Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚುತ್ತಿರುವ ಕೊರೋನ: ನೂತನ ಮಾರ್ಗಸೂಚಿ...

ಹೆಚ್ಚುತ್ತಿರುವ ಕೊರೋನ: ನೂತನ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ31 March 2021 8:36 PM IST
share
ಹೆಚ್ಚುತ್ತಿರುವ ಕೊರೋನ: ನೂತನ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು, ಮಾ.31: ರಾಜ್ಯ ಸರಕಾರವು ಕೋವಿಡ್-19 ವೈರಾಣು ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎ.1 ರಿಂದ 30ರವರೆಗೆ ಜಾರಿಯಲ್ಲಿರುವಂತೆ ನೂತನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಬಿಬಿಎಂಪಿ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖಾ ಮುಖ್ಯಸ್ಥರು ಮತ್ತು ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವ ತಾಲೂಕು, ವಾರ್ಡ್ ಗಳಲ್ಲಿ ಗಣನೀಯವಾಗಿ ಹೆಚ್ಚಿನ ಪರೀಕ್ಷೆಗಳನ್ನು ನಡೆಸಬೇಕು. ಆರ್‍ಟಿಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನು ಶೇ.70ರಷ್ಟು ಅಥವಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗದಿಪಡಿಸಿದಂತೆ ಹೆಚ್ಚಿಸಲು ಪ್ರಯತ್ನಿಸಬೇಕು. ಆರ್ಟಿಪಿಸಿಆರ್ ಪರೀಕ್ಷೆಗಳ ಪ್ರಮಾಣವು ಕಡಿಮೆ ಇರುವ ತಾಲೂಕು ಹಾಗೂ ನಗರ ವಾರ್ಡ್ ಗಳಲ್ಲಿ ನಿಗದಿತ ಮಟ್ಟವನ್ನು ತಲುಪಲು ಪರೀಕ್ಷೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬೇಕು.

ಹೊಸ ಪಾಸಿಟಿವ್ ಪ್ರಕರಣಗಳನ್ನು ಪ್ರತ್ಯೇಕಿಸಬೇಕು ಮತ್ತು ಸೋಂಕಿತರ ಸಂಪರ್ಕಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಪ್ರತ್ಯೇಕಿಸಬೇಕು. ಕಂಟೈನ್ಮೆಂಟ್ ವಲಯಗಳನ್ನು ಗುರುತಿಸಿ ಅಂತಹ ವಲಯಗಳಲ್ಲಿ ಧಾರಕ ಕ್ರಮಗಳನ್ನು ಜಾರಿಗೆ ತರಬೇಕು. ಜಿಲ್ಲಾಡಳಿತಗಳು ತಳ ಹಂತದಲ್ಲಿ ಕಂಟೈನ್ಮೆಂಟ್ ವಲಯಗಳ ಗಡಿ ಗುರುತಿಸುವಿಕೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು.

ಕಂಟೈನ್ಮೆಂಟ್ ವಲಯಗಳ ಮಾಹಿತಿಯನ್ನು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು ಮತ್ತು ಸ್ಥಳೀಯ ಪ್ರಾಧಿಕಾರಗಳ ಮೂಲಕ ವೆಬ್‍ಸೈಟ್‍ನಲ್ಲಿ ಅಳವಡಿಸಬೇಕು ಹಾಗೂ ಈ ಮಾಹಿತಿಯನ್ನು ನಿರಂತರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದೊಂದಿಗೆ ಹಂಚಿಕೊಳ್ಳಬೇಕು.

ಕಂಟೈನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿ: ಕಂಟೈನ್ಮೆಂಟ್ ವಲಯಗಳಲ್ಲಿ ಅತ್ಯಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ ಕಲ್ಪಿಸಬೇಕು. ಅಗತ್ಯ ಸರಕು ಪೂರೈಕೆ ಹಾಗೂ ತುರ್ತು ಆರೋಗ್ಯ ಸೇವೆ ಹೊರತುಪಡಿಸಿ ಈ ವಲಯಗಳಲ್ಲಿ ಹೊರ ಹೋಗುವ ಅಥವಾ ಒಳಗೆ ಬರುವ ಜನರ ಚಲನವಲನಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ಈ ಉದ್ದೇಶಕ್ಕಾಗಿ ರಚಿಸಲಾಗಿರುವ ಕಣ್ಗಾವಲು ತಂಡಗಳು ನಿರಂತರವಾಗಿ ಮನೆ-ಮನೆ ಪರಿಶೀಲನೆ ನಡೆಸಬೇಕು.

