Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ...

ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಕೇರಳ ಸರಕಾರ ಮುಂದಾಗಿದ್ದು ದುರದೃಷ್ಟಕರ: ರಾಜನಾಥ್‌ ಸಿಂಗ್

"ಎಲ್ಡಿಎಫ್‌ ಮತ್ತು ಯುಡಿಎಫ್‌ ಹಿಡಿತದಲ್ಲಿರುವುದೇ ಕೇರಳ ಹಿಂದುಳಿಯಲು ಕಾರಣ"

ವಾರ್ತಾಭಾರತಿವಾರ್ತಾಭಾರತಿ28 March 2021 8:53 PM IST
share
ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಕೇರಳ ಸರಕಾರ ಮುಂದಾಗಿದ್ದು ದುರದೃಷ್ಟಕರ: ರಾಜನಾಥ್‌ ಸಿಂಗ್

ತಿರುವನಂತಪುರ,ಮಾ.28: ಚಿನ್ನ ಮತ್ತು ಡಾಲರ್ ಕಳ್ಳಸಾಗಾಣಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಈ.ಡಿ) ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಶಿಫಾರಸು ಮಾಡುವ ಕೇರಳ ಸರಕಾರದ ನಿರ್ಧಾರವು ದುರದೃಷ್ಟಕರವಾಗಿದೆ ಮತ್ತು ಸಂವಿಧಾನದ ಒಕ್ಕೂಟ ಸ್ವರೂಪಕ್ಕೆ ಒಂದು ಸವಾಲು ಆಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರವಿವಾರ ಇಲ್ಲಿ ಹೇಳಿದರು. ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯ ಬಗ್ಗೆ ನಮ್ಮ ನಿಲುವು ದೃಢವಾಗಿದ್ದು,ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕವೇ ಅದನ್ನು ಜಾರಿಗೊಳಿಸಲಾಗುವುದು ಎಂದೂ ಅವರು ಹೇಳಿದರು. ಬಿಜೆಪಿಯ ಚುನಾವಣಾ ಪ್ರಣಾಳಿಕೆಯು ಯುಸಿಸಿಯನ್ನು ಒಳಗೊಂಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಎನ್ಡಿಎ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಕೇರಳದಲ್ಲಿರುವ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಹೆಚ್ಚುತ್ತಿರುವ ಇಂಧನ ಬೆಲೆಗಳ ಕುರಿತಂತೆ ಅವರು,ಪೆಟ್ರೋಲ್ ಮೇಲಿನ ತೆರಿಗೆಯನ್ನು ತಗ್ಗಿಸುವಂತೆ ಕೇಂದ್ರವು ಎಲ್ಲ ರಾಜ್ಯಗಳಿಗೆ ಮನವಿ ಮಾಡಿಕೊಂಡಿದೆ ಎಂದರು. ಕಳ್ಳಸಾಗಾಣಿಕೆ ಪ್ರಕರಣಗಳ ಕುರಿತಂತೆ ಸಿಂಗ್,ಈ.ಡಿ.ಪ್ರಕರಣದ ತನಿಖೆಯನ್ನು ನಡೆಸುತ್ತಿದೆ ಮತ್ತು ಅದರ ವಿರುದ್ಧ ವಿಚಾರಣೆಗಾಗಿ ನ್ಯಾಯಾಂಗ ಆಯೋಗವೊಂದನ್ನು ನೇಮಿಸಲಾಗಿದೆ ಎಂದು ತನಗೆ ತಿಳಿದುಬಂದಿದೆ. ಇದು ಅತ್ಯಂತ ದುರದೃಷ್ಟಕರವಾಗಿದೆ. ಇದರರ್ಥ ರಾಜ್ಯ ಸರಕಾರವು ಸಂವಿಧಾನದ ಒಕ್ಕೂಟ ಸ್ವರೂಪವನ್ನು ಪ್ರಶ್ನಿಸುತ್ತಿದೆ ಮತ್ತು ಇದು ಸಂವಿಧಾನಕ್ಕೆ ಶೇ.100ರಷ್ಟು ವಿರುದ್ಧವಾಗಿದೆ ಎಂದರು.

ಕೇರಳ ಕ್ರೈಂ ಬ್ರಾಂಚ್ ಈ.ಡಿ.ಯ ಕೆಲವು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ ಬಳಿಕ ಸಿಪಿಎಂ ನೇತೃತ್ವದ ಎಲ್ಡಿಎಫ್ ಸರಕಾರವು ಈ.ಡಿ.ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ವಿಚಾರಣೆಗೆ ಆದೇಶಿಸಲು ನಿರ್ಧರಿಸಿತ್ತು. ಈ.ಡಿ. ಚಿನ್ನ ಕಳ್ಳಸಾಗಾಣಿಕೆ ಮತ್ತು ಡಾಲರ್ ಹಗರಣಗಳಲ್ಲಿ ತನಿಖೆಯ ದಾರಿಯನ್ನು ತಪ್ಪಿಸುತ್ತಿದೆ ಎನ್ನುವುದು ಅದರ ಆರೋಪವಾಗಿದೆ.

