Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫುಡ್ ಡೆಲಿವರಿ ಆ್ಯಪ್ ನ ಉದ್ಯೋಗಿಗೆ...

ಫುಡ್ ಡೆಲಿವರಿ ಆ್ಯಪ್ ನ ಉದ್ಯೋಗಿಗೆ ಎನ್‌ಐಎ ಅಧಿಕಾರಿಗಳಿಂದ ಚಿತ್ರಹಿಂಸೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ28 March 2021 9:20 PM IST
share
ಫುಡ್ ಡೆಲಿವರಿ ಆ್ಯಪ್ ನ ಉದ್ಯೋಗಿಗೆ ಎನ್‌ಐಎ ಅಧಿಕಾರಿಗಳಿಂದ ಚಿತ್ರಹಿಂಸೆ:  ಆರೋಪ

ಹೊಸದಿಲ್ಲಿ,ಮಾ.28: ಜಮ್ಮುವಿನಲ್ಲಿ ಫುಡ್ ಡೆಲಿವರಿ ಆ್ಯಪ್ ನ ಉದ್ಯೋಗಿಗೆ ಎನ್ಐಎ ಅಧಿಕಾರಿಯೋರ್ವರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆತನ ಕುಟುಂಬವು ಆರೋಪಿಸಿದ್ದು,ಎನ್ಐಎ ಶನಿವಾರ ಈ ಬಗ್ಗೆ ವಿಚಾರಣೆಗೆ ಆದೇಶಿಸಿದೆ. ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಿ ವರ್ಗಾವಣೆಗೊಳಿಸಲಾಗಿದೆ.

ಮಾದಕ ದ್ರವ್ಯ-ಭಯೋತ್ಪಾದನೆ ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಶುಕ್ರವಾರ ಯುಗರಾಜ್ ಸಿಂಗ್(31)ನನ್ನು ಎನ್ಐಎ ಕರೆಸಿಕೊಂಡಿತ್ತು. ಕಸ್ಟಡಿಯಲ್ಲಿರುವಾಗ ಎನ್ಐಎ ಅಧಿಕಾರಿಯೋರ್ವರು ಆತನನ್ನು ಥಳಿಸಿ ಹಿಂಸಿಸಿದ್ದಾರೆ ಎಂದು ಕುಟುಂಬವು ಆರೋಪಿಸಿದೆ. ತೀವ್ರವಾಗಿ ಗಾಯಗೊಂಡಿರುವ ಸಿಂಗ್ ನನ್ನು ಸರಕಾರಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಸಿಖ್ ಧರ್ಮದ ಸಂಪ್ರದಾಯದಂತೆ ತನ್ನ ಸೋದರಳಿಯ ಕೃಪಾಣ (ಕಿರು ಖಡ್ಗ)ವನ್ನು ಧರಿಸಿದ್ದಕ್ಕಾಗಿ ಎನ್ಐಎ ಅಧಿಕಾರಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ, ಆತನ ತಾಯಿಯನ್ನು ನಿಂದಿಸಿದ್ದಾರೆ. ಆತ ಸಂಪ್ರದಾಯದಂತೆ ಉದ್ದ ಗಡ್ಡ ಬಿಟ್ಟಿದ್ದನ್ನೂ ಅವರು ಪ್ರಶ್ನಿಸಿದ್ದಾರೆ. ಇದರಲ್ಲಿ ಆತನ ಅಪರಾಧವೇನಿತ್ತು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್ ಸೋದರಮಾವ,ನಿವೃತ್ತ ಪೊಲೀಸ್ ಅಧಿಕಾರಿ ಸೇವಕ ಸಿಂಗ್ ಪ್ರಶ್ನಿಸಿದರು.

ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುತ್ತಿಲ್ಲ ಎಂದು ಅವರು ದೂರಿದರು.

ತೀವ್ರ ಗಾಯಗಳಾಗಿರುವ ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ವೀಡಿಯೊವೊಂದನ್ನು ಕುಟುಂಬವು ಬಿಡುಗಡೆಗೊಳಿಸಿದೆ. ಆತನ ತಂದೆ ಕಳೆದ ನಾಲ್ಕು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಆತನೊಬ್ಬನೇ ಕುಟುಂಬದ ಆಧಾರಸ್ತಂಭವಾಗಿದ್ದಾನೆ. ಆತನನ್ನು ಏಕೆ ವಿಚಾರಣೆಗೆ ಕರೆಸಲಾಗಿತ್ತು ಎನ್ನುವುದು ನಮಗೆ ಗೊತ್ತಿಲ್ಲ. ಆತ ಯಾವುದಾದರೂ ಅಪರಾಧದಲ್ಲಿ ಭಾಗಿಯಾಗಿದ್ದರೆ ಚಿತ್ರಹಿಂಸೆ ನೀಡಿದ ಬಳಿಕ ಬಿಡುಗಡೆಗೊಳಿಸಿದ್ದು ಏಕೆ ಎಂದೂ ಸೇವಕ ಸಿಂಗ್ ಪ್ರಶ್ನಿಸಿದರು. ಸಿಂಗ್ ಕುಟುಂಬದ ಆರೋಪವು ನಿಜವೆಂದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಎನ್ಐಎ ಅಧಿಕಾರಿಯೋರ್ವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X