Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2000 ವೈದ್ಯರ ನೇಮಕಕ್ಕೆ ಶೀಘ್ರವೇ ಕ್ರಮ:...

2000 ವೈದ್ಯರ ನೇಮಕಕ್ಕೆ ಶೀಘ್ರವೇ ಕ್ರಮ: ಆರೋಗ್ಯ ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ30 March 2021 9:54 PM IST
share
2000 ವೈದ್ಯರ ನೇಮಕಕ್ಕೆ ಶೀಘ್ರವೇ ಕ್ರಮ: ಆರೋಗ್ಯ ಸಚಿವ ಡಾ.ಸುಧಾಕರ್

ಮಣಿಪಾಲ, ಮಾ.30: ರಾಜ್ಯದಲ್ಲಿ ಎರಡು ಸಾವಿರ ವೈದ್ಯರು ಹಾಗೂ 700 ರಿಂದ 800 ಮಂದಿ ಪ್ಯಾರಾ ಮೆಡಿಕಲ್, ನರ್ಸಿಂಗ್ ಸಿಬ್ಬಂದಿಗಳನ್ನು ತಿಂಗಳೊಳಗೆ ನೇರ ನೇಮಕಾತಿ ಮಾಡಿಕೊಳ್ಳುವ ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರ ಹೆಚ್ಚಳ ತ್ವರಿತಗತಿಯಲ್ಲಿ ಕಂಡುಬರುತ್ತಿರುವ ಉಡುಪಿ ಜಿಲ್ಲೆಗೆ ಆಗಮಿಸಿ ದಿನವಿಡೀ ಆಸ್ಪತ್ರೆಗಳಿಗೆ ಭೇಟಿ, ಕಂಟೈನ್‌ಮೆಂಟ್ ವಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗಳನ್ನು ಅವಲೋಕಿಸಿದ ಬಳಿಕ, ಸಂಜೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರ ರೊಂದಿಗೆ ಮಾತನಾಡುತಿದ್ದರು.

2000 ವೈದ್ಯರನ್ನು ನೇರ ನೇಮಕಾತಿಯ ಮೂಲಕ ಕೆಲಸಕ್ಕೆ ತೆಗೆದುಕೊಂಡು ಈಗ ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಪ್ರಾಥಮಿಕ, ಸಮುದಾಯ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳನ್ನು ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇನ್ನು ಒಂದೂವರೆ ತಿಂಗಳೊಳಗೆ ಈ ನೇಮಕಾತಿ ನಡೆಯಲಿದೆ ಎಂದರು.

ಅದೇ ರೀತಿ 700ರಿಂದ 800 ಮಂದಿ ಪ್ಯಾರಾ ಮೆಡಿಕಲ್, ನರ್ಸಿಂಗ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೂ ನೇರ ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟದ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಇವುಗಳಿಗೂ ನೇಮಕಾತಿ ನಡೆಯಲಿದೆ ಎಂದು ಡಾ.ಸುದಾಕರ ವಿವರಿಸಿದರು.

ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದ್ದು, ಸರಕಾರಿ ಆಸ್ಪತ್ರೆಗಳು ಖಾಸಗಿಗಿಂತ ಉತ್ತಮ ವಾಗಿ ಕೆಲಸ ನಿರ್ವಹಿಸಲು ಬೇಕಾದ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಬುಧವಾರ ಪರಿಶೀಲನಾ ದಿನ: ಇನ್ನು ಮುಂದೆ ಪ್ರತಿ ಬುಧವಾರ ರಾಜ್ಯದ ಎಲ್ಲಾ ಸರಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ‘ಪರಿಶೀಲನಾ ದಿನ’ (ಇನ್‌ಸ್ಪೆಕ್ಷನ್ ಡೇ) ಆಗಿರುತ್ತದೆ. ಆರೋಗ್ಯ ಇಲಾಖೆಯ ವೈದ್ಯರು ಸೇರಿದಂತೆ ಎಲ್ಲರೂ ತಮ್ಮ ಕೆಳಗಿನ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದು ಸಚಿವರು ತಿಲಿಸಿದರು. ಇದರಿಂದ ಆಸ್ಪತ್ರೆಯ ಗುಣಮಟ್ಟ ಹೆಚ್ಚಲು ಸಾಧ್ಯವಾಗಲಿದೆ ಎಂದವರು ನುಡಿದರು.

