Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಏಕರೂಪ ನಾಗರಿಕ ಸಂಹಿತೆ ಏನೆಂದು...

"ಏಕರೂಪ ನಾಗರಿಕ ಸಂಹಿತೆ ಏನೆಂದು ತಿಳಿಯಬೇಕಾದರೆ ಗೋವಾಕ್ಕೆ ಭೇಟಿ ನೀಡಿ": ಸಿಜೆಐ ಬೋಬ್ಡೆ

ವಾರ್ತಾಭಾರತಿವಾರ್ತಾಭಾರತಿ28 March 2021 8:56 PM IST
share
ಏಕರೂಪ ನಾಗರಿಕ ಸಂಹಿತೆ ಏನೆಂದು ತಿಳಿಯಬೇಕಾದರೆ ಗೋವಾಕ್ಕೆ ಭೇಟಿ ನೀಡಿ: ಸಿಜೆಐ ಬೋಬ್ಡೆ

ಪಣಜಿ,ಮಾ.28: ಗೋವಾದಲ್ಲಿನ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯನ್ನು ಪ್ರಶಂಸಿಸಿರುವ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಎಸ್.ಎ.ಬೋಬ್ಡೆ ಅವರು,ಉದ್ದೇಶಿತ ಕಾನೂನುಗಳ ಬಗ್ಗೆ ಚರ್ಚಿಸುತ್ತಿರುವ ಬುದ್ಧಿಜೀವಿಗಳು ಈ ರಾಜ್ಯಕ್ಕೆ ಭೇಟಿ ನೀಡಿ ಇಲ್ಲಿ ಜಾರಿಯಲ್ಲಿರುವ ನ್ಯಾಯದ ಆಡಳಿತವನ್ನು ನೋಡಬೇಕು ಎಂದು ಹೇಳಿದ್ದಾರೆ.

ಶನಿವಾರ ಇಲ್ಲಿ ಬಾಂಬೆ ಉಚ್ಚ ನ್ಯಾಯಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ.ಬೋಬ್ಡೆ ಅವರು,ಸಂವಿಧಾನ ರಚನೆಕಾರರು ಭಾರತಕ್ಕಾಗಿ ರೂಪಿಸಿದ್ದ ಏಕರೂಪ ನಾಗರಿಕ ಸಂಹಿತೆಯು ಗೋವಾದಲ್ಲಿ ವರ್ಷಗಳಿಂದಲೂ ಜಾರಿಯಲ್ಲಿದೆ. ಮದುವೆ ಮತ್ತು ಉತ್ತರಾಧಿಕಾರ ವಿಷಯಗಳಲ್ಲಿ ಧರ್ಮವನ್ನು ಪರಿಗಣಿಸದೆ ಎಲ್ಲ ಗೋವನ್ನರಿಗೂ ಅದು ಅನ್ವಯಿಸುತ್ತದೆ. ಯುಸಿಸಿಯ ಬಗ್ಗೆ ಬುದ್ಧಿಜೀವಿಗಳ ಚರ್ಚೆಗಳ ಕುರಿತು ತಾನು ಸಾಕಷ್ಟು ಕೇಳಿದ್ದೇನೆ. ಯುಸಿಸಿ ಎಂದರೆ ಏನು ಎನ್ನುವುದನ್ನು ತಿಳಿದುಕೊಳ್ಳಲು ಗೋವಾಕ್ಕೆ ಭೇಟಿ ನೀಡುವಂತೆ ಮತ್ತು ಇಲ್ಲಿಯ ನ್ಯಾಯದ ಆಡಳಿತವನ್ನು ಕಣ್ಣಾರೆ ನೋಡುವಂತೆ ತಾನು ಆ ಎಲ್ಲ ಬುದ್ಧಿಜೀವಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.

ಗೋವಾ ಯುಸಿಸಿ ಜಾರಿಯಲ್ಲಿರುವ ಭಾರತದ ಏಕಮಾತ್ರ ರಾಜ್ಯವಾಗಿದೆ.

ಗೋವಾದಲ್ಲಿ ಕಳೆದ ನಾಲ್ಕೂವರೆ ಶತಮಾನಗಳಿಗೂ ಹೆಚ್ಚು ಕಾಲದಿಂದ ಅಸ್ತಿತ್ವದಲ್ಲಿರುವ ನ್ಯಾಯದ ಆಡಳಿತದ ಪರಂಪರೆಯ ಬಗ್ಗೆಯೂ ಮಾತನಾಡಿದ ನ್ಯಾ.ಬೋಬ್ಡೆ,ಬಾಂಬೆ ಉಚ್ಚ ನ್ಯಾಯಾಲಯದ ಗೋವಾ ಪೀಠವು ಕೇವಲ 30 ವರ್ಷಗಳಷ್ಟು ಹಳೆಯದಾಗಿದ್ದರೂ ಅದು ನ್ಯಾಯಾಂಗ ಶಿಷ್ಟಾಚಾರದ ಅತ್ಯುನ್ನತ ಸಂಪ್ರದಾಯಗಳನ್ನು ಕಾಯ್ದುಕೊಂಡಿರುವುದು ಮಾತ್ರವಲ್ಲ,ಕಾನೂನಿನ ಅಭಿವೃದ್ಧಿಯಲ್ಲಿಯೂ ಮಹತ್ವದ ಕೊಡುಗೆಯನ್ನು ನೀಡಿದೆ ಎಂದರು.

ಮುಂಬೈನಲ್ಲಿ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ನೂತನ ಕಟ್ಟಡದ ಅಗತ್ಯಕ್ಕೆ ಒತ್ತು ನೀಡಿದ ಅವರು, ಅಲ್ಲಿಯ ಕಟ್ಟಡವನ್ನು ಏಳು ನ್ಯಾಯಾಧೀಶರಿಗಾಗಿ ನಿರ್ಮಿಸಲಾಗಿತ್ತು, ಆದರೆ ಅಲ್ಲೀಗ 40ಕ್ಕೂ ಅಧಿಕ ನ್ಯಾಯಾಧೀಶರು ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ ಪ್ರಸಾದ ಮತ್ತು ಭಾವಿ ಸಿಜೆಐ ನ್ಯಾ.ರಮಣ ಅವರು ಗಮನಿಸಲಿದ್ದಾರೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X