ಚಿನ್ನದ ಹಗರಣವು 2020 ಜುಲೈನಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕರಿಗೆ ಸೇರಿದ ಲಗೇಜ್ನಿಂದ 14.82 ಕೋ.ರೂ.ಮೌಲ್ಯದ ಸುಮಾರು 30 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಕ್ಕೆ ಸಂಬಂಧಿಸಿದ್ದರೆ ಡಾಲರ್ ಹಗರಣವು ತಿರುವನಂತಪುರದಲ್ಲಿಯ ಯುಎಇ ದೂತಾವಾಸದ ಮಾಜಿ ಹಣಕಾಸು ಮುಖ್ಯಸ್ಥರಿಂದ ಓಮಾನ್ ನ ಮಸ್ಕತ್ ಗೆ 1,90,000 ಅಮೆರಿಕನ್ ಡಾಲರ್ (ಸುಮಾರು 1.30 ಕೋ.ರೂ)ಗಳ ಕಳ್ಳ ಸಾಗಾಣಿಕೆ ಆರೋಪಕ್ಕೆ ಸಂಬಂಧಿಸಿದೆ. ಈ.ಡಿ.ಯ ಜೊತೆಗೆ ಕಸ್ಟಮ್ಸ್ ಮತ್ತು ಎನ್ಐಎ ಕೂಡ ಈ ಹಗರಣಗಳ ಕುರಿತು ತನಿಖೆ ನಡೆಸುತ್ತಿವೆ.
 
ಎಲ್ಡಿಎಫ್ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಿರುದ್ಧ ದಾಳಿ ನಡೆಸಿದ ಸಿಂಗ್,‘ಶೇ.100ರಷ್ಟು ಸಾಕ್ಷರತೆಯನ್ನು ಹೊಂದಿದ್ದರೂ ಹಲವಾರು ಕ್ಷೇತ್ರಗಳಲ್ಲಿ ಕೇರಳವು ಇತರ ರಾಜ್ಯಗಳಿಗಿಂತ ಹಿಂದುಳಿದಿದೆ. ದೇಶಕ್ಕೆ ಸ್ವಾತಂತ್ರ ದೊರಕಿ ಏಳು ದಶಕಗಳು ಕಳೆದಿದ್ದರೂ ಎಲ್ಡಿಎಫ್ ಮತ್ತು ಯುಡಿಎಫ್ ಹಿಡಿತಗಳಿಂದ ರಾಜ್ಯವು ಹೊರಬರದಿರುವದು ಇದಕ್ಕೆ ಮುಖ್ಯ ಕಾರಣವಾಗಿದೆ. ರಾಜ್ಯಕ್ಕೆ ನೂತನ ರಾಜಕೀಯ ಪರ್ಯಾಯದ ಅಗತ್ಯವಿದೆ ಮತ್ತು ಬಿಜೆಪಿ ಮಾತ್ರ ಅದನ್ನು ನೀಡಬಲ್ಲದು. ಯುಡಿಎಫ್ ಮತ್ತು ಎಲ್ಡಿಎಫ್ ಸ್ನೇಹಪರ ಪಂದ್ಯಗಳನ್ನು ಆಡುತ್ತಿವೆ. ಅವೆರಡರ ಪೈಕಿ ಒಂದು ಪಂದ್ಯವನ್ನು ಗೆಲ್ಲುತ್ತದೆ,ಆದರೆ ಜನರು ಸೋಲನ್ನನುಭವಿಸುತ್ತಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಕಾದಾಡುತ್ತಿದ್ದಾರೆ,ಆದರೆ 2,000 ಕಿ.ಮೀ.ದೂರದಲ್ಲಿ ಅವು ಒಂದಾಗಿ ನಮ್ಮ ವಿರುದ್ಧ ಹೋರಾಡುತ್ತಿವೆ’ ಎಂದರು.
 
ಎರಡೂ ರಂಗಗಳು ಸುಳ್ಳು ಭರವಸೆಗಳನ್ನು ನೀಡುತ್ತಿವೆ ಮತ್ತು ಕೇರಳದ ಜನತೆಯ ಆಕಾಂಕ್ಷೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲಗೊಂಡಿವೆ. ಇವರಡೂ ರಂಗಗಳ ತುಷ್ಟೀಕರಣ ನೀತಿಗಳು ಕೇರಳವನ್ನು ಅಭಿವೃದ್ಧಿ ಪಥದಿಂದ ದೂರಕ್ಕೊಯ್ದಿವೆ ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧವೂ ಹರಿಹಾಯ್ದ ಸಿಂಗ್,ದಿಲ್ಲಿಯಲ್ಲಿ ಮೀನುಗಾರರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ರೂಪಿಸುವುದಾಗಿ ಅವರು ಯಾವಾಗಲೂ ಭರವಸೆ ನೀಡುತ್ತಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು 2019ರಷ್ಟು ಹಿಂದೆಯೇ ಈ ಸಚಿವಾಲಯವನ್ನು ರೂಪಿಸಿರುವುದು ಬಹುಶಃ ಅವರಿಗೆ ಗೊತ್ತಿಲ್ಲ ಎಂದರು.
ರವಿವಾರ ಬೆಳಿಗ್ಗೆ ವರ್ಕಳದಲ್ಲಿ ರೋಡ್ ಶೋ ನಡೆಸಿದ ಸಿಂಗ್ ಕೊಟ್ಟಾಯಂ,ತೃಶ್ಶೂರು ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X