ಅಲ್ಲದೇ ಎಲ್ಲಾ ವೈದ್ಯರು ತಮ್ಮ ಕೆಲಸದ ಬಗ್ಗೆ ಪ್ರತಿದಿನ ಡೈರಿಯನ್ನು ಬರೆದಿಡಬೇಕು. ಈ ಡೈರಿಯನ್ನು ಪರಿಶೀಲಿಸಿ ಅವರ ಭಡ್ತಿ, ವೇತನ ಹೆಚ್ಚಳವನ್ನು ನಿರ್ಧರಿಸಲಾಗುತ್ತದೆ ಎಂದ ಅವರು, ಜಿಲ್ಲೆಯ 13 ಲಕ್ಷ ಜನಸಂಖ್ಯೆಗೆ ಈವರೆಗೆ 7 ಲಕ್ಷ ಮಂದಿಗೆ ಮಾತ್ರ ಆರೋಗ್ಯ ಕಾರ್ಡ್ ನೀಡಲಾಗಿದೆ. ಇನ್ನು ಮೂರು ತಿಂಗಳೊಳಗೆ ಜಿಲ್ಲೆಯ ಉಳಿದ 6 ಲಕ್ಷ ಮಂದಿಗೆ ಆರೋಗ್ಯ ಕಾರ್ಡ್ ವಿತರಿಸುವ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಡಾ.ಸುಧಾಕರ್ ತಿಳಿಸಿದರು.

ತಾನು ಇಂದು ಕೋವಿಡ್ ಅದಿಕ ಸಂಖ್ಯೆಯಲ್ಲಿ ಕಂಡುಬಂದ ಎಂಐಟಿ ಕ್ಯಾಂಪಸ್ ಸೇರಿದಂತೆ ಹಲವು ಕಡೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಪಾಸಿಟಿವ್ ಸಂಖ್ಯೆ ಹೆಚ್ಚಿದರೂ ಸಾವು ಸಂಭವಿಸಿಲ್ಲ. ಅಧಿಕ ಮಂದಿಗೆ ರೋಗದ ಲಕ್ಷಣಗಳಿಲ್ಲ. ಸೋಂಕಿನ ನಿಯಂತ್ರಣಕಕೆ ಜಿಲ್ಲಾಡಳಿತ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದರು.

ಮುಂದಿನ 60ರಿಂದ 90 ದಿನಗಳು ನಮಗೆ ಸವಾಲಿನ ದಿನಗಳಾಗಲಿವೆ. ಕೊರೋನ ನಿಯಂತ್ರಣದಲ್ಲಿ ನಾವು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ. ಪಾಸಿಟಿವ್ ಪ್ರಮಾಣ ಕಡಿಮೆ ಇರಿಸುವುದರೊಂದಿಗೆ ಸೋಂಕಿತರ 20ರಿಂದ 30ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಿ ರೋಗವನ್ನು ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.

ಹಿರಿಯನಾಗರಿಕರು ಹಾಗೂ 45 ವರ್ಷ ಮೇಲಿನವರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಮನೆಯ ವಿದ್ಯಾವಂತರು ಹಿರಿಯರನ್ನು ಲಸಿಕೆಗೆ ಕರೆತರಲು ಪ್ರೋತ್ಸಾಹ ನೀಡಬೇಕು. ಜಿಲ್ಲೆಗಿರುವ ಅಂಬುಲೆನ್ಸ್, ಡಾಟಾ ಉಪಕರಣಗಳ ಕೊರೆಯನ್ನು ನೀಗಿಸಲು ತಾವು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಿಸಿ ಜಿ.ಜಗದೀಶ್, ಸಿಇಓ ಡಾ.ನವೀನ್ ಭಟ್, ಶಾಸಕ ಕೆ.ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.

ತಾಯಿ-ಮಕ್ಕಳ ಆಸ್ಪತ್ರೆಯ ಬಗ್ಗೆ ಬೆಂಗಳೂರಿನಲ್ಲಿ ಚರ್ಚೆ

ಉಡುಪಿಯಲ್ಲಿ ಉದ್ಯಮಿ ಬಿ.ಆರ್.ಶೆಟ್ಟಿ ಅವರು ತಾವು ನಡೆಸುತ್ತಿರುವ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕುರಿತಂತೆ ಮನವಿ ಯೊಂದನ್ನು ನೀಡಿದ್ದು, ಬೆಂಗಳೂರಿಗೆ ತೆರಳಿದ ಬಳಿಕ ತಾವು ಈ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದು ಕೊಳ್ಳುವುದಾಗಿ ಡಾ.ಸುಧಾಕರ ತಿಳಿಸಿದರು.

ಸರಕಾರ ಹಾಗೂ ಬಿ.ಆರ್.ಶೆಟ್ಟಿ ಅವರ ಕಂಪೆನಿಯೊಂದಿಗೆ ಆಗಿರುವ ಒಪ್ಪಂದ ಕುರಿತೂ ಪರಿಶೀಲಿಸುತ್ತೇನೆ. ಅವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಎದುರಾಗಿರುವ ಕಾನೂನು ಸಮಸ್ಯೆಗೂ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X