Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಸ್ಎಫ್ ಗೆ ಆಯ್ಕೆಯಾದ ಬ್ಯಾರೀಸ್...

ಬಿಎಸ್ಎಫ್ ಗೆ ಆಯ್ಕೆಯಾದ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಹೆಚ್.

ವಾರ್ತಾಭಾರತಿವಾರ್ತಾಭಾರತಿ1 April 2021 6:48 PM IST
share
ಬಿಎಸ್ಎಫ್ ಗೆ ಆಯ್ಕೆಯಾದ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಹೆಚ್.

ಕುಂದಾಪುರ, ಎ.1: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ, ಬೈಂದೂರು ತಾಲೂಕಿನ ಏಳಜಿತ್ ಗ್ರಾಮದ ಹುಣ್ಸೆಮಕ್ಕಿಯ ರಮೇಶ್ ಗೌಡ ಹಾಗೂ ಪಾರ್ವತಿ ದಂಪತಿಯ ಪುತ್ರಿ ವಿದ್ಯಾ ಎಚ್. ಭಾರತೀಯ ಗಡಿ ಭದ್ರಾ ಪಡೆ(ಬಿಎಸ್‌ಎಫ್)ಗೆ ಆಯ್ಕೆಯಾಗಿದ್ದಾರೆ.

ಬ್ಯಾರೀಸ್ ಶಿಕ್ಷಣ ಸಂಸ್ಥೆಯ 2018-19ನೆ ಸಾಲಿನ ಬಿಎಡ್ ವಿದ್ಯಾಥಿನಿಯಾಗಿದ್ದ ಇವರು, ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವು ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಸೇನಾ ಸಮವಸ್ತ್ರ ಧರಿಸುವ ವೃತ್ತಿಯನ್ನು ಮಾಡಬೇಕು ಮತ್ತು ಮಹಿಳೆ ಪುರುಷರಷ್ಟೇ ಸಮರ್ಥಳು ಎಂಬುದನ್ನು ನಿರೂಪಿಸಬೇಕೆಂಬ ಮಹದಾಸೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಹೊಂದಿದವರಾಗಿದ್ದರು. ಅವರ ಈ ಸಾಧನೆ ಯಿಂದ ಸ್ಪೂರ್ತಿಗೊಂಡು ನಮ್ಮ ವಿದ್ಯಾರ್ಥಿಗಳು ಸೇನೆಗೆ ಸೇರ್ಪಡೆಯಾಗಬೇಕು ಎಂಬುದು ನನ್ನ ಅಭಿಲಾಷೆ ಎಂದು ಬ್ಯಾರೀಸ್ ಸಮೂಹದ ಅಧ್ಯಕ್ಷ ಸಯ್ಯದ್ ಮುಹಮ್ಮದ್ ಬ್ಯಾರಿ ಪ್ರತಿಕ್ರಿಯಿಸಿದ್ದಾರೆ.

ಅದೇ ರೀತಿ ವಿದ್ಯಾ ಅವರ ಈ ಹೆಮ್ಮೆಯ ಸಾಧನೆಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್, ನಿರ್ದೇಶಕರು, ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ರಮೇಶ್ ಗೌಡ ಕೃಷಿಕರಾಗಿದ್ದು, ಇವರ ಇಬ್ಬರು ಮಕ್ಕಳಲ್ಲಿ ವಿದ್ಯಾ ಕಿರಿಯವಳು. ವಿದ್ಯಾ ಸಹೋದರ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದ್ಯಾ ಪ್ರಾಥಮಿಕ ಶಿಕ್ಷಣವನ್ನು ಏಳಜಿತ್ ಶಾಲೆಯಲ್ಲಿ, ಹೈಸ್ಕೂಲ್ ಶಿಕ್ಷಣವನ್ನು ಕೊಲ್ಲೂರಿನಲ್ಲಿ, ಪಿಯುಸಿ ಕುಂದಾಪುರ ಜ್ಯೂನಿಯರ್ ಕಾಲೇಜಿನಲ್ಲಿ, ಬಿಎಸ್ಸಿ ಪದವಿಯನ್ನು ಕುಂದಾಪುರ ಭಂಡರ್‌ಕಾರ್ಸ್ ಕಾಲೇಜಿನಲ್ಲಿ ಪಡೆದಿದ್ದಾರೆ. ಮದ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸೇನಾ ತರಬೇತಿ ಪಡೆಯಲು ತೆರಳಿರುವ ವಿದ್ಯಾ, ಇಂದಿನಿಂದ ತರಬೇತಿ ಪಡೆಯುತ್ತಿದ್ದಾರೆ.

ಮನೆಯವರ ಪ್ರೋತ್ಸಾಹ ಇಲ್ಲದ ಕಾರಣ ಹೆಣ್ಣು ಮಕ್ಕಳು ಸೇನೆಗೆ ಸೇರುತ್ತಿಲ್ಲ ಮತ್ತು ಹೆಣ್ಣು ಮಕ್ಕಳನ್ನು ಕೇವಲ ಅಡುಗೆ ಮನೆಗಳಿಗೆ ಸೀಮಿತ ಮಾಡಲಾಗುತ್ತಿದೆ. ಈ ಮನೋಭಾವ ಬದಲಾಯಿಸುವ ನಿಟ್ಟಿನಲ್ಲಿ ನಾನು ಸೇನೆಗೆ ಸೇರಿದ್ದೇನೆ. ಮಹಿಳೆಯರು ಏನು ಬೇಕಾದರೂ ಸಾಧಿಸಬಹುದು ಎಂಬುದನ್ನು ತೋರಿಸುತ್ತೇನೆ. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ಇದೆ. ಅದನ್ನು ನಾವು ಬಳಸಿಕೊಳ್ಳಬೇಕು. ಪೊಲೀಸ್, ಸೈನ್ಯದಂತಹ ಸಮವಸ್ತ್ರದ ಕೆಲಸಕ್ಕೆ ಸೇರಬೇಕೆಂಬ ಆಸೆ ನನಗೆ ಮೊದಲಿನಿಂದಲೂ ಇತ್ತು. ಈ ಹಿಂದೆ ಸೈನ್ಯದವರನ್ನು ನೋಡುವಾಗ ನನಗೆ ಹೆಮ್ಮೆ ಎನಿಸುತ್ತಿತ್ತು. ಈಗ ಆ ಸ್ಥಾನದಲ್ಲಿ ನಾನು ಇದ್ದೇನೆ ಎಂಬುದು ನನಗೆ ತುಂಬಾ ಸಂತೋಷ ಆಗುತ್ತಿದೆ.
-ವಿದ್ಯಾ ಎಚ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X