Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪಘಾತ ಮಾಹಿತಿ 48 ಗಂಟೆಗಳಲ್ಲಿ...

ಅಪಘಾತ ಮಾಹಿತಿ 48 ಗಂಟೆಗಳಲ್ಲಿ ನ್ಯಾಯಾಧಿಕರಣ, ವಿಮಾ ಕಂಪನಿಗಳಿಗೆ ತಲುಪಬೇಕು: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ29 March 2021 11:28 PM IST
share
ಅಪಘಾತ ಮಾಹಿತಿ 48 ಗಂಟೆಗಳಲ್ಲಿ ನ್ಯಾಯಾಧಿಕರಣ, ವಿಮಾ ಕಂಪನಿಗಳಿಗೆ ತಲುಪಬೇಕು: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮಾ.29: ಪರಿಹಾರ ಕೋರಿಕೆ ಅರ್ಜಿಗಳ ಸಂಸ್ಕರಣೆಗಾಗಿ ಅಪಘಾತ ಮಾಹಿತಿ ವರದಿಗಳನ್ನು ಅಪಘಾತ ಸಂಭವಿಸಿದ 48 ಗಂಟೆಗಳಲ್ಲಿ ಇ-ಮೇಲ್ ಅಥವಾ ಅದಕ್ಕಾಗಿಯೇ ಪ್ರತ್ಯೇಕ ವೆಬ್‌ಸೈಟ್ ಮೂಲಕ ಮೋಟರ್ ಅಪಘಾತ ಪರಿಹಾರ ಕೋರಿಕೆ ನ್ಯಾಯಾಧಿಕರಣಗಳಿಗೆ ಮತ್ತು ವಿಮಾ ಕಂಪನಿಗಳಿಗೆ ಕಳುಹಿಸುವಂತೆ ಸರ್ವೋಚ್ಚ ನ್ಯಾಯಾಲಯವು ಎಲ್ಲ ಪೊಲೀಸ್ ಠಾಣೆಗಳಿಗೆ ಆದೇಶಿಸಿದೆ. ಇದು ಅಪಘಾತ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬವನ್ನು ತಡೆಯಲು ನ್ಯಾಯಾಲಯವು ಹೊರಡಿಸಿರುವ ಎಂಟು ನಿರ್ದೇಶಗಳಲ್ಲಿ ಸೇರಿದೆ. ಈ ನಿರ್ದೇಶಗಳು ದೇಶಾದ್ಯಂತ ಎಲ್ಲ ಪೊಲೀಸ್ ಠಾಣೆಗಳು,ಮೋಟರ್ ಅಪಘಾತ ಪರಿಹಾರ ಕೋರಿಕೆ ನ್ಯಾಯಾಧಿಕರಣಗಳು ಮತ್ತು ವಿಮಾ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ತಿಳಿಸಿದೆ.

ಅಪಘಾತ ವರದಿಗಳು,ಪರಿಹಾರ ಹಕ್ಕು ಕೋರಿಕೆಗಳು ಮತ್ತು ಇಂತಹ ಕೋರಿಕೆಗಳಿಗೆ ಉತ್ತರಗಳು ಇತ್ಯಾದಿಗಳ ಸಲ್ಲಿಕೆಗೆ ದೇಶಾದ್ಯಂತ ಕಾರ್ಯಾಚರಿಸುವ ಮತ್ತು ಲಭ್ಯವಾಗುವ ರಾಷ್ಟ್ರೀಯ ಆನ್‌ಲೈನ್ ವೇದಿಕೆಯನ್ನು ಆರಂಭಿಸುವಂತೆ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಆರ್.ಸುಭಾಷ್ ರೆಡ್ಡಿ ಅವರ ಪೀಠವು ಕೇಂದ್ರಕ್ಕೆ ಆದೇಶಿಸಿದೆ. ಇದು ತವರು ರಾಜ್ಯಗಳಿಂದ ಹೊರಗೆ ಅಪಘಾತಗಳು ಸಂಭವಿಸಿದಾಗ ಸಂತ್ರಸ್ತರು ಪಡುವ ಬವಣೆಗಳಿಗೆ ಅಂತ್ಯ ಹಾಡುತ್ತದೆ.

 ವಕೀಲರಾದ ನರಸಿಂಹ ವಿಜಯರಾಘವನ್ ಮತ್ತು ವಿಪಿನ್ ನಾಯರ್ ಅವರ ಸಲಹೆಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಇತ್ತೀಚಿನ ಈ ನಿರ್ದೇಶಗಳು ಹೊರಬಿದ್ದಿವೆ. ಈ ಉದ್ದೇಶದಿಂದ ತಮಿಳುನಾಡು ಮತ್ತು ದಿಲ್ಲಿಯಲ್ಲಿ ಈಗಾಗಲೇ ಸ್ವತಂತ್ರ ಆನ್‌ಲೈನ್ ವೇದಿಕೆಗಳು ಕಾರ್ಯಾಚರಿಸುತ್ತಿವೆ ಎನ್ನುವದನ್ನು ಅವರು ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಸರಕಾರವು ಈ ಬಗ್ಗೆ ಚರ್ಚಿಸಿ,ರಾಷ್ಟ್ರೀಯ ಆನ್‌ಲೈನ್ ವೇದಿಕೆಯ ಆರಂಭಕ್ಕೆ ಅಂತಿಮ ಗಡುವಿನ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಜಯಂತ ಸೂದ್ ತಿಳಿಸಿದ ಬಳಿಕ ನ್ಯಾಯಾಲಯವು ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X