Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಟೋಲ್‍ವಿನಾಯಿತಿಗೆ...

ಪಡುಬಿದ್ರಿ: ಟೋಲ್‍ವಿನಾಯಿತಿಗೆ ಒತ್ತಾಯಿಸಿ ಪ್ರತ್ಯೇಕ ರಸ್ತೆ ನಿರ್ಮಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 March 2021 10:26 PM IST
share
ಪಡುಬಿದ್ರಿ: ಟೋಲ್‍ವಿನಾಯಿತಿಗೆ ಒತ್ತಾಯಿಸಿ ಪ್ರತ್ಯೇಕ ರಸ್ತೆ ನಿರ್ಮಿಸಿ ಪ್ರತಿಭಟನೆ

ಪಡುಬಿದ್ರಿ: ಹೆಜಮಾಡಿ ಕೋಡಿ ಭಾಗಕ್ಕೆ ಸಂಚರಿಸುವ  ಸರ್ವಿಸ್ ಬಸ್ಸುಗಳಿಗೆ, ಶಾಲಾ ಬಸ್ಸುಗಳಿಗೆ ಟೋಲ್ ವಿನಾಯಿತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಹೆಜಮಾಡಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ಪ್ರತ್ಯೇಕ ರಸ್ತೆ ನಿರ್ಮಿಸಿದ್ದು, ಪ್ರತಿಭಟನೆಗೆ ಮಣಿದ ನವಯುಗ್ ತಕ್ಷಣದಿಂದ ಟೋಲ್ ವಿನಾಯಿತಿ ನೀಡಿದೆ.

ಹೆಜಮಾಡಿ ಒಳ ರಸ್ತೆಯ ಟೋಲ್‍ನಲ್ಲಿ ಈ ಹಿಂದೆ ನೀಡುತ್ತಿದ್ದ ವಿನಾಯಿತಿ ನಿಯಮಗಳನ್ನು ಫಾಸ್ಟ್‍ಟ್ಯಾಗ್ ಕಡ್ಡಾಯದ ಬಳಿಕ ಹೆಜಮಾಡಿ ನೋಂದಣಿಯ ಕಾರುಗಳಿಗೆ ಹಾಗೂ ಹೆಜಮಾಡಿ ಕೋಡಿಗೆ ತೆರಳುವ 4 ಬಸ್ಸುಗಳಿಗೆ ವಿನಾಯಿತಿ ನೀಡಲಾಗಿತ್ತು. ಆದರೆ ಕೆಲವು ದಿನಗಳ ಹಿಂದೆ ಹೆಜಮಾಡಿ ಕೋಡಿಗೆ ತೆರಳುವ ಬಸ್ಸುಗಳ ವಿನಾಯಿತಿಯನ್ನೂ ರದ್ದುಪಡಿಸಲಾಗಿತ್ತು. ಇದರಿಂದ ಅದನ್ನೇ ನಂಬಿದ್ದ ಈ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ವಯೋವೃದ್ಧರಿಗೆ ತೀವ್ರ ಸಮಸ್ಯೆಯಾಗಿತ್ತು. ಇದನ್ನು ಮನಗಂಡು ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ ನೇತೃತ್ವದಲ್ಲಿ ಎಲ್ಲಾ ಸದಸ್ಯರು ಹೆಜಮಾಡಿ ನವಯುಗ್ ಟೋಲ್‍ಗೆ ತೆರಳಿ ಲಿಖಿತ ಮನವಿ ಸಲ್ಲಿಸಿ ಟೋಲ್ ವಿನಾಯಿತಿಯನ್ನು ಮುಂದುವರಿಸು ವಂತೆ ಮನವಿ ಮಾಡಲಾಗಿತ್ತು. ಈ ಸಂದರ್ಭ ಮೌಖಿಕವಾಗಿ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯಿತಾದರೂ ದಿನ ಕಳೆದ ಬಳಿಕ ವಿನಾಯಿತಿ ನೀಡಲು ನಿರಾಕರಿಸಲಾಗಿತ್ತು.

