Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ...

ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ

ರಾಷ್ಟ್ರಗೀತೆಗೆ ವ್ಹೀಲ್‌ಚೇರ್‌ನಿಂದ ಎದ್ದುನಿಂತ ಪಶ್ಚಿಮ ಬಂಗಾಳ ಸಿಎಂ

ವಾರ್ತಾಭಾರತಿವಾರ್ತಾಭಾರತಿ31 March 2021 9:35 AM IST
share
ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ :  ಮಮತಾ ಬ್ಯಾನರ್ಜಿ

ನಂದಿಗ್ರಾಮ (ಪಶ್ಚಿಮ ಬಂಗಾಳ): ನಂದಿಗ್ರಾಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆ ಬಯಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ತಮ್ಮ ಪ್ರಚಾರ ಅಭಿಯಾನವನ್ನು ಭರ್ಜರಿಯಾಗಿ ಮುಗಿಸಿದರು. ರಾಷ್ಟ್ರಗೀತೆ ಹಾಡುವ ವೇಳೆ ವ್ಹೀಲ್‌ಚೇರ್‌ನಿಂದ ಎದ್ದುನಿಂತು ಗೌರವ ಸೂಚಿಸಿ ಗಮನ ಸೆಳೆದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಮಾಜಿ ಸಹವರ್ತಿ ಸುವೇಂಧು ಅಧಿಕಾರಿ ನಡುವಿನ ಹೋರಾಟದಿಂದಾಗಿ ನಂದಿಗ್ರಾಮ ಕ್ಷೇತ್ರ ರಾಷ್ಟ್ರದ ಗಮನ ಸೆಳೆದಿದೆ. ಈ ಕ್ಷೇತ್ರದಲ್ಲಿ ಗುರುವಾರ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಮುಕ್ತಾಯವಾಯಿತು.

ನಾಮಪತ್ರ ಸಲ್ಲಿಕೆ ದಿನ ಕಾಲಿಗೆ ತೀವ್ರ ಗಾಯವಾಗಿದ್ದ ಮಮತಾ ಬ್ಯಾನರ್ಜಿ ವ್ಹೀಲ್‌ಚೇರ್‌ನಲ್ಲಿ ಕುಳಿತೇ ರಾಜ್ಯಾದ್ಯಂತ ಪ್ರಚಾರ ನಡೆಸಿದ್ದರು. ತಮ್ಮ ಪ್ರತಿ ಪ್ರಚಾರ ಭಾಷಣದಲ್ಲಿ, "ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ" ಎಂದು ಒತ್ತಿ ಹೇಳಿದ್ದರು.

ಅವರು ರಾಷ್ಟ್ರಗೀತೆ ವೇಳೆ ವ್ಹೀಲ್‌ಚೇರ್‌ನಿಂದ ಎದ್ದು ನಿಲ್ಲುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಇದನ್ನು ಮಾಸ್ಟರ್‌ಸ್ಟ್ರೋಕ್ ಎಂದು ಬಣ್ಣಿಸಲಾಗಿದೆ.

ಹತ್ತು ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣವಾಗಿದ್ದ ನಂದಿಗ್ರಾಮ, 35 ವರ್ಷಗಳ ಎಡರಂಗ ಸರ್ಕಾರದ ಆಡಳಿತವನ್ನು ಕೊನೆಗೊಳಿಸಿತ್ತು. ಈ ಬಾರಿಯ ಚುನಾವಣೆ ಹೋರಾಟ ಅವರ ವೃತ್ತಿಜೀವನದಲ್ಲೇ ಕಠಿಣ ಹೋರಾಟ ಎಂದು ವಿಶ್ಲೇಷಿಸಲಾಗುತ್ತಿದೆ. ಸುವೇಂಧು ಅಧಿಕಾರಿಗೆ ನಂದಿಗ್ರಾಮವನ್ನು ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು.

ಎಡರಂಗ ಸರ್ಕಾರ ಭೂಮಿಸ್ವಾಧೀನಪಡಿಸಿಕೊಂಡಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ತಳಮಟ್ಟದ ಸಂಘಟನೆ ಮಾಡಿದ್ದ ಸುವೇಂಧು ಅಧಿಕಾರಿ ತೀರಾ ಇತ್ತೀಚಿನವರೆಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿಕಟವರ್ತಿಯಾಗಿದ್ದರು. ಇತ್ತೀಚೆಗೆ ಬಿಜೆಪಿ ಸೇರುವ ಮೂಲಕ ದೀದಿ ವಿರುದ್ಧ ಸಮರ ಸಾರಿದ್ದರು.

নিজের শরীরের উপর নেমে আসা আঘাতকে উপেক্ষা করে জাতীয় সঙ্গীত চলাকালীন উঠে দাঁড়ালেন দিদি। দেশাত্মবোধের প্রতি আন্তরিক শ্রদ্ধা জানিয়ে উঠে দাঁড়ান দিদি।#BanglaNijerMeyekeiChay #BanglarGorboMamata #MamataBanerjee #Didi #NationalAnthem pic.twitter.com/8yjXR1hp9i

— Dinesh Singh (@DineshS96565252) March 31, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X