ರಾಜ್ಯದಲ್ಲಿಂದು 3 ಸಾವಿರಕ್ಕೂ ಹೆಚ್ಚು ಕೊರೋನ ಪ್ರಕರಣ ದೃಢ: 12 ಮಂದಿ ಮೃತ್ಯು

ಬೆಂಗಳೂರು, ಮಾ.28: ರಾಜ್ಯದಲ್ಲಿ ರವಿವಾರದಂದು 3,082 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 12 ಜನರು ಸೋಂಕಿಗೆ ಬಲಿಯಾಗಿದ್ದು, 1,285 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,87,012ಕ್ಕೆ ತಲುಪಿದ್ದು, 204 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,504ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 23,037ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
12 ಸೋಂಕಿತರು ಬಲಿ: ಬೆಂಗಳೂರು ನಗರ 7, ಕಲಬುರಗಿ 1, ಮೈಸೂರು 2, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 3,082 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 53, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 2,004, ಬೀದರ್ 63, ಚಾಮರಾಜನಗರ 9, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 8, ಚಿತ್ರದುರ್ಗ 12, ದಕ್ಷಿಣ ಕನ್ನಡ 68, ದಾವಣಗೆರೆ 7, ಧಾರವಾಡ 60, ಗದಗ 14, ಹಾಸನ 65, ಹಾವೇರಿ 2, ಕಲಬುರಗಿ 159, ಕೊಡಗು 14, ಕೋಲಾರ 9, ಕೊಪ್ಪಳ 20, ಮಂಡ್ಯ 34, ಮೈಸೂರು 114, ರಾಯಚೂರು 13, ರಾಮನಗರ 3, ಶಿವಮೊಗ್ಗ 33, ತುಮಕೂರು 59, ಉಡುಪಿ 115, ಉತ್ತರ ಕನ್ನಡ 11, ವಿಜಯಪುರ 24, ಯಾದಗಿರಿ ಜಿಲ್ಲೆಯಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ.
ರಾಜಧಾನಿಯಲ್ಲಿ 2004 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ರವಿವಾರದಂದು 2,004 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಮೃತಪಟ್ಟಿದ್ದಾರೆ. 786 ಸೋಂಕಿತರು ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,28,173 ಕೊರೋನ ಸೋಂಕಿತರು ದೃಢಪಟ್ಟಿದ್ದು, 4581 ಜನರು ಸೋಂಕಿಗೆ ಬಲಿಯಾಗಿದ್ದಾರೆ. 4,07,709 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