ನಿಗದಿಪಡಿಸಿದ ಶಿಷ್ಟಾಚಾರದೊಂದಿಗೆ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಕೋವಿಡ್-19 ಪಾಸಿಟಿವ್ ಕಂಡು ಬಂದಿರುವ ವ್ಯಕ್ತಿಯ ಸಂಪರ್ಕ ಹೊಂದಿರುವ ಎಲ್ಲ ವ್ಯಕ್ತಿಗಳನ್ನು ಪಟ್ಟಿ ಮಾಡಿ, ಪತ್ತೆ ಮಾಡಿ, ಗುರುತಿಸಿ, ನಿರ್ಬಂಧಿಸಿ ಮತ್ತು 14 ದಿನಗಳ ವರೆಗೆ ನಿಗಾ ಇಡಬೇಕು (ಶೇ.80ರಷ್ಟು ಸಂಪರ್ಕಿತರನ್ನು 72 ಗಂಟೆಗಳೊಳಗೆ ಅಥವಾ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊರ ತಂದಿರುವ ಎಸ್‍ಓಪಿಗಳ ಅನ್ವಯ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚಬಹುದು).

ಐಎಲ್‍ಐ/ಎಸ್‍ಎಆರ್‍ಐ ಪ್ರಕರಣಗಳನ್ನು ಆರೋಗ್ಯ ಸೌಲಭ್ಯ ಅಥವಾ ಮೊಬೈಲ್ ಕ್ಲಿನಿಕ್‍ಗಳ ಅಥವಾ ಬಫರ್ ವಲಯಗಳ ಫೀವರ್ ಕ್ಲಿನಿಕ್‍ಗಳ ಮೂಲಕ ಕಣ್ಗಾವಲಿರಿಸಬೇಕು. ಕಂಟೈನ್‍ಮೆಂಟ್ ವಲಯಗಳ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದಲ್ಲಿ, ಬಿಬಿಎಂಪಿ, ಜಿಲ್ಲಾಡಳಿತ, ತಾಲೂಕು ಪ್ರಾಧಿಕಾರಗಳು ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಬೇಕು.

ದಂಡ ವಿಧಿಸಿ: ಮಾಸ್ಕ್ ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ 250 ರೂ.ಮತ್ತು ಇನ್ನಿತರ ಪ್ರದೇಶಗಳಲ್ಲಿ 100 ರೂ.ದಂಡವನ್ನು ವಿಧಿಸಲು ಬಿಬಿಎಂಪಿ, ಜಿಲ್ಲಾ ಪ್ರಾಧಿಕಾರಗಳು, ಸ್ಥಳೀಯ ಪ್ರಾಧಿಕಾರಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

ಸುರಕ್ಷಿತ ಅಂತರ: ಕೋವಿಡ್-19 ಹರಡುವಿಕೆ ತಡೆಗಟ್ಟಲು ಸಾರ್ವಜನಿಕ ವಲಯಗಳಲ್ಲಿ, ವಾರದ ಸಂತೆಗಳಲ್ಲಿ, ಸಾರ್ವಜನಿಕ ಸಾರಿಗೆ ಮತ್ತು ಜನಸಂದಣಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದನ್ನು ನಿಗಾವಹಿಸಬೇಕು. ವಿಮಾನಯಾನ, ರೈಲು ಸೇವೆ ಮತ್ತು ಮೆಟ್ರೋ ರೈಲು ಸಂಚಾರದ ಕುರಿತು ಈಗಾಗಲೆ ಪ್ರಮಾಣಿತ ಕಾರ್ಯ ವಿಧಾನಗಳು ಜಾರಿಯಲ್ಲಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಸ್‍ಗಳು, ದೋಣಿ ಸೇರಿದಂತೆ ಇತ್ಯಾದಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಲ್ಲಿಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸೂಕ್ತ.

ಪ್ರಸ್ತುತ ಪರಿಸ್ಥಿತಿಯಲ್ಲಿ ಲಸಿಕಾ ಕಾರ್ಯದಿಂದ ಕೋವಿಡ್-19 ಸೋಂಕು ಪ್ರಸರಣದ ಸರಪಳಿ ತುಂಡರಿಕೆ ಕಠಿಣವಾಗಿದೆ. ಆದುದರಿಂದ, ಕೇಂದ್ರ ಸರಕಾರವು ಅನುಮೋದಿಸಿರುವ ‘ಎನ್‍ಇಜಿವಿಎಸಿ’ ಶಿಫಾರಸ್ಸಿನನ್ವಯ ಬಿಬಿಎಂಪಿ, ಜಿಲ್ಲಾ ಮತ್ತು ಸ್ಥಳೀಯ ಪ್ರಾಧಿಕಾರಗಳು ಪ್ರಾಧಾನ್ಯತೆ ಹೊಂದಿದ ಗುಂಪುಗಳಲ್ಲಿ ಲಸಿಕಾ ಕಾರ್ಯದ ಪ್ರಗತಿಗೆ ಶೀಘ್ರವಾಗಿ ಕ್ರಮ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X