Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಾರಿಂದಲೂ ಸಲಹೆ ಪಡೆಯದೆ ʼಲಾಕ್‌ ಡೌನ್‌ʼ...

ಯಾರಿಂದಲೂ ಸಲಹೆ ಪಡೆಯದೆ ʼಲಾಕ್‌ ಡೌನ್‌ʼ ಹೇರಿದ್ದ ಪ್ರಧಾನಿ ಮೋದಿ: ಬಿಬಿಸಿ ವರದಿ

ವಾರ್ತಾಭಾರತಿವಾರ್ತಾಭಾರತಿ30 March 2021 9:26 PM IST
share
ಯಾರಿಂದಲೂ ಸಲಹೆ ಪಡೆಯದೆ ʼಲಾಕ್‌ ಡೌನ್‌ʼ ಹೇರಿದ್ದ ಪ್ರಧಾನಿ ಮೋದಿ: ಬಿಬಿಸಿ ವರದಿ

ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿರುವ ಭಾರತ ದೇಶದಲ್ಲಿ ಕೊರೋನ ಕಾರಣದಿಂದ ಲಾಕ್‌ ಡೌನ್‌ ಹೇರಿರುವ  ಕಾರಣದಿಂದ ದೇಶಾದ್ಯಂತ ಹಲವಾರು ಮಂದಿ ಕಷ್ಟಕ್ಕೀಡಾಗಿದ್ದು ಮಾತ್ರವಲ್ಲದೇ ಪ್ರಾಣ ಕಳೆದುಕೊಂಡಿದ್ದರು. ಈ ಕುರಿತಾದಂತೆ ವರದಿ ಪ್ರಕಟಿಸಿರುವ ಅಂತಾರಾಷ್ಟ್ರೀಯ ಮಾಧ್ಯಮ ಬಿಬಿಸಿ, "ಲಾಕ್‌ ಡೌನ್‌ ಹೇರುವ ಮುಂಚೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ತಜ್ಞರು ಅಥವಾ ಪರಿಣಿತರ ಸಲಹೆ ಪಡೆದಿರಲಿಲ್ಲ" ಎಂದು ವರದಿ ಮಾಡಿದೆ.

ಬಿಬಿಸಿಯು ಒಟ್ಟು 240ಕ್ಕೂ ಹೆಚ್ಚು ಆರ್ಟಿಐ ಅರ್ಜಿಯನ್ನು ಸರಕಾರದ ವಿವಿಧ ಇಲಾಖೆಗಳಿಗೆ ಹಾಕಿತ್ತು. ಇದಕ್ಕೆ ಸಿಕ್ಕ ಉತ್ತರಗಳಲ್ಲಿ ʼಪ್ರಧಾನಿ ಮೋದಿಯು ಲಾಕ್‌ ಡೌನ್‌ ಸಂಬಂಧಿಸಿ ಯಾರನ್ನೂ ಸಂಪರ್ಕಿಸಿರಲಿಲ್ಲ ಎನ್ನುವುದು ನಿಚ್ಚಳವಾಗಿದೆʼ ಎಂದು ವರದಿ ತಿಳಿಸಿದೆ. ಭಾರತೀಯ ಗೃಹ ಇಲಾಖೆಯು ಈ ಸಂಬಂಧ ಹಲವು ಅರ್ಜಿಗಳಿಗೆ ಉತ್ತರ ನೀಡಲು ನಿರಾಕರಿಸಿತ್ತು ಮತ್ತು ಹಾರಿಕೆಯ ಉತ್ತರ ನೀಡಿ ಮುಂದುವರಿಯಲು ಪ್ರಯತ್ನಿಸಿತ್ತು ಎಂದು ವರದಿ ಉಲ್ಲೇಖಿಸಿದೆ.

ಎಲ್ಲಾ ದೇಶಗಳಿಗಿಂತ ಬೇಗನೇ ಭಾರತ ಲಾಕ್‌ ಡೌನ್‌ ಹೇರಿತ್ತು. 519 ಪ್ರಕರಣಗಳು ಮತ್ತು 9 ಮಂದಿ ಮೃತಪಟ್ಟ ಸಂದರ್ಭದಲ್ಲಿ ಲಾಕ್‌ ಡೌನ್‌ ಹೇರಲಾಗಿತ್ತು. 68 ದಿನಗಳ ಮುಚ್ಚುಗಡೆಯನ್ನು ಆಕ್ಸ್ ಫರ್ಡ್‌ ಯುನಿವರ್ಸಿಟಿಯು "ವಿಶ್ವದಲ್ಲೇ ಕಟ್ಟುನಿಟ್ಟಾದ ಲಾಕ್‌ ಡೌನ್"‌ ಎಂದು ಬಣ್ಣಿಸಿದೆ.

