Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ...

ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ ಚುನಾವಣಾ ಆಯೋಗ: ಮರು ಚುನಾವಣೆ ನಡೆಸಲು ಆದೇಶ

ಅಸ್ಸಾಂ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಸಾಗಾಟ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ2 April 2021 12:52 PM IST
share
ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದ ಚುನಾವಣಾ ಆಯೋಗ: ಮರು ಚುನಾವಣೆ ನಡೆಸಲು ಆದೇಶ

ಗುವಾಹಟಿ: ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಯು ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಯೋರ್ವರ ಕಾರಿನಲ್ಲಿ ಮತಯಂತ್ರ ಮತ್ತು ವಿವಿಪ್ಯಾಟ್‌ ಪತ್ತೆಯಾಗಿರುವುದು ಸದ್ಯ ವಿವಾದ ಸೃಷ್ಟಿಸಿದೆ. ಈ ಪ್ರಕರಣದ ಬಗ್ಗೆ ಹಿಂಸಾಚಾರವೂ ಪ್ರಾರಂಭವಾಗಿತ್ತು. ಇದೀಗ ಈ ಕುರಿತಾದಂತೆ ಚುನಾವಣಾ ಆಯೋಗವು ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ. 

ಇವಿಎಂ ಸಾಗಾಟ ಪ್ರಕ್ರಿಯೆಯನ್ನು ಉಲ್ಲಂಘಿಸಿದ್ದಕ್ಕಾಗಿ ಅಲ್ಲಿನ ಪ್ರಮುಖ ಅಧಿಕಾರಿಗೆ ಶೋಕಾಸ್ ನೋಟೀಸ್‌ ಹೊರಡಿಸಲಾಗಿದೆ. ಅಲ್ಲದೇ, ಪೋಲ್‌ ಸಂಖ್ಯೆ ೧೪೯ ರಥಾಬರಿಯ ಇಂದಿರಾ ಎಂವಿ ಸ್ಕೂಲ್‌ ನಲ್ಲಿ ಮರು ಚುನಾವಣೆ ನಡೆಸಲಾಗುವುದು ಎಂದೂ ಚುನಾವಣೆ ಆಯೋಗ ಹೇಳಿಕೆ ನೀಡಿದ್ದಾಗಿ ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

"ಇವಿಎಂ ಮತ್ತು ವಿವಿಪ್ಯಾಟ್‌ ಸುಸ್ಥಿತಿಯಲ್ಲಿದ್ದು, ಸೀಲ್‌ ಗಳನ್ನು ತೆರೆದಿಲ್ಲ. ಎಲ್ಲವನ್ನೂ ಸ್ಟ್ರಾಂಗ್‌ ರೂಮ್‌ ಗೆ ಸಾಗಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಿದೆ.

ಚುನಾವಣಾ ಆಯೋಗದ ಹೇಳಿಕೆ

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಚುನಾವಣಾ ಆಯೋಗ ‘ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ 149ನೇ ಮತಟ್ಟೆಯಿಂದ ಇವಿಎಂಗಳನ್ನು ಭದ್ರತಾ ಕೊಠಡಿಗೆ ಸಾಗಿಸಲು ಖಾಸಗಿ ವಾಹನವನ್ನು ಮತಗಟ್ಟೆ ಅಧಿಕಾರಿ ಬಳಸಿದ್ದು ಈ ಸಂದರ್ಭ ವಾಹನದ ಮಾಲಕತ್ವದ ಬಗ್ಗೆ ಅವರು ಪರಿಶೀಲಿಸಿಲ್ಲ. ಅವರು ವರದಿ ಮಾಡಿರುವಂತೆ, ರಾತ್ರಿ 11 ಗಂಟೆಗೆ ಕರೀಮ್‌ಗಂಜ್‌ನ ಕನೈಶಿಲ್ ಎಂಬಲ್ಲಿ ತಲುಪಿದಾಗ ವಾಹನದ ದಟ್ಟಣೆಯಿಂದ ಟ್ರಾಫಿಕ್ ಜಾಂ ಆಗಿದ್ದು ವಾಹನ ನಿಧಾನವಾಗಿ ಚಲಿಸಿದೆ. ವಾಹನ ನಿಧಾನವಾಗುತ್ತಿದ್ದಂತೆಯೇ, ಸುಮಾರು 50 ಮಂದಿಯಿದ್ದ ಗುಂಪೊಂದು ವಾಹನವನ್ನು ಸುತ್ತುವರಿದಿದೆ. ವಾಹನದಲ್ಲಿದ್ದವರನ್ನು ಬಯ್ಯತೊಡಗಿದ ಗುಂಪು ವಾಹನ ಮುಂದೆ ಸಾಗಲು ಅವಕಾಶ ನೀಡಲಿಲ್ಲ. ಆಗ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ‘ ಈ ವಾಹನ ಬಿಜೆಪಿ ಅಭ್ಯರ್ಥಿ ಕೃಷ್ಣೇಂದು ಪಾಲ್‌ಗೆ ಸೇರಿದ್ದು. ಇವಿಎಂ ತಿರುಚಲು ಬಿಜೆಪಿ ಪ್ರಯತ್ನಿಸುತ್ತಿದ್ದು ಅದಕ್ಕಾಗಿ ಇವಿಎಂ ಕೊಂಡೊಯ್ಯಲಾಗುತ್ತಿದೆ’ ಎಂದು ಹೇಳಿದೆ.

