Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: 40ಕ್ಕೂ ಅಧಿಕ ಮಕ್ಕಳ ಸಾವು:...

ಮ್ಯಾನ್ಮಾರ್: 40ಕ್ಕೂ ಅಧಿಕ ಮಕ್ಕಳ ಸಾವು: ಸೇನಾಡಳಿತಕ್ಕೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ನಿಂದನೆ

ವಾರ್ತಾಭಾರತಿವಾರ್ತಾಭಾರತಿ2 April 2021 10:44 PM IST
share
ಮ್ಯಾನ್ಮಾರ್: 40ಕ್ಕೂ ಅಧಿಕ ಮಕ್ಕಳ ಸಾವು: ಸೇನಾಡಳಿತಕ್ಕೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ನಿಂದನೆ

ಯಾಂಗನ್ (ಮ್ಯಾನ್ಮಾರ್), ಎ. 2: ಸೈನಿಕರ ದಮನ ಕಾರ್ಯಾಚರಣೆಯಲ್ಲಿ 40ಕ್ಕೂ ಅಧಿಕ ಮಕ್ಕಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮ್ಯಾನ್ಮಾರ್‌ನ ಸೇನಾ ಸರಕಾರವು ಶುಕ್ರವಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾಗಿದೆ. ಅದೂ ಅಲ್ಲದೆ, ನೂರಾರು ಜನರು ನಾಪತ್ತೆಯಾಗಿದ್ದು, ಸೇನೆಯ ವಿರುದ್ಧ ಜನರ ಆಕ್ರೋಶ ಹೆಚ್ಚಿದೆ.

ಫೆಬ್ರವರಿ 1ರಂದು ಕ್ಷಿಪ