Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಎ. 10, 11ರಂದು ಮಹಾನಾಯಕ ಜೈ...

ಪಡುಬಿದ್ರಿ: ಎ. 10, 11ರಂದು ಮಹಾನಾಯಕ ಜೈ ಭೀಮ್ ಟ್ರೋಫಿ ಕ್ರಿಕೆಟ್ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ2 April 2021 9:20 PM IST
share

ಪಡುಬಿದ್ರಿ: ಅಂಬೇಡ್ಕರ್ ಯವ ಸೇನೆ ಕಾಪು ತಾಲೂಕು ಸಮಿತಿ ಆಶ್ರಯದಲ್ಲಿ ಎ. 10 ಮತ್ತು 11 ರಂದು ಪಡುಬಿದ್ರಿ ಬೋರ್ಡು ಶಾಲಾ ಮೈದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರಾಜ್ಯಮಟ್ಟದ ಮಹಾನಾಯಕ ಜೈ ಭೀಮ್ ಟ್ರೋಫಿ 2021 ಕ್ರಿಕೆಟ್ ಪಂದ್ಯಾಟದ ಟ್ರೋಫಿ ನಡೆಯಲಿದೆ ಎಂದು ಅಂಬೇಡ್ಕರ್ ಯುವಸೇನೆ ಕಾಪು ತಾಲೂಕು ಸಮಿತಿ ಅಧ್ಯಕ್ಷ ಲೋಕೇಶ್ ಹೇಳಿದರು. 

ಪಡುಬಿದ್ರಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಪಂದ್ಯಾಟದ ಮಾಹಿತಿ ನೀಡಿದರು.

ಎಸ್‍ಸಿ ಮತ್ತು ಎಸ್‍ಟಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಓರ್ವ ಉತ್ತಮ ಕ್ರೀಡಾಪಟು ವನ್ನಾಗಿ ಮಾಡುವುದು ಸಂಘಟನೆ ಗುರಿಯಾಗಿದೆ ಎಂದ ಅವರು, ರಾಜ್ಯದ 25 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದು, ವಿಜೇತ ತಂಡಕ್ಕೆ ಪ್ರಥಮ ರೂ.50,555 ನಗದು ಮತ್ತು ಶಾಶ್ವತ ಫಲಕ ಹಾಗೂ ದ್ವಿತೀಯ ಸ್ಥಾನಿ ತಂಡಕ್ಕೆ ರೂ.33,333 ನಗದು ಮತ್ತು ಶಾಶ್ವತ ಫಲಕ ಹಾಗೂ ಪ್ರತಿಭೆಗನುಗುಣವಾಗಿ ವೈಯಿಕ್ತಿಕ ಬಹುಮಾನಗಳನ್ನು ವಿತರಿಸಲಾಗುವುದು. ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತದಲ್ಲಿ ಸಮಾಜದಲ್ಲಿನ 6 ಜನ ಅನಾರೋಗ್ಯ ಪೀಡಿತರಿಗೆ ನೆರವು ನೀಡಲಾಗುವುದು ಎಂದು ನುಡಿದರು.

ಕ್ರೀಡಾಕೂಟಗಳಲ್ಲಿ ಜಾತಿ ಮತ ಬೇಧವಿಲ್ಲ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಬೆಳೆಸುವಲ್ಲಿ ಪ್ರ್ರೋತ್ಸಾಹ ನೀಡಬೇಕು. ಪಡುಬಿದ್ರಿ ಫ್ರೆಂಡ್ಸ್ ತಂಡವು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಾಕಷ್ಟು ಪ್ರತಿಭೆಗಳಿಗೆ ಬೆಳೆಯಲು ಅವಕಾಶ ನೀಡಿದೆ ಎಂದು ಉಡುಪಿ ಜಿಲ್ಲಾ ಟೆನ್ನಿಸ್‍ಬಾಲ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಶರತ್ ಶೆಟ್ಟಿ ಹೇಳಿದರು.

ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಗುರಿಕರ ವಿಠಲ ಪಿ ಉದ್ಘಾಟಿಸಿದರು. ಉದ್ಯಮಿ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಟ್ರೋಫಿ ಅನಾವರಣಗೊಳಿಸಿದರು. ಸಂಘಟನೆ ಪ್ರಮುಖರಾದ ಕೃಷ್ಣ ಬಂಗೇರ, ಸುರೇಶ್, ಪ್ರಸನ್ನ ಕುಮಾರ್, ಮನೋಹರ್, ರವೀಂದ್ರ ಕಲ್ಲಟ್ಟೆ, ರಾಜೀವಿ, ಪ್ರಮೀಳ, ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X