Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರ, ತೆಲಂಗಾಣದ ಹಲವು ವಕೀಲರು,...

ಆಂಧ್ರ, ತೆಲಂಗಾಣದ ಹಲವು ವಕೀಲರು, ಹೋರಾಟಗಾರರು, ಪತ್ರಕರ್ತರ ನಿವಾಸ, ಕಚೇರಿಗಳ ಮೇಲೆ ಎನ್‍ಐಎ ದಾಳಿ

ಮಾವೋವಾದಿಗಳೊಂದಿಗಿನ ನಂಟು ಆರೋಪ

ವಾರ್ತಾಭಾರತಿವಾರ್ತಾಭಾರತಿ1 April 2021 2:06 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಂಧ್ರ, ತೆಲಂಗಾಣದ ಹಲವು  ವಕೀಲರು, ಹೋರಾಟಗಾರರು, ಪತ್ರಕರ್ತರ ನಿವಾಸ, ಕಚೇರಿಗಳ ಮೇಲೆ ಎನ್‍ಐಎ ದಾಳಿ

ಹೊಸದಿಲ್ಲಿ, ಎ.1: ಮಾವೋವಾದಿಗಳ ಜೊತೆ ನಂಟು ಹೊಂದಿದ್ದಾರೆಂದು ಆರೋಪಿಸಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ 25ಕ್ಕೂ ಅಧಿಕ ಮಂದಿ ಮಾನವಹಕ್ಕು, ದಲಿತ, ಮಹಿಳಾ ಹಾಗೂ ಆದಿವಾಸಿ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಮಾರ್ಚ್ 31ರಂದು ಏಕಕಾಲದಲ್ಲಿ ದಾಳಿ ನಡೆಸಿದೆ.

ಬುಧವಾರ ಆರಂಭವಾದ ಎನ್‌ಐಎ ದಾಳಿ ಕಾರ್ಯಾಚರಣೆಯು ಗುರುವಾರ ಮುಂಜಾನೆಯವರೆಗೂ ಮುಂದುವರಿಯಿತೆಂದು ನಾಗರಿಕ ಸ್ವಾತಂತ್ರಗಳ ಜನತಾ ಒಕ್ಕೂಟ (ಪಿಯುಸಿಎಲ್) ಹೇಳಿದೆ. ಎನ್‌ಐಎ ಅಧಿಕಾರಿಗಳು, ಸಾಮಾಜಿಕ, ಮಾನ ವಹಕ್ಕುಗಳ ಹೋರಾಟಗಾರರ ನಿವಾಸದಿಂದ ಫೋನ್, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಪುಸ್ತಕಗಳು ಹಾಗೂ ದಾಖಲೆಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆಂದು ಅದು ಹೇಳಿದೆ.

ತೆಲಂಗಾಣ ಹೈಕೋರ್ಟ್ ನ್ಯಾಯವಾದಿ ಹಾಗೂ ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರಗಳ ಸಮಿತಿಯ ಜೊತೆ ನಂಟು ಹೊಂದಿರುವ ರಘುನಾಥ್ ವೆರೋಸ್, ಜನ ನಾಟ್ಯ ಮಂಡಳಿಯ ಸದಸ್ಯ ಡಪ್ಪು ರಮೇಶ್, ಮಾನವಹಕ್ಕುಗಳ ವೇದಿಕೆಯ ಕಾರ್ಯಕರ್ತ ವಿ.ಎಸ್.ಕೃಷ್ಣ ಮತ್ತು ಕ್ರಾಂತಿಕಾರಿ ಬರಹಗಾರರ ಸಂಘದ ಪಾಣಿ, ವರಲಕ್ಷ್ಮಿ ಹಾಗೂ ಅರುಣ್ ಅವರಲ್ಲಿ ಪ್ರಮುಖರು ಎಂದು ಪಿಯುಸಿಎಲ್ ಹೇಳಿದೆ..

ಚೈತನ್ಯ ಮಹಿಳಾ ಸಂಘದ ದೇವೇಂದ್ರ, ಶಿಲ್ಪಾ, ಸ್ವಪ್ನಾ, ರಾಜೇಶ್ವರಿ ಹಾಗೂ ಪದ್ಮಾ, ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯಗಳ ಸಮಿತಿಯ ಚಿಲಿಕಾ ಚಂದ್ರಶೇಖರ, ರಘುನಾಥ ಹಾಗೂ ಚಿಟ್ಟಿಬಾಬು, ಮಾನವಹಕ್ಕುಗಳ ವೇದಿಕೆಯ ಕೃಷ್ಣ, ಅಮರುಲಾ ಬಂಧು ಮಿತ್ರುಲಾ ಸಂಘಂನ ಸಿರಿಶಾ ಹಾಗೂ ನ್ಯಾಯವಾದಿ ಕೆ.ಎಸ್.ಚೇಲಂ ಅವರ ನಿವಾಸಗಳ ಮೇಲೂ ದಾಳಿ ನಡೆದಿರುವುದಾಗಿ ಪಿಯುಸಿಎಲ್ ತಿಳಿಸಿದೆ.

ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿದ್ದಾನೆಂದು ಆರೋಪಿಸಲಾಗಿರುವ ಪತ್ರಕರ್ತ ಪರಾಂಗಿ ನಾಗಣ್ಣ ಅವರನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಗ್ರಾಮಾಂತರ ಜಿಲ್ಲೆಯಲ್ಲಿ ಬಂಧಿಸಿದ ಬಳಿಕ ಎನ್‌ಐಎ ಈ ದಾಳಿಗಳನ್ನು ನಡೆಸಿದೆ.