ಇದರಿಂದ ಅಸಮಾಧಾನಗೊಂಡ ಪಂಚಾಯಿತಿ ಸದಸ್ಯರು ಮಂಗಳವಾರ ಬೆಳಿಗ್ಗೆ ಹೆಜಮಾಡಿ ಒಳ ರಸ್ತೆಯ ಟೋಲ್ ಪಕ್ಕ ಪ್ರತ್ಯೇಕ ರಸ್ತೆ  ನಿರ್ಮಿಸಿ ಎಲ್ಲಾ ವಾಹನಗಳಿಗೆ ಟೋಲ್ ರಹಿತ ಪ್ರಯಾಣಕ್ಕೆ ಅವಕಾಶಮಾಡಿಕೊಟ್ಟರು. ಟೋಲ್ ಕಂಪನಿಯ ವ್ಯವಸ್ಥಾಪಕ ಶಿವಪ್ರಸಾದ್ ರೈಯವರನ್ನು ಘಟನಾ ಸ್ಥಳಕ್ಕೆ ಬಂದು ರಸ್ತೆ ಕಾಮಗಾರಿ ಸ್ಥಗಿತಗೊಳಿಸುವಂತೆ ವಿನಂತಿಸಿದರು.

ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಕೆಗೆ ಪ್ರಯತ್ನಿಸಿದರು. ತಕ್ಷಣ ಲಿಖಿತ ಭರವಸೆ ನೀಡಿದಲ್ಲಿ ರಸ್ತೆ ಬಂದ್ ಮಾಡುವ ಭರವಸೆ ನೀಡಿದ ಬಳಿಕ ನವಯುಗ್ ಕಂಪನಿಯು ತರಾತುರುಯಲ್ಲಿ ಲಿಖಿತ ಭರವಸೆ ನೀಡಿತು.

ವಾಹನಗಳಿಗೆ ರಿಯಾಯಿತಿ: ನವಯುಗ್ ಟೋಲ್‍ಗೆ ಸಂಬಂಧಪಟ್ಟ ಲೇನ್ 15 ಮತ್ತು 16ರಲ್ಲಿ(ಹೆಜಮಾಡಿ ಒಳ ರಸ್ತೆಯ ಟೋಲ್) ಸಂಚರಿಸುವ ಹೆಜಮಾಡಿ ವ್ಯಾಪ್ತಿಗೆ ಸಂಬಂಧಿಸಿದ ಎಲ್ಲಾ ಲಘು, ವಾಣಿಜ್ಯ ವಾಹನ. ಕಾರು ಮತ್ತು ಹೆಜಮಾಡಿ ಕೋಡಿ ಗ್ರಾಮಕ್ಕೆ ತೆರಳುವ ಖಾಸಗಿ ಬಸ್ಸು ಹಾಗೂ ಶಾಲಾ ವಾಹನಗಳಿಗೆ ಟೋಲ್ ವಿನಾಯಿತಿಯನ್ನು ನೀಡಿರುವುದಾಗಿ  ಲಿಖಿತ ಭರವಸೆಯಲ್ಲಿ ತಿಳಿಸಲಾಗಿದೆ.

ಬುಧವಾರ ಸಭೆ: ಬುಧವಾರ ನವಯುಗ್ ಕಂಪನಿಯ ಅಧಿಕಾರಿ ರಾಮಕೃಷ್ಣ ಹೆಜಮಾಡಿಗೆ ಆಗಮಿಸಿ ಹೆಜಮಾಡಿ ಗ್ರಾಮ ಪಂಚಾಯತ್ ಹಾಗೂ ಪೋಲಿಸ್ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಲಿದ್ದಾರೆ. ಇತರ ಬೇಡಿಕೆಗಳ ಬಗ್ಗೆ ಹಾಗೂ ಈಗಿರುವ ವಿನಾಯಿತಿಯನ್ನು ಶಾಶ್ವತಗೊಳಿಸುವ ಬಗ್ಗೆ ಚರ್ಚೆ ನಡೆಯಲಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X