Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡೋನೇಶ್ಯ ಚರ್ಚ್ ಬಳಿ ಆತ್ಮಹತ್ಯಾ ದಾಳಿ:...

ಇಂಡೋನೇಶ್ಯ ಚರ್ಚ್ ಬಳಿ ಆತ್ಮಹತ್ಯಾ ದಾಳಿ: ಕನಿಷ್ಠ 14 ಮಂದಿಗೆ ಗಾಯ

ಆತ್ಮಾಹುತಿ ಬಾಂಬರ್‌ಗಳ ಸಾವು

ವಾರ್ತಾಭಾರತಿವಾರ್ತಾಭಾರತಿ28 March 2021 10:43 PM IST
share
ಇಂಡೋನೇಶ್ಯ ಚರ್ಚ್ ಬಳಿ ಆತ್ಮಹತ್ಯಾ ದಾಳಿ: ಕನಿಷ್ಠ 14 ಮಂದಿಗೆ ಗಾಯ

  ಜಕಾರ್ತ,ಮಾ.28: ಇಂಡೋನೇಶ್ಯದ ಮಕಾಸ್ಸರ್ ನಗರದಲ್ಲಿ ರವಿವಾರ ಕ್ಯಾಥೊಲಿಕ್ ಚರ್ಚ್ ಒಂದರ ಮೇಲೆ ಇಬ್ಬರು ಶಂಕಿತ ಆತ್ಮಹತ್ಯಾ ಬಾಂಬರ್‌ಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಆತ್ಮಾಹುತಿ ಬಾಂಬರ್‌ಗಳಿಬ್ಬರೂ ಸಾವನ್ನಪ್ಪಿದ್ದಾರೆ.

  ಸುಲಾವೆಸಿ ದ್ವೀಪದಲ್ಲಿರುವ ಮಕಾಸ್ಸರ್ ನಗರದ ಚರ್ಚ್‌ನಲ್ಲಿ ಈಸ್ಟರ್ ಪವಿತ್ರವಾರದ ಮೊದಲ ದಿನವಾದ ರವಿವಾರ ಸಾಮೂಹಿಕ ಪ್ರಾರ್ಥನೆಯ ಮುಕ್ತಾಯದ ವೇಳೆಗೆ ದಾಳಿಕೋರರು ಹೊರಗಡೆ ತಮ್ಮನ್ನು ತಾವೇ ಸ್ಫೋಟಿಸಿಕೊಂಡರು.

  ಚರ್ಚ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಇಂಡೋನೇಶ್ಯ ಅಧ್ಯಕ್ಷ ಜೊಕೊ ವಿಡೊಡೊ ಬಲವಾಗಿ ಖಂಡಿಸಿದ್ದಾರೆ. ‘‘ ಭಯೋತ್ಪಾದನೆಯ ಈ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ ಹಾಗೂ ಈ ದಾಳಿಯ ಸೂತ್ರಧಾರಿಗಳ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮತ್ತು ಅವರ ಬೇರುಗಳನ್ನು ಕತ್ತರಿಸುವಂತೆ ನಾನು ಪೊಲೀಸ್ ವರಿಷ್ಠರಿಗೆ ಆದೇಶಿಸಿದ್ದೇನೆ’’ ಎಂದವರು ಆನ್‌ಲೈನ್ ಪ್ರಸಾರವಾದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

 ಈ ದಾಳಿಯ ಹಿಂದೆ ಯಾವ ಭಯೋತ್ಪಾದಕ ಸಂಘಟನೆಯ ಕೈವಾಡವಿದೆ ಹಾಗೂ ಇತ್ತೀಚೆಗೆ ಕೆಲವು ಶಂಕಿತರ ಬಂಧನಕ್ಕೂ, ಈ ಘಟನೆಗೂ ಸಂಬಂಧವಿದೆಯೇ ಎಂಬುದನ್ನು ತಿಳಿಯಲು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ಪೊಲೀಸ್ ವಕ್ತಾರ ಆರ್ಗೊ ಯುವೊನೊ ತಿಳಿಸಿದ್ದಾರೆ.

