Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಸುಕ್ರಿಸ್ತನಿಗೆ ಜೂದಸ್‌ ದ್ರೋಹಗೈದಂತೆ...

ಏಸುಕ್ರಿಸ್ತನಿಗೆ ಜೂದಸ್‌ ದ್ರೋಹಗೈದಂತೆ ಪಿಣರಾಯಿ ಕೇರಳಕ್ಕೆ ದ್ರೋಹ ಮಾಡುತ್ತಿದ್ದಾರೆ: ನರೇಂದ್ರ ಮೋದಿ

"ರೈತರ ಅಭಿವೃದ್ಧಿಗಾಗಿ ಸರಕಾರ ಉತ್ತಮ ಹೆಜ್ಜೆಗಳನ್ನು ಕೈಗೊಳ್ಳುತ್ತಿದೆ"

ವಾರ್ತಾಭಾರತಿವಾರ್ತಾಭಾರತಿ30 March 2021 4:16 PM IST
share
ಏಸುಕ್ರಿಸ್ತನಿಗೆ ಜೂದಸ್‌ ದ್ರೋಹಗೈದಂತೆ ಪಿಣರಾಯಿ ಕೇರಳಕ್ಕೆ ದ್ರೋಹ ಮಾಡುತ್ತಿದ್ದಾರೆ: ನರೇಂದ್ರ ಮೋದಿ

ತಿರುವನಂತಪುರಂ: "ಬೆಳ್ಳಿಯ ಕೆಲ ತುಂಡುಗಳಿಗಾಗಿ ಏಸು ಕ್ರಿಸ್ತನಿಗೆ ಜುಡಾಸ್ ವಿಶ್ವಾಸದ್ರೋಹಗೈದಿದ್ದ.  ಎಲ್‍ಡಿಎಫ್ ಕೂಡ ಕೆಲ ಚಿನ್ನದ ತುಂಡುಗಳಿಗಾಗಿ ಕೇರಳದ ಜನತೆಯ ವಿಶ್ವಾಸದ್ರೋಹಗೈದಿದೆ" ಎಂದು  ಪಾಲಕ್ಕಾಡ್‍ನಲ್ಲಿ ಇಂದು ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಚಿನ್ನದ ಸ್ಮಗ್ಲಿಂಗ್ ಹಗರಣವನ್ನು ಉಲ್ಲೇಖಿಸಿ ಹೇಳಿದರು.

"ಯುಡಿಎಫ್ ಹಾಗೂ ಎಲ್‍ಡಿಎಫ್ ನಡುವಿನ ಸ್ನೇಹಮಯ ಒಪ್ಪಂದವು ಹಲವು ವರ್ಷಗಳ ಕಾಲ ಕೇರಳ ರಾಜಕೀಯದ ಅತ್ಯಂತ ಕೆಟ್ಟ ರಹಸ್ಯವಾಗಿತ್ತು. ಈಗ ಕೇರಳದ ಪ್ರಥಮ ಬಾರಿಯ ಮತದಾರರು `ಇದೆಂತಹ ಮ್ಯಾಚ್ ಫಿಕ್ಸಿಂಗ್?' ಎಂದು ಕೇಳುತ್ತಿದ್ದಾರೆ. ಐದು ವರ್ಷ ಒಬ್ಬರು ಲೂಟಿಗೈದರೆ ಇನ್ನೈದು ವರ್ಷ ಇನ್ನೊಬ್ಬರು ಲೂಟಿಗೈಯ್ಯುತ್ತಾರೆ. ರೈತರ ಅಭಿವೃದ್ಧಿಗಾಗಿ ನಾವು ಉತ್ತಮ ಹೆಜ್ಜೆಗಳನ್ನು ಕೈಗೊಂಡಿದ್ದೇವೆ. ರೈತರಿಗಾಗಿ ಇದುವರೆಗೆ ಹೆಚ್ಚಿಸದ ಕನಿಷ್ಠ ಬೆಂಬಲ ಬೆಲೆಯನ್ನು ನಾವು ಹೆಚ್ಚಿಸಿದ್ದೇವೆ" ಎಂದು ಮೋದಿ ಹೇಳಿದರು.

"ಎರಡೂ ರಂಗಗಳು ಹಣ ಮಾಡುವ ಕ್ಷೇತ್ರಗಳನ್ನು ಗುರುತಿಸಿಕೊಂಡಿವೆ. ಯುಡಿಎಫ್ ಸೂರ್ಯನ ಕಿರಣಗಳನ್ನೂ ಬಿಟ್ಟಿಲ್ಲ" ಎಂದು ಅವರು ಹೇಳಿದರು.

ಪಾಲಕ್ಕಾಡ್‍ನಿಂದ ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸುತ್ತಿರುವ 88 ವರ್ಷದ ಮೆಟ್ರೋ ಮ್ಯಾನ್ ಇ ಶ್ರೀಧರನ್ ಅವರನ್ನು ಉಲ್ಲೇಖಿಸಿದ ಪ್ರಧಾನಿ "ಮೆಟ್ರೋ ಮ್ಯಾನ್ ಶ್ರೀಧರನ್ ಜೀ ಅವರು ಭಾರತವನ್ನು ಆಧುನೀಕರಿಸಲು ಹಾಗೂ ಸಂಪರ್ಕಗಳನ್ನು ಸುಧಾರಿಸಲು ಮಹತ್ವದ ಕೆಲಸ ಮಾಡಿದ್ದಾರೆ. ಅವರನ್ನು ಎಲ್ಲಾ ವರ್ಗದ ಜನರು  ಗೌರವಿಸುತ್ತಾರೆ ಹಾಗೂ ಅವರು ಕೇರಳದ ಪ್ರಗತಿಗೆ ತಮ್ಮನ್ನು ಮುಡಿಪಾಗಿಸಿದ್ದಾರೆ. ಕೇರಳದ ನೈಜ ಪುತ್ರನಾಗಿ ಅವರು ಅಧಿಕಾರದಾಚೆ ಯೋಚಿಸಿ ಕೇರಳಕ್ಕಿರುವ ತಮ್ಮ ಬದ್ಧತೆಗೆ ಅಂಟಿಕೊಂಡಿದ್ದಾರೆ" ಎಂದು ವೇದಿಕೆಯಲ್ಲಿದ್ದ ಶ್ರೀಧರನ್ ಅವರನ್ನು ಮೋದಿ ಹೊಗಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X