Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುಬ್ರಾಯ ಚೊಕ್ಕಾಡಿ ಆತ್ಮಕತೆಯಲ್ಲಿ...

ಸುಬ್ರಾಯ ಚೊಕ್ಕಾಡಿ ಆತ್ಮಕತೆಯಲ್ಲಿ ಕರಾವಳಿಯ ಸೊಗಡು, ಉದಾರತೆಯಿದೆ: ಡಾ.ಬಿ.ಎ.ವಿವೇಕ್ ರೈ

ವಾರ್ತಾಭಾರತಿವಾರ್ತಾಭಾರತಿ28 March 2021 11:35 PM IST
share
ಸುಬ್ರಾಯ ಚೊಕ್ಕಾಡಿ ಆತ್ಮಕತೆಯಲ್ಲಿ ಕರಾವಳಿಯ ಸೊಗಡು, ಉದಾರತೆಯಿದೆ: ಡಾ.ಬಿ.ಎ.ವಿವೇಕ್ ರೈ

ಬೆಂಗಳೂರು, ಮಾ.28: ಸಾಹಿತಿ ಸುಬ್ರಾಯ ಚೊಕ್ಕಾಡಿಯವರ ಆತ್ಮಕತೆಯಲ್ಲಿ ಅವರ ಉದಾರ ವ್ಯಕ್ತಿತ್ವ ಹಾಗೂ ಕರಾವಳಿಯ ಪರಿಸರದ ಸೊಗಡನ್ನು ಕಾಣಬಹುದು. ಜತೆಗೆ ಈ ಕೃತಿ ಕನ್ನಡ ಸಾಹಿತ್ಯ ಲೋಕಕ್ಕೆ ಒಂದು ಸಾಂಸ್ಕೃತಿಕ ಪಠ್ಯವಾಗಿದೆ ಎಂದು ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ವಿಕಾಸ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರ ಅನುಭವ ಕಥನ 'ಕಾಲದೊಂದೊಂದೇ ಹನಿ’ ಪುಸ್ತಕ  ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಿನಂಪ್ರತಿ ಜೀವನದಲ್ಲಿ ಹೊಸತನದ ಅನುಭವಗಳನ್ನು ಕಾಣುವ ಅಪರೂಪದ ವ್ಯಕ್ತಿತ್ವ ಚೊಕ್ಕಾಡಿಯವರದು. ತಮ್ಮದೆ ಆದ ಸ್ಪಷ್ಟ ನಿಲುವುಗಳನ್ನು ಇಟ್ಟುಕೊಂಡು ಪ್ರತಿಕ್ಷಣದಲ್ಲಿ ಸಮಸ್ಯೆಗಳನ್ನು ದಾಟಿ ಹೇಗೆ ಬದುಕಬೇಕೆಂದು ಚೊಕ್ಕಾಡಿ ತಮ್ಮ ಆತ್ಮಕತೆಯಲ್ಲಿ ಅನಾವರಣಗೊಳಿಸಿದ್ದಾರೆ. ಸಣ್ಣ ಗ್ರಾಮದಿಂದ ಬಂದು ಮಹತ್ತರವಾದುದನ್ನು ಸಾಧಿಸುವ ಬಗೆ ತೆರೆದಿಡುತ್ತಾರೆ ಎಂದು ವಿವರಿಸಿದರು.

ಬದುಕಿನ ಎಲ್ಲ ರಂಗಗಳ ಬಹುತ್ವದ ಅನುಭವವನ್ನು ಚೊಕ್ಕಾಡಿ ಅವರು ತಮ್ಮ ಆತ್ಮಕತೆಯಲ್ಲಿ ದಾಖಲಿಸಿದ್ದಾರೆ. ಚೊಕ್ಕಾಡಿಯವರ ನಿರೂಪಣೆಯಲ್ಲಿ ಸೌಜನ್ಯದ ಜೊತೆಗೆ ಸ್ಪಷ್ಟತೆಯಿದೆ. ಭಾಷೆಯ ಅಭಿವ್ಯಕ್ತಿಯಲ್ಲಿ ಪ್ರೀತಿಯಿದೆ. ಅವರ ಉದಾರ ವ್ಯಕ್ತಿತ್ವ ಬದುಕಿನ ಅನುಭವ ಗಾಥೆಯಾಗಿದೆ. ಜೊತೆಗೆ ಕರಾವಳಿಯ ಪರಿಸರವನ್ನೂ ಪರಿಚಯಿಸುವ ಮೂಲಕ ಕೃತಿಯು ಸಾಂಸ್ಕೃತಿಕ ನಕಾಶೆಯನ್ನು ಒದಗಿಸಿದೆ ಎಂದು ತಿಳಿಸಿದರು.