ನಾಗಣ್ಣ ಮಾವೋವಾದಿ ಸಾಹಿತ್ಯ, ವಯರ್‌ಗಳ ಕಂತೆಗಳು ಹಾಗೂ ಔಷಧಿಗಳನ್ನು ಒಯ್ಯುತ್ತಿದ್ದನೆಂದು ಪೊಲೀಸರು ಆರೋಪಿಸಿದ್ದಾರೆ. ಉನ್ನತ ಮಾವೋವಾದಿ ನಾಯಕರು ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳ ನಡುವೆ ಮಾತುಕತೆಗಳಿಗೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ನಾಗಣ್ಣ ವಿಚಾರಣೆಯ ವೇಳೆ ತಿಳಿಸಿದ್ದಾನೆಂದು ಪೊಲೀಸರು ಹೇಳಿಕೊಂಡಿದ್ದಾರೆ

ಎನ್‌ಐಎ ದಾಳಿಯನ್ನು ಪಿಯುಸಿಎಲ್ ತೀವ್ರವಾಗಿ ಖಂಡಿಸಿದ್ದು ಸರಕಾರವು ಸಾಮಾಜಿಕ ಕಾರ್ಯಕರ್ತರನ್ನು ಬೇಟೆಯಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಎಲ್ಲಾ ಹೋರಾಟಗಾರರು ಭಾರತ ಸರಕಾರ ಮತ್ತು ಆಂಧ್ರ, ತೆಲಂಗಾಣ ರಾಜ್ಯ ಸರಕಾರಗಳ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳನ್ನು ಪ್ರಶ್ನಿಸುತ್ತಿದ್ದರು. ಮಹಿಳೆಯರ ವಿರುದ್ಧ ಜಾತಿ ಹಾಗೂ ಪಿತೃಪ್ರದಾನ ಸಮಾಜದ ಹಿಂಸಾಚಾರಗಳನ್ನು, ಮುಸ್ಲಿಮರ ವಿರುದ್ಧ ಕೇಸರಿ ಶಕ್ತಿಗಳ ದಾಳಿಗಳನ್ನು, ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ನಾಶವನ್ನು ಮತ್ತು ಜನರ ಭೂ ಹಾಗೂ ಕಾಡಿನ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿದ್ದರು ಎಂದು ಪಿಯುಸಿಎಲ್ ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಅತ್ಯಾಚಾರ ಸಂತ್ರಸ್ತೆಯರ ಪರ ಹೋರಾಟಗಾರ ಎಸ್.ವಿ.ಕೃಷ್ಣರನ್ನು ಬೆದರಿಸಲು ಎನ್‌ಐಎ ಯತ್ನ: ಮಾನವಹಕ್ಕುಗಳ ವೇದಿಕೆ ಆರೋಪ

  2007ರಿಂದ ವಕಾಪಲ್ಲಿ ಅತ್ಯಾಚಾರ ಸಂತ್ರಸ್ತರ ಪರವಾಗಿ ಹೋರಾಟ ನಡೆಸುತ್ತಿರು ಮಾನವಹಕ್ಕು ಹೋರಾಟಗಾರ ವಿ.ಎಸ್.ಕೃಷ್ಣ ಅವರನ್ನು ಬೆದರಿಸಲು ಎನ್‌ಐಎ ದಾಳಿ ನಡೆಸಿರುವುದಾಗಿ ಮಾನವಹಕ್ಕುಗಳ ವೇದಿಕೆ ಆರೋಪಿಸಿದೆ. ವಿ.ಎಸ್.ಕೃಷ್ಣ ಅವರು ಮಾನವಹಕ್ಕು ವೇದಿಕೆಯ ಸಮನ್ವಯಕಾರರಾಗಿದ್ದಾರೆ.

ಆಂಧ್ರಪ್ರದೇಶ ಪೊಲೀಸ್ ಪಡೆಯ ಗ್ರೇಹೌಂಡ್ ದಳದ ಸಿಬ್ಬಂದಿಗಳ ವಿರುದ್ಧ ಸುಳ್ಳು ಸಾಕ್ಷ ನೀಡುವಂತೆ ಕೃಷ್ಣ ಅವರು ಅತ್ಯಾಚಾರ ಸಂತ್ರಸ್ತೆಯರಿಗೆ ಕುಮ್ಮಕ್ಕು ನೀಡಿದ್ದರೆಂದು ಎನ್‌ಐಎ ಆರೋಪಿಸಿದೆ.

 2007ರಲ್ಲಿ ನಡೆದ ವಕಪಲ್ಲಿ ಅತ್ಯಾಚಾರ ಪ್ರಕರಣದಲ್ಲಿ 13 ಗ್ರೇಹೌಂಡ್ ಸಿಬ್ಬಂದಿ ವಕಾಪಲ್ಲಿ ಬುಡಕಟ್ಟು ಗ್ರಾಮದ ಮೇಲೆ ದಾಳಿ ನಡೆಸಿ 11 ಮಂದಿ ಆದಿವಾಸಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿತ್ತೆಂದು ಆರೋಪಿಸಲಾಗಿತ್ತು.ಪ್ರಕರಣದ ವಿಚಾರಣೆಯನ್ನು ವಿಶಾಖಪಟ್ಟಣಂನ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯ ನಡೆಸುತ್ತಿದೆ 13 ಆರೋಪಿ ಪೊಲೀಸರ ವಿರುದ್ಧ ವಿಚಾರಣೆ ನಡೆಯುತ್ತಿದ್ದು, 11 ಸಂತ್ರಸ್ತೆಯರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X