      ಜನವರಿಯಲ್ಲಿ ಭಯೋತ್ಪಾದನಾ ನಿಗ್ರಹ ದಳವು ಮಕಾಸ್ಸರ್‌ನಲ್ಲಿ ಉಗ್ರರ ಅಡಗುದಾಣವೊಂದರ ಮೇಲೆ ದಾಳಿ ನಡೆಸಿ, ಇಬ್ಬರನ್ನು ಹತ್ಯೆಗೈದಿದ್ದರು.  2019ರಲ್ಲಿ ಫಿಲಿಪ್ಪೈನ್‌ನ ಚರ್ಚ್‌ನಲ್ಲಿ 20 ಮಂದಿಯ ಸಾವನ್ನಪ್ಪಿದ ಅವಳಿ ಬಾಂಬ್ ಸ್ಫೋಟದ ಹಿಂದೆ ಈ ಇಬ್ಬರು ಉಗ್ರರ ಕೈವಾಡವಿದೆಯೆಂದು ಶಂಕಿಸಲಾಗಿತ್ತು.

ಶಾಂತಿ ಹಾಗೂ ಸಹನೆಯನ್ನು ಕಾಪಾಡಿಕೊಳ್ಳುವಂತೆ ಅಧ್ಯಕ್ಷ ಜೊಕೋವಿ, ಇಂಡೋನೇಶ್ಯನ್ ಜನತೆಗೆ ಕರೆ ನೀಡಿದ್ದಾರೆ ಹಾಗೂ ಪ್ರತಿಯೊಬ್ಬರು ನಿರ್ಭೀತಿಯಿಂದ ಆರಾಧಿಸಬಹುದಾಗಿದೆ ಎಂದರು.

  ಶಂಕಿತ ಬಾಂಬರ್ ಮೋಟಾರ್ ಬೈಕ್‌ನಲ್ಲಿ ಚರ್ಚ್‌ನ ಮೈದಾನವನ್ನು ಪ್ರವೇಶಿಸಲು ಯತ್ನಿಸಿದಾಗ ಭದ್ರತಾ ಸಿಬ್ಬಂದಿ ಆತನನ್ನು ತಡೆದ. ಆಗ ಆತ ತನ್ನನ್ನು ತಾನೇ ಸ್ಫೋಟಿಸಿಕೊಂಡನೆಂದು ಮೂಲಗಳು ತಿಳಿಸಿವೆ.

   ಸ್ಫೋಟದಿಂದಾಗಿ ಬೆಂಕಿಯ ಜ್ವಾಲೆ ಮತ್ತು ಹೊಗೆ ಎದ್ದಿರುವುದನ್ನು ಹಾಗೂ ರಸ್ತೆ ಮಧ್ಯದಲ್ಲಿ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಚದುರಿ ಬಿದ್ದಿರುವುದನ್ನು ಸಿಸಿ ಕ್ಯಾಮರಾದ ವೀಡಿಯೊದಲ್ಲಿ ದಾಖಲಾಗಿದೆ.

  ದಾಳಿಯ ರೂವಾರಿಗಳು, ಫಿಲಿಪ್ಪೀನ್ಸ್‌ನ ಜೊಲೋ ನಗರದ ಚರ್ಚ್‌ನಲ್ಲಿ ನಡೆದ ಸ್ಫೋಟಕ್ಕೆ ಕಾರಣರಾದ ಉಗ್ರಗಾಮಿ ಗುಂಪಿಗೆ ಸೇರಿದವರಾಗಿರುವ ಸಾಧ್ಯತೆಯಿದೆಯೆಂದು ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹದಳದ ಮಾಜಿ ವರಿಷ್ಠ ಅನಿಸ್ಯಾದ್ ಎಂಬಾಯ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X