Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಪಿತ ಕ್ರಿಮಿನಲ್ ನಾಯಕರು,...

ಆರೋಪಿತ ಕ್ರಿಮಿನಲ್ ನಾಯಕರು, ಅಧಿಕಾರಿಗಳಿಗೆ ನೆರವಾಗಲು ಬಿಜೆಪಿಯಿಂದ ಅಧಿಕಾರ ದುರ್ಬಳಕೆ : ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ2 April 2021 9:25 PM IST
share
ಆರೋಪಿತ ಕ್ರಿಮಿನಲ್ ನಾಯಕರು, ಅಧಿಕಾರಿಗಳಿಗೆ ನೆರವಾಗಲು ಬಿಜೆಪಿಯಿಂದ ಅಧಿಕಾರ ದುರ್ಬಳಕೆ : ಪಾಪ್ಯುಲರ್ ಫ್ರಂಟ್

ಮಂಗಳೂರು : ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ತನ್ನ ಕ್ರಿಮಿನಲ್ ನಾಯಕರು ಮತ್ತು ಅಧಿಕಾರಿಗಳಿಗೆ ನೆರವಾಗಲು ಬಿಜೆಪಿ ರಾಜ್ಯ ಸರಕಾರಗಳು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಓ.ಎಂ.ಎ ಸಲಾಂ ಹೇಳಿದ್ದಾರೆ.

ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದ ಆರೋಪಿಗಳಾಗಿರುವ ಮತ್ತೆ ಮೂರು ಮಂದಿ ಪೊಲೀಸರನ್ನು ಖುಲಾಸೆಗೊಳಿಸಲು ಅಹ್ಮದಾಬಾದ್ ವಿಶೇಷ ಸಿಬಿಐ ಕೋರ್ಟ್ ನಿರ್ಧರಿಸಿದೆ. ಈ ಖುಲಾಸೆಯೊಂದಿಗೆ 2004ರ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಯಾಗಿದ್ದಾರೆ. ಮಾಜಿ ಐಜಿ ಡಿ.ಜಿ.ವಂಝರಾ, ಪಿ.ಪಿ.ಪಾಂಡೆ ಮತ್ತು ಎನ್.ಕೆ. ಅಮೀನ್ ರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂಬುದು ಗಮನಾರ್ಹ. ಸಿಬಿಐ ಈ ನಿರ್ಧಾರದ ವಿರುದ್ಧ ಮನವಿ ಸಲ್ಲಿಸುವವರೆಗೂ, ಇವರೆಲ್ಲರ ವಿರುದ್ಧ ವಿಚಾರಣೆ ನಡೆಯದು ಎಂಬ ಸಂಗತಿ ಇದೀಗ ಬಹುತೇಕ ಖಚಿತವಾಗಿದೆ. ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣವು ಹಲವಾರು ನಕಲಿ ಎನ್ ಕೌಂಟರ್ ಹತ್ಯೆ ಘಟನೆಗಳ ಪೈಕಿ ಒಂದಾಗಿದ್ದು, ಇದು ಅಮಿತ್ ಶಾ ರಾಜ್ಯದಲ್ಲಿ ಗೃಹ ಸಚಿವರಾಗಿದ್ದ ವೇಳೆ ನಡೆದಿತ್ತು.  ಒಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್  ಮತ್ತೊಂದು ಕೋರ್ಟ್ ಆದೇಶಿತ ವಿಶೇಷ ತನಿಖಾ ತಂಡದಿಂದ ನಡೆದ ಕನಿಷ್ಟ ಎರಡು ತನಿಖೆಗಳು ಎನ್ ಕೌಂಟರ್ ನಡೆಸಲಾಗಿತ್ತು ಮತ್ತು ಇಶ್ರತ್ ಗೆ ಭಯೋತ್ಪಾದನಾ ಸಂಪರ್ಕವಿರಲಿಲ್ಲ ಎಂಬ ವಾಸ್ತವವನ್ನು ಕಂಡುಕೊಂಡಿದ್ದವು. ಆದುದರಿಂದ, ಈ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವ ಕ್ರಮವು ಕೇಂದ್ರೀಯ ಏಜೆನ್ಸಿಗಳು ತಮ್ಮ ರಾಜಕೀಯ ಪ್ರಭುಗಳ ಸೂಚನೆಯ ಮೇರೆಗೆ ನಡೆಸಿದ ಉದ್ದೇಶಪೂರ್ವಕ ಕರ್ತವ್ಯ ಉಲ್ಲಂಘನೆ ಮತ್ತು ಇದರ ಮೂಲಕ ನ್ಯಾಯದ ಗಂಭೀರ ಅಣಕ ಮಾಡಲಾಗಿದೆ ಎಂಬುದು ಸ್ಟಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದು ಸನ್ನಿವೇಶದಲ್ಲಿ, ಮುಝಪ್ಫರ್ ನಗರದ ಸ್ಥಳೀಯ ನ್ಯಾಯಾಲಯವು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಉತ್ತರ ಪ್ರದೇಶ ಸಚಿವ ಸುರೇಶ್ ರಾಣಾ, ಶಾಸಕ ಸಂಗೀತ್ ಸೋಮ್ ಮತ್ತು ಸಾಧ್ವಿ ಪ್ರಾಚಿ ಸಹಿತ ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಅನುಮತಿಸಿದೆ. ಕುಖ್ಯಾತ ಮಹಾ ಪಂಚಾಯತ್ ನಲ್ಲಿ ಈ ನಾಯಕರು ಮಾಡಿದ ದ್ವೇಷ ಭಾಷಣಗಳು, ಆ ದಿನಗಳಲ್ಲಿ ಮುಝಪ್ಫರ್ ನಗರದ ವಿವಿಧ ಪ್ರದೇಶಗಳಲ್ಲಿ ಅಮಾಯಕರ ಹತ್ಯೆ, ವಿನಾಶ ಮತ್ತು ಹಲವಾರು ಮಂದಿ ಸಾಮೂಹಿಕ ವಲಸೆಯೊಂದಿಗೆ ನೇರ ಸಂಪರ್ಕವನ್ನು ಹೊಂದಿವೆ. ಇದರ ಹೊರತಾಗಿಯೂ, ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಯಿತು ಎಂದು ತಿಳಿಸಿದರು.

ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಮತ್ತು ಮುಝಪ್ಫರ್ ನಗರ ಗಲಭೆ ಇವರಡು ಕೂಡ ಬಿಜೆಪಿಗೆ ಬಹುದೊಡ್ಡ ಲಾಭವನ್ನು ತಂದುಕೊಟ್ಟಿತು. ಬಿಜೆಪಿ ಸರಕಾರಗಳು ಮತ್ತು ಕೇಂದ್ರೀಯ ಏಜೆನ್ಸಿಗಳು ಈ ಅಪರಾಧಗಳಲ್ಲಿ ಭಾಗಿಯಾಗಿರುವ ತನ್ನ ನಾಯಕರು ಮತ್ತು ಪೊಲೀಸ್ ಅಧಿಕಾರಿಗಳ ರಕ್ಷಣೆಗೆ ಇದೀಗ ಜೊತೆಗೂಡಿ ಕೆಲಸ ಮಾಡುತ್ತಿವೆ.

ಈ ಕ್ರಮಗಳು ಅಮಾಯಕರ ಹತ್ಯೆಗಳಿಗೆ ಉತ್ತೇಜನ ನೀಡುವುದು ಮಾತ್ರವಲ್ಲದೇ, ಇವು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಕಳೆದು ಕೊಳ್ಳುವಂತೆ ಮಾಡಲಿವೆ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು, ಈ ವಿಚಾರವನ್ನು ದೇಶದ ಜನರು ಮತ್ತು ಉನ್ನತ ನ್ಯಾಯಾಲಯದ ಮುಂದೆ ತರಬೇಕೆಂದು ಪಾಪ್ಯುಲರ್ ಫ್ರಂಟ್ ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳಿಗೆ ಕರೆ ನೀಡುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X