ಆಗ ವಾಹನದಲ್ಲಿದ್ದವರು ಮೇಲಧಿಕಾರಿಗೆ ಮಾಹಿತಿ ನೀಡಿದ್ದಾರೆ’ ಎಂದು ಚುನಾವಣಾ ಆಯೋಗ ಹೇಳಿದೆ. ಕ್ರಮೇಣ ಇನ್ನಷ್ಟು ಜನ ಸೇರಿದ್ದು ವಾಹನದಲ್ಲಿದ್ದವರನ್ನು ಅಲ್ಲಿಂದ ಹೋಗಲು ಬಿಡಲಿಲ್ಲ ಮತ್ತು ಅವರ ಮೇಲೆ ದಾಳಿ ನಡೆಸಿದೆ. ಆದರೆ ಇವಿಎಂಗೆ ಹಾಕಿದ್ದ ಸೀಲ್ ಹಾಗೆಯೇ ಇತ್ತು ಮತ್ತು ಯಾವುದೇ ಹಾನಿಯಾಗಿಲ್ಲ ಎಂದು ಆಯೋಗ ಹೇಳಿಕೆ ನೀಡಿದೆ. ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂ ಪತ್ತೆಯಾದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ, ಈ ಘಟನೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಇವಿಎಂನ ವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ. ಇವಿಎಂಗಳ ಬಳಕೆ ಬಗ್ಗೆ ಎಲ್ಲಾ ರಾಷ್ಟ್ರೀಯ ಪಕ್ಷಗಳೂ ಮರುಪರಿಶೀಲನೆ ನಡೆಸಬೇಕಾದ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದಾರೆ. ಇಂತಹ ಹಲವು ಪ್ರಕರಣಗಳು ಯಾವಾಗಲೂ ನಡೆಯುತ್ತದೆ. ಇಂತಹ ಪ್ರಕರಣಗಳಲ್ಲಿ ವಾಹನ ಬಿಜೆಪಿ ಮುಖಂಡರಿಗೆ ಅಥವಾ ಅಭ್ಯರ್ಥಿಗಳಿಗೆ ಸೇರಿರುತ್ತದೆ. ಘಟನೆಯ ವೀಡಿಯೊ ಚಿತ್ರೀಕರಿಸಿದ ಬಳಿಕ, ಪ್ರಕರಣವನ್ನು ವಜಾಗೊಳಿಸಲಾಗುತ್ತದೆ. ಪ್ರಕರಣದ ವೀಡಿಯೊ ದಾಖಲಿಸಿದವರನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಬಿಜೆಪಿ ತನ್ನ ಮಾಧ್ಯಮ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತದೆ ಎಂದವರು ಆರೋಪಿಸಿದ್ದಾರೆ. ಎಐಡಿಯುಎಫ್‌ನ ಬದ್ರುದ್ದೀನ್ ಅಜ್ಮಲ್ ಅವರೂ ಘಟನೆಯನ್ನು ಖಂಡಿಸಿದ್ದಾರೆ. ಧ್ರುವೀಕರಣ- ವಿಫಲವಾಯಿತು. ಮತಗಳ ಖರೀದಿ ವಿಫಲವಾಯಿತು. ಅಭ್ಯರ್ಥಿಗಳ ಖರೀದಿ ವಿಫಲವಾಯಿತು. ಜುಮ್ಲೆಬಾಝಿ ವಿಫಲವಾಯಿತು. ಎರಡು ಸಿಎಂ ವಿಫಲವಾಯಿತು. ಸಿಎಎ ಬಗ್ಗೆ ಎರಡು ಬಗೆಯ ಹೇಳಿಕೆ ವಿಫಲವಾಯಿತು. ಸೋತ ಬಿಜೆಪಿಯ ಅಂತಿಮ ಪ್ರಯತ್ನ- ಇವಿಎಂ ಕದಿಯುವುದು. ಪ್ರಜಾಪ್ರಭುತ್ವದ ಕಗ್ಗೊಲೆ ಎಂದವರು ಟ್ವೀಟ್ ಮಾಡಿದ್ದಾರೆ.

EC issues factual report on incident involving EVM in Assam.

Polling party 149-Indira MV School of LAC 1 Ratabari (SC) met with incident. Party comprised a Presiding Officer & 3 polling personnel. They were accompanied by police personnel comprising a constable & a homeguard:EC pic.twitter.com/irm3DEr6KV

— ANI (@ANI) April 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X