ಚೊಕ್ಕಾಡಿಯವರು ವಿಸ್ಮಯ ಹಾಗೂ ಎಲ್ಲ ಕಾಲಕ್ಕೂ ಸಲ್ಲುವ ವ್ಯಕ್ತಿತ್ವ. ಅವರು ಕೃಷಿಕ, ಸಾಹಿತಿ, ಶಿಕ್ಷಕ ಹಾಗೂ ಹಿರಿಯನಾಗಿ ಆಕರ್ಷಕ ವೃತ್ತಗಳನ್ನು ನಿರ್ವಹಿಸುತ್ತಾರೆ. ಅವರು ನೋವು, ಸಮಸ್ಯೆ, ಸವಾಲುಗಳನ್ನು ಎದುರಿಸಿದರೂ ವ್ಯಕ್ತಿತ್ವ ಬಿಟ್ಟುಕೊಡುವುದಿಲ್ಲ. ಸೌಮ್ಯವಾಗಿ ತಮ್ಮ ನಿಲುವು ಸ್ಪಷ್ಟಪಡಿಸುತ್ತಾರೆ. ಎಲ್ಲಿಯೂ ನುಣುಚಿಕೊಳ್ಳದೆ ಪ್ರಾಮಾಣಿಕವಾಗಿ ಅಭಿವ್ಯಕ್ತಿಸುತ್ತಾರೆ ಎಂದರು.

ಸಾಹಿತಿ ಸುಬ್ರಾಯ ಚೊಕ್ಕಾಡಿ ಮಾತನಾಡಿ, ಅನುಭವದ ಕಥನ ನಿರೂಪಣೆಗೆ ಕೊರೋನ ಕಾಲಘಟ್ಟ ವರವಾಗಿ ಪರಿಣಮಿಸಿತು. ಬಹುದಿನಗಳ ನಂತರ ಅಂಜನಾ ಹೆಗಡೆಯವರ ನೆರವಿನೊಂದಿಗೆ ಹಲವು ಸಮಸ್ಯೆಗಳ ನಡುವೆ ಕೃತಿಯು ರೂಪುಗೊಂಡಿತು ಎಂದು ಕೃತಿ ರಚನೆಯ ಸಂದರ್ಭವನ್ನು ವಿವರಿಸಿದರು.

ವಿಮರ್ಶಕ ಎಸ್.ಆರ್.ವಿಜಯಶಂಕರ್ ಮಾತನಾಡಿ, ಚೊಕ್ಕಾಡಿಯವರ ವ್ಯಕ್ತಿತ್ವ ವಿಶಿಷ್ಟವಾಗಿದ್ದು ಕಾವ್ಯಗಳ ಮೂಲಕ ನವ್ಯ ಸಾಹಿತ್ಯದ ಕಡೆ ವಾಲುವಂತೆ ಮಾಡಿದರು. ಅವರ ಭಾಷೆಯ ಮೇಲಿನ ವ್ಯಾಮೋಹ, ಪುಸ್ತಕದ ಪ್ರೀತಿ ನನ್ನಲ್ಲಿ ಬರಹದ ಗೀಳು ಮೂಡಿಸಿತು ಎಂದು ಚೊಕ್ಕಾಡಿವರೊಂದಿಗಿನ ಒಡನಾಟ ಸ್ಮರಿಸಿದರು.

ಭಾಷೆಯ ಬಗ್ಗೆ ಗಂಭೀರವಾಗಿ ಮಾತನಾಡುತ್ತಿದ್ದ ಚೊಕ್ಕಾಡಿ ಕಾಗುಣಿತದಲ್ಲಿ ತಪ್ಪಾಗಬಾರದು ಎನ್ನುತ್ತಿದ್ದರು. ಅವರ ಪ್ರಭಾವದಿಂದ ನನ್ನಲ್ಲಿ ವಿಮರ್ಶಾ ಪ್ರಜ್ಞೆ ಬೆಳೆಯಿತು. ಅವರ ಕೃತಿಯಲ್ಲಿ ಭವದ ಮತ್ತು ಅನುಭಾವದ ಕಲ್ಪನೆ ಕಾಣಬಹುದು ಎಂದರು. 

ಪತ್ರಕರ್ತ ಜೋಗಿ ಪುಸ್ತಕದ ಕುರಿತು ಮಾತನಾಡಿದರು. ಲೇಖಕ ಡಾ.ನಾ.ದಾಮೋದರ ಶೆಟ್ಟಿ, ಕೃತಿಯ ನಿರೂಪಕಿ ಅಂಜನಾ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X