Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೆನ್ನೈ: ಕೊರೋನ ಸೋಂಕಿಗೆ ಬಲಿಯಾದ ವೈದ್ಯರ...

ಚೆನ್ನೈ: ಕೊರೋನ ಸೋಂಕಿಗೆ ಬಲಿಯಾದ ವೈದ್ಯರ ಮೃತದೇಹದ ಮರು ಅಂತ್ಯಕ್ರಿಯೆಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ1 April 2021 10:11 PM IST
share
ಚೆನ್ನೈ: ಕೊರೋನ ಸೋಂಕಿಗೆ ಬಲಿಯಾದ ವೈದ್ಯರ ಮೃತದೇಹದ ಮರು ಅಂತ್ಯಕ್ರಿಯೆಗೆ ಹೈಕೋರ್ಟ್ ಆದೇಶ

ಚೆನ್ನೈ, ಎ.1: ಕಳೆದ ವರ್ಷ ಕೊರೋನ ಸೋಂಕಿನಿಂದ ಮೃತಪಟ್ಟ ಬಳಿಕ ನಗರದ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿರುವ ವೈದ್ಯರೊಬ್ಬರ ಮೃತದೇಹವನ್ನು ಹೊರತೆಗೆದು ವಿಧಿವತ್ತಾಗಿ ಅಂತ್ಯಸಂಸ್ಕಾರ ನಡೆಸಲು ಅವಕಾಶ ನೀಡಬೇಕೆಂದು ಮದ್ರಾಸ್ ಹೈಕೋರ್ಟ್ ಗುರುವಾರ ಅಧಿಕಾರಿಗಳಿಗೆ ಸೂಚಿಸಿದೆ.

ಚೆನ್ನೈಯ ಖ್ಯಾತ ವೈದ್ಯ ಸೈಮನ್ ಹರ್ಕ್ಯುಲಸ್ ಕೊರೋನ ಸೋಂಕಿನಿಂದ ಕಳೆದ ವರ್ಷದ ಎಪ್ರಿಲ್ 19ರಂದು ಮೃತರಾಗಿದ್ದರು. ಕಿಲ್‌ಪಾಕ್ ಪ್ರದೇಶದ ದಫನಭೂಮಿಯಲ್ಲಿ ಮೃತದೇಹವನ್ನು ಸಮಾಧಿ ಮಾಡಲು ನಗರಪಾಲಿಕೆ ಅಧಿಕಾರಿಗಳು ಅನುಮತಿ ನೀಡಿದ್ದರು. ಆದರೆ ಕೊರೋನ ಸೋಂಕು ಹರಡುತ್ತದೆ ಎಂಬ ಆತಂಕ ಸೂಚಿಸಿದ ಸ್ಥಳೀಯರು ಅಲ್ಲಿ ಮೃತದೇಹ ಸಮಾಧಿಗೆ ವಿರೋಧ ಸೂಚಿಸಿದ್ದರಿಂದ ಮೃತದೇಹವಿದ್ದ ಆ್ಯಂಬುಲೆನ್ಸ್ ಅಣ್ಣಾನಗರ ದಫನಭೂಮಿಗೆ ತೆರಳಿತ್ತು. ಆದರೆ ಅಲ್ಲಿ ಸ್ಥಳೀಯರು ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ಮಾಡಿದರಲ್ಲದೆ ಆ್ಯಂಬುಲೆನ್ಸ್ ಮೇಲೆ ಕಲ್ಲು ಮತ್ತು ದೊಣ್ಣೆಯಿಂದ ಆಕ್ರಮಣ ನಡೆಸಿದರು.

ಘಟನೆಯಲ್ಲಿ ತೀವ್ರ ಗಾಯಗೊಂಡ ಆ್ಯಂಬುಲೆನ್ಸ್ ಚಾಲಕ, ನಗರಪಾಲಿಕೆ ಸಿಬ್ಬಂದಿ ಮತ್ತು ಅಧಿಕಾರಿ ಆ್ಯಂಬುಲೆನ್ಸ್ ಸಹಿತ ಮೃತದೇಹವನ್ನು ಅಲ್ಲೇ ಬಿಟ್ಟು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದರು. ಬಳಿಕ ರಾತ್ರಿ ವೇಳೆ ಪಿಪಿಇ ಕಿಟ್ ಧರಿಸಿ ಪೊಲೀಸರ ಬೆಂಗಾವಲಿನಲ್ಲಿ ಸ್ಥಳಕ್ಕೆ ಬಂದ ಸೈಮನ್‌ರ ಸಹೋದ್ಯೋಗಿಗಳು ತಾವೇ ಗುಂಡಿ ತೆಗೆದು ಸೈಮನ್ ಮೃತದೇಹವನ್ನು ಸಮಾಧಿ ಮಾಡಿದ್ದರು. ಹಲ್ಲೆ ಘಟನೆಗೆ ಸಂಬಂಧಿಸಿ ಪೊಲೀಸರು 22 ಮಂದಿಯನ್ನು ಬಂಧಿಸಿದ್ದರು. ಇದೀಗ, ಮೃತದೇಹವನ್ನು ಹೊರತೆಗೆದು ವಿಧಿವತ್ತಾಗಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಬೇಕೆಂದು ಕೋರಿ ಮೃತ ವೈದ್ಯರ ಪತ್ನಿ ಆನಂದಿ ಸೈಮನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಪೀಠ, ಕೊರೋನ ಸೋಂಕಿನ ವಿರುದ್ಧದ ಮಾರ್ಗಸೂಚಿಯನ್ನು ಪಾಲಿಸಿ, ಮೃತದೇಹವನ್ನು ಹೊರತೆಗೆದು ವೈದ್ಯರ ಕುಟುಂಬದವರು ಸೂಕ್ತ ರೀತಿಯಲ್ಲಿ ಅಂತ್ಯಸಂಸ್ಕಾರ ನಡೆಸುವುದಕ್ಕೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಹೂತಿರುವ ಮೃತದೇಹ ಹೊರತೆಗೆಯುವ ಪ್ರಕ್ರಿಯೆ ಚೆನ್ನೈ ಮಹಾನಗರಪಾಲಿಕೆ ಸೂಚಿಸುವ ಆರೋಗ್ಯ ಅಧಿಕಾರಿಯ ಉಸ್ತುವಾರಿಯಲ್ಲಿ ನಡೆಯಬೇಕು. ಕಿಲ್‌ಪಾಕ್ ಮತ್ತು ವೆಳಂಗಾಡು ದಫನ ಭೂಮಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಪೀಠ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X