Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೂರು ನೀಡಿದ ದಿನದಿಂದ ಪ್ರಾಣ ಬೆದರಿಕೆ...

ದೂರು ನೀಡಿದ ದಿನದಿಂದ ಪ್ರಾಣ ಬೆದರಿಕೆ ಬರುತ್ತಿವೆ: ಯುವತಿ ಪರ ವಕೀಲ ಜಗದೀಶ್ ಆರೋಪ

ಅಶ್ಲೀಲ ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 March 2021 9:35 PM IST
share
ದೂರು ನೀಡಿದ ದಿನದಿಂದ ಪ್ರಾಣ ಬೆದರಿಕೆ ಬರುತ್ತಿವೆ: ಯುವತಿ ಪರ ವಕೀಲ ಜಗದೀಶ್ ಆರೋಪ

ಬೆಂಗಳೂರು, ಮಾ. 28: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ನಾಳೆ(ಮಾ.29) ನ್ಯಾಯಾಲಯದ ಮುಂದೆ ಹಾಜರಾಗಿ, ತನ್ನ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ ಎಂದು ಯುವತಿ ಪರ ವಕೀಲ ಜಗದೀಶ್ ಕೆ.ಎನ್.ಮಹಾದೇವ್ ತಿಳಿಸಿದ್ದಾರೆ.

ರವಿವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂವಾದ ನಡೆಸಿ, ಮಾಹಿತಿ ಹಂಚಿಕೊಂಡಿರುವ ಅವರು, ಸಿಡಿ ಪ್ರಕರಣದಲ್ಲಿ ಒಂದು ಕಡೆ ಅತ್ಯಾಚಾರ ಪ್ರಕರಣ, ಮತ್ತೊಂದೆಡೆ ಸುಲಿಗೆ ಪ್ರಕರಣ ದಾಖಲಾಗಿವೆ. ಈ ಎರಡೂ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದರು.

ಈ ಪ್ರಕರಣ ದಾಖಲಾದ ನಂತರ ಪೋಷಕರಿಗೆ ಭದ್ರತೆ ಒದಗಿಸುವಂತೆ ಕೋರಲಾಗಿತ್ತು. ಆದರೆ, ಈ ಬಗ್ಗೆ ಸಿಟ್(ವಿಶೇಷ ತನಿಖಾ ದಳ) ಗಮನಹರಿಸಿಲ್ಲ. ಮತ್ತೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಯುತವಾದ ತನಿಖೆ ಆಗಿಲ್ಲ.ಪೊಲೀಸರು ರಾಜಕಾರಣಿಗಳಿಗೆ ತಮ್ಮ ತಲೆ ಬಗ್ಗಿಸಿದ್ದಾರೆ ಎನ್ನುವ ಸಂಶಯ ಬಂದಿದೆ ಎಂದು ಆರೋಪಿಸಿದರು.

ಪ್ರಾಣ ಬೆದರಿಕೆ: ಯುವತಿಗೆ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ. ಆದರೆ, ದೂರು ನೀಡಿದ ದಿನದಿಂದ ಅನೇಕರು ನನ್ನ ಮೊಬೈಲ್‍ಗೆ ಸಂಪರ್ಕಿಸುತ್ತಿದ್ದು, ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ. ಶನಿವಾರ ರಾತ್ರಿಯೂ ಯುವಕನೋರ್ವ ಇಂಟರ್‍ನೆಟ್ ಕರೆ ಮೂಲಕ ಸಂಪರ್ಕಿಸಿ ‘ನಿಮ್ಮ ತಲೆ ಕಡಿಯುತ್ತೇವೆ’ ಎಂದು ಹೆದರಿಸಿದ್ದಾನೆ ಎಂದು ಜಗದೀಶ್ ದೂರಿದರು.

ಬೆದರಿಕೆ ಕರೆಗಳು ಮಾತ್ರವಲ್ಲದೆ, ಕೆಲ ಅಪರಿಚಿತ ವ್ಯಕ್ತಿಗಳು ನಮ್ಮನ್ನು ರಾತ್ರಿ ವೇಳೆ ಹಿಂಬಲಿಸುತ್ತಿದ್ದಾರೆ ಎಂದ ಅವರು, ಈ ಪ್ರಕರಣದಲ್ಲಿ ನಾವು ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ. ಆದರೆ, ಯುವತಿ ಪರ ಇರುವ ವಕೀಲರಿಗೆ ಈ ರೀತಿಯ ಬೆದರಿಕೆ ಕರೆಗಳು ಬಂದಿವೆ. ಹೀಗಿರುವಾಗ, ಸಂತ್ರಸ್ತೆ ನ್ಯಾಯಾಲಯ ಅಥವಾ ತನಿಖಾಧಿಕಾರಿಗಳ ಮುಂದೆ ಹಾಜರಾದರೆ, ರಕ್ಷಣೆ ದೊರೆಯಲಿದೆಯೇ ಎಂದು ಪ್ರಶ್ನಿಸಿದರು.

ಇದೇ ವೇಳೆ ಹಿರಿಯ ನ್ಯಾಯವಾದಿ ಮಂಜುನಾಥ್ ಮಾತನಾಡಿ, ನ್ಯಾಯಾಲಯದಲ್ಲಿ ಇನ್–ಕ್ಯಾಮೆರಾ ಪ್ರಕ್ರಿಯೆ ನಡೆಯಲಿದ್ದು, ಯುವತಿಯ ಹೇಳಿಕೆಗಳು ದಾಖಲಾಗಲಿವೆ. ಆರೋಪಿ ಮತ್ತು ಸಂತ್ರಸ್ತೆ ಆರೋಗ್ಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ನುಡಿದರು.

ಮತ್ತೇ ನೋಟಿಸ್?: ಸಿಡಿ ಪ್ರಕರಣಕ್ಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪುನಃ ಯುವತಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಘಟನೆ ಸಂಬಂಧ ಸ್ಥಳ ಮಹಜರು, ವೈದ್ಯಕೀಯ ಪರೀಕ್ಷೆ ಮತ್ತು ಸಂತ್ರಸ್ತೆಯ ಹೇಳಿಕೆ ಅತ್ಯಗತ್ಯವಾಗಿರುವ ಹಿನ್ನೆಲೆ ತಪ್ಪದೆ, ವಿಚಾರಣೆಗೆ ಹಾಜರಾಗುವಂತೆ ಉಲ್ಲೇಖಿಸಿ, ವಕೀಲರ ಮೂಲಕವೇ ಆಕೆಗೆ ಇಲ್ಲಿನ ಕಬ್ಬನ್‍ಪಾರ್ಕ್ ಠಾಣಾ ಪೊಲೀಸರು ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X