ಲಾಕ್‌ ಡೌನ್‌ ನಲ್ಲಿ ಹೆಚ್ಚಾಗಿ ಪೀಡಿತರಾಗಿದ್ದು, ಬಡವರು, ದಿನಗೂಲಿ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಸ್ಥರಾಗಿದ್ದಾರೆ. ಆಕಸ್ಮಿಕವಾಗಿ ಅವರ ಕೆಲಗಳೆಲ್ಲಾ ನಿಂತು ಹೋದ ಬಳಿಕ ಅವರು ಚಿಂತಾಕ್ರಾಂತರಾಗಿದ್ದರು. ಮಾತ್ರವಲ್ಲದೇ ವಲಸೆ ಕಾರ್ಮಿಕರು ಕೂಡಾ ಸಂಕಷ್ಟ ಅನುಭವಿಸಿದ್ದಾರೆ. ಗರ್ಭಿಣಿ ಮಹಿಳೆಯರು, ರೋಗಿಗಳು ಮತ್ತು ಅಪೌಷ್ಠಿಕತೆ ಹೊಂದಿರುವ ಮಕ್ಕಳು ಕೂಡಾ ಕಷ್ಟ ಅನುಭವಿಸಿದ್ದಾಗಿ ವರದಿ ತಿಳಿಸಿದೆ.

ತಜ್ಞರ ಪ್ರಕಾರ "ಸರಿಯಾದ ಸಲಹೆ ಸೂಚನೆ, ಮಾರ್ಗದರ್ಶನಗಳಿಲ್ಲದೇ ಕೈಗೊಂಡ ನಿರ್ಧಾರದಿಂದಾಗಿ ಹಲವು ಸಾವು ನೋವುಗಳು ಸಂಭವಿಸಿತು" ಎಂದು ವರದಿ ತಿಳಿಸಿದೆ. 

"ಎಲ್ಲರೊಂದಿಗೆ ಸಮಾಲೋಚಿಸಿದ ನಂತರವೇ ಪ್ರಧಾನಿ ಕಾರ್ಯನಿರ್ವಹಿಸಿದ್ದಾರೆ" ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಹೇಳಿಕೆ ನೀಡಿದರೂ, ತಜ್ಞರ ಮತ್ತು ಅಧಿಕೃತರ ಹೇಳಿಕೆಗಳು ವ್ಯತಿರಿಕ್ತವಾಗಿದೆ. 

"ಜನವರಿ ತಿಂಗಳಲ್ಲಿ ಕೊರೋನ ವೈರಸ್‌ ಹರಡಲು ಪ್ರಾರಂಭವಾಯಿತು. ಮಾರ್ಚ್‌ ೨೦ರಂದು ಲಾಕ್‌ ಡೌನ್‌ ಹೇರಲಾಯಿತು. ರಾತ್ರೋರಾತ್ರಿ ಲಾಕ್‌ ಡೌನ್‌ ಹೇರಲು ಇದು ಪ್ರವಾಹವೋ, ಅಥವಾ ಭೂಕಂಪವೋ ಅಲ್ಲ. ಸರಿಯಾಗಿ ಸಮಾಲೋಚನೆ ನಡೆಸಿ, ಒಂದಿಷ್ಟು ಸಮಯ ನೀಡಿ, ಎಲ್ಲಾ ಮೂಲೆಗಳಿಂದ ಸಲಹೆಗಳು ಬಂದ ಬಳಿಕ ಲಾಕ್‌ ಡೌನ್‌ ಹೇರಬಹುದಿತ್ತು" ಎಂದು ಅಂಜಲಿ ಭಾರದ್ವಾಜ್‌ ಹೇಳಿಕೆ ನೀಡುತ್ತಾರೆ.

"ಲಾಕ್‌ ಡೌನ್‌ ಅನ್ನು ಉತ್ತಮವಾಗಿ ಯೋಜಿಸಲು ಅವಕಾಶವಿತ್ತು. ಇದು ರಾಜ್ಯಗಳು ಮತ್ತು ಜಿಲ್ಲೆಗಳನ್ನು ಅವಲಂಬಿಸಿ ವಿಕೇಂದ್ರೀಕೃತ ನಿರ್ಧಾರವಾಗಿರಬೇಕು. ಸಂಪೂರ್ಣ ಲಾಕ್‌ಡೌನ್ ಅಗತ್ಯವಿರಲಿಲ್ಲ. ಈಗ ಏನಾಗಿದೆ ಎಂಬುದು ಭಾರೀ ಆಘಾತಕರ ವಿಚಾರ. ಏಕೆಂದರೆ ಭಾರತೀಯ ಆರ್ಥಿಕತೆಯೂ ಕೂಡ ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಾರ್ವಜನಿಕ ನೀತಿ ವಿಶ್ಲೇಷಕ ಪ್ರಿಯ ರಂಜನ್‌ ದಾಸ್‌ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X