್ಲಿ ಮಳೆ ಬರು ವುದು ವಿಳಂಬವಾದರೆ ಬಜೆಯಿಂದ ಶಿರೂರುವರೆಗೆ ಸಾಣೆಕಲ್ಲು, ಪುತ್ತಿಗೆ, ಬ್ರಹ್ಮ ಹೊಂಡ, ಶಿರೂರು ಮಠ, ಭಂಡಾರಿಬೆಟ್ಟು ಸೇರಿದಂತೆ 7-8 ಕಡೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳಲ್ಲಿರುವ ನೀರನ್ನು ಬಳಸಿಕೊಳ್ಳಲಾಗುತ್ತದೆ.

ಈ ಹೊಂಡಗಳಲ್ಲಿ 10 ದಿನಗಳಿಗೆ ಬೇಕಾಗುವಷ್ಟು ನೀರಿನ ಸಂಗ್ರಹ ಇವೆ. ಈ ನೀರನ್ನು ಪಂಪಿಂಗ್ ಮಾಡಿ ಹರಿಯುವಂತೆ ಮಾಡಲು ಈಗಲೇ ಟೆಂಡರ್ ಕರೆದು ಸಿದ್ಧವಾಗಿಟ್ಟುಕೊಳ್ಳಲು ನಗರಸಭೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಕಳೆದ ವರ್ಷ ಬೇಸಿಗೆಯಲ್ಲಿ ನಗರಸಭೆಯಿಂದ ಪ್ರತಿದಿನ ನೀರು ಪೂರೈಕೆ ಮಾಡಿದ್ದೇವೆ. ಈ ಬಾರಿ ಕೂಡ ನೀರು ಪೂರೈಕೆ ಮಾಡಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಬಾರಿ ಜನವರಿ ತಿಂಗಳಲ್ಲಿಯೇ ಬಜೆಯಲ್ಲಿ ಎರಡು ಕಡೆಗಳಲ್ಲಿ, ಶಿರೂರುನಲ್ಲಿ ಒಂದು ಕಡೆಗಳಲ್ಲಿ ಡ್ಯಾಂ ಕಟ್ಟಲಾಗಿದೆ. ಹೀಗೆ ಜನವರಿಯಲ್ಲಿಯೇ ನೀರಿನ ಸಂಗ್ರಹ ಇಟ್ಟು ಮುನ್ನೆಚ್ಚರಿಕೆ ವಹಿಸಿದ್ದೇವೆ ಎಂದು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್ ತಿಳಿಸಿದ್ದಾರೆ.

ಶಾಸಕ ರಘುಪತಿ ಭಟ್‌ರಿಂದ ಪರಿಶೀಲನೆ

ಶಿರೂರು ಡ್ಯಾಮ್ ಹಾಗೂ ಬಜೆ ಡ್ಯಾಮ್ಗೆ ಶಾಸಕ ಕೆ.ರಘುಪತಿ ಭಟ್ ರವಿವಾರ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಮಟ್ಟವನ್ನು ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ನೀರಿನ ಮಟ್ಟ ಇಳಿಮುಖವಾಗಲಿರುವುದರಿಂದ ನೀರಿನ ಪಂಪಿಂಗ್ ಹಾಗೂ ನೀರಿನ ಪೂರೈಕೆಗೆ ಬೇಕಾಗುವ ಪೂರ್ವ ತಯಾರಿ ಯನ್ನು ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸದಸ್ಯ ಮಂಜುನಾಥ್ ಮಣಿಪಾಲ್, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ರಾಜ್, ಅಭಿಯಂತರ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X