Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ಲೀಲ ಸಿಡಿ ಪ್ರಕರಣ: ನ್ಯಾಯಾಲಯಕ್ಕೆ...

ಅಶ್ಲೀಲ ಸಿಡಿ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಸಂತ್ರಸ್ತ ಯುವತಿ

ವಾರ್ತಾಭಾರತಿವಾರ್ತಾಭಾರತಿ30 March 2021 8:05 PM IST
share
ಅಶ್ಲೀಲ ಸಿಡಿ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಸಂತ್ರಸ್ತ ಯುವತಿ

ಬೆಂಗಳೂರು, ಮಾ.30: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವ-ಇಚ್ಛೆಯ ಹೇಳಿಕೆ ದಾಖಲಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಸುಮಾರಿಗೆ ಇಲ್ಲಿನ ವಸಂತನಗರದ ಗುರುನಾನಕ್ ಭವನ ಬಳಿಯ ಎಸಿಎಂಎಂ ನ್ಯಾಯಾಧೀಶ ಬಾಲಗೋಪಾಲ್ ಅವರ ಮುಂದೆ ಸ್ವಯಂಪ್ರೇರಿತವಾಗಿ ಸಂತ್ರಸ್ತ ಯುವತಿ ಹಾಜರಾಗಿ, ಸಿಆರ್‍ಪಿಸಿ 164 ಅಡಿಯಲ್ಲಿ ಹೇಳಿಕೆ ನೀಡಿದರು.

ಭದ್ರತೆ ಕಾರಣಕ್ಕಾಗಿ ಮೊದಲೇ ಯೋಚಿಸಿ, ಮಾಹಿತಿಯನ್ನು ಗೌಪ್ಯವಾಗಿರಿಸಿ ಇಲ್ಲಿನ ನೃಪತುಂಗ ರಸ್ತೆಯ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬದಲು ವಸಂತನಗರದ ನ್ಯಾಯಾಲಯದಲ್ಲಿ ಹಾಜರಾಗುವಂತೆ ಯುವತಿಯನ್ನು ಸೂಚಿಸಲಾಗಿತ್ತು. ಜತೆಗೆ, ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಗುರುನಾನಕ್ ಭವನ ಬಳಿ ವಿಶೇಷ ನ್ಯಾಯಾಲಯ ಪ್ರಾರಂಭಿಸಲಾಗಿತ್ತು. ಅದರಂತೆ ಅಲ್ಲಿಯೇ ಯುವತಿಯ ಹೇಳಿಕೆ ಪಡೆಯಲಾಯಿತು.

ಕಾರಿನಲ್ಲಿಯೇ ತೆರಳಿದರು: ಇದೊಂದು ಗಂಭೀರ ಪ್ರಕರಣವೆಂದು ಪರಿಗಣಿಸಿದ ನ್ಯಾಯಾಧೀಶರು, ಸ್ವತಃ ಕಾರಿನಲ್ಲೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ವಸಂತನಗರದ ನ್ಯಾಯಾಲಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬೆರಳಚ್ಚುಗಾರರೊಬ್ಬರು ಜತೆಗಿದ್ದರು.

ಸಿಟ್ ವಿಚಾರಣೆ: ಪ್ರಕರಣವೊಂದರ ಸಂಬಂಧ ಹೇಳಿಕೆ ಪಡೆಯಲು ನ್ಯಾಯಾಲಯದ ಅನುಮತಿ ಪಡೆದ ಸಿಟ್(ವಿಶೇಷ ತನಿಖಾ ದಳ) ಅಧಿಕಾರಿಗಳು, ಆಕೆಯನ್ನು ಇಲ್ಲಿನ ಆಡುಗೋಡಿ ತಾಂತ್ರಿಕ ವಿಭಾಗಕ್ಕೆ ಕರೆತಂದು ಸೆಕ್ಷನ್ 161 ಅಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲು ಮಾಡಿಕೊಂಡರು.

ವೈದ್ಯಕೀಯ ಪರೀಕ್ಷೆ: ಲೈಂಗಿಕ ದೌರ್ಜನ್ಯ ಸೇರಿದಂತೆ ಇನ್ನಿತರೆ ಗಂಭೀರ ರೀತಿಯ ಆರೋಪಗಳ ಹಿನ್ನೆಲೆ ಬುಧವಾರ(ಮಾ.31) ತನಿಖಾಧಿಕಾರಿಗಳು ಸಂತ್ರಸ್ತ ಯುವತಿಯನ್ನು ಇಲ್ಲಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಳೆ ಮತ್ತೆ ವಿಚಾರಣೆ: ನೋಟಿಸ್

ಮಂಗಳವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯಿಂದ ಸಿಆರ್‍ಪಿಸಿ ಸೆಕ್ಷನ್ 161ರಡಿ ಧ್ವನಿ ಮಾದರಿ ಸಂಗ್ರಹಿಸಿದ ಸಿಟ್ ತನಿಖಾಧಿಕಾರಿಗಳು, ಬುಧವಾರ(ಮಾ.31) ಪುನಃ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಸೂಚಿಸಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X