Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂ.ಕೆ. ಸ್ಟಾಲಿನ್ ಅಳಿಯನ ನಿವಾಸ...

ಎಂ.ಕೆ. ಸ್ಟಾಲಿನ್ ಅಳಿಯನ ನಿವಾಸ ಸೇರಿದಂತೆ ನಾಲ್ಕು ಸ್ಥಳಗಳ ಮೇಲೆ ಐಟಿ ದಾಳಿ

ವಾರ್ತಾಭಾರತಿವಾರ್ತಾಭಾರತಿ2 April 2021 10:40 AM IST
share
ಎಂ.ಕೆ. ಸ್ಟಾಲಿನ್ ಅಳಿಯನ ನಿವಾಸ ಸೇರಿದಂತೆ ನಾಲ್ಕು ಸ್ಥಳಗಳ ಮೇಲೆ ಐಟಿ ದಾಳಿ

ಹೊಸದಿಲ್ಲಿ.2: ಡಿಎಂಕೆ ವರಿಷ್ಠ ಎಂ.ಕೆ.ಸ್ಟಾಲಿನ್ ಅವರ ಅಳಿಯ ಶಬರೀಶನ್ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ದಾಳಿಗಳನ್ನು ನಡೆಸಿದ್ದಾರೆ. ಚೆನ್ನೈನಲ್ಲಿ ಶಬರೀಶನ್ ಒಡೆತನದ ನಾಲ್ಕು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದರು.

 ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಹಣದ ಹರಿದಾಟದ ಬಗ್ಗೆ ಮಾಹಿತಿಗಳನ್ನು ಪಡೆದ ಬಳಿಕ ಆದಾಯ ತೆರಿಗೆ ಇಲಾಖೆ ಈ ದಾಳಿಗಳನ್ನು ನಡೆಸಲಾಗಿದೆ ಎನ್ನಲಾಗಿದೆ. ಶಬರೀಶನ್ ಅವರಿಗೆ ಬೆಂಬಲ ವ್ಯಕ್ತಪಡಿಸಲು ಡಿಎಂಕೆ ನಾಯಕರು ಮತ್ತು ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅವರ ನಿವಾಸದ ಬಳಿ ಸೇರಿದ್ದರು.

ಗುರುವಾರ ಕೊಯಮತ್ತೂರಿನಲ್ಲಿ ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡಿದ ಸ್ಟಾಲಿನ್ ಪುತ್ರ ಉದಯನಿಧಿ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ಸಂಪತ್ತಿನಲ್ಲಿ ಅಗಾಧ ಏರಿಕೆಯನ್ನು ಪ್ರಶ್ನಿಸಿದ್ದರು. ಇದರ ಮರುದಿನವೇ ಸ್ಟಾಲಿನ್ ಪಾಳಯದ ಮುಖ್ಯ ತಂತ್ರನಿಪುಣ ಎಂದು ಪರಿಗಣಿಸಲಾಗಿರುವ ಶಬರೀಶನ್ ನಿವಾಸದ ಮೇಲೆ ದಾಳಿ ನಡೆದಿದೆ.

ಸ್ಟಾಲಿನ್ ಪುತ್ರಿ ಸೆಂಥಾಮರೈ ಅವರು ಶಬರೀಶನ್ ಜೊತೆ ವಾಸವಿರುವ ಚೆನ್ನೈ ಹೊರವಲಯದ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದು ಎ.6ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಡಿಎಂಕೆ ಪ್ರಮುಖರ ವಿರುದ್ಧದ ಎರಡನೇ ದಾಳಿಯಾಗಿದೆ. ಕಳೆದ ವಾರ ಡಿಎಂಕೆ ಅಭ್ಯರ್ಥಿ ಇ.ವಿ.ವೇಲು ಅವರ ತಿರುವಣ್ಣಾಮಲೈ ನಿವಾಸದ ಮೇಲೆ ದಾಳಿ ನಡೆದಿತ್ತು. ಸ್ಟಾಲಿನ್ ಅವರು ಕ್ಷೇತ್ರದಲ್ಲಿ ವೇಲು ಪರ ಪ್ರಚಾರದಲ್ಲಿ ತೊಡಗಿದ್ದ ಸಮಯದಲ್ಲಿಯೇ ಈ ದಾಳಿ ನಡೆದಿತ್ತು.

ಬಿಜೆಪಿಯು ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ಸಂದರ್ಭಗಳಲ್ಲಿ ಪ್ರತಿಪಕ್ಷಗಳಿಗೆ ಬೆದರಿಕೆಯೊಡ್ಡಲು ಸರಕಾರಿ ಸಂಸ್ಥೆಗಳನ್ನು ಬಳಸಿಕೊಳ್ಳುವುದು ಅದರ ಪದ್ಧತಿಯಾಗಿದೆ ಎಂದು ಡಿಎಂಕೆ ವಕ್ತಾರ ಸಿ.ರವೀಂದ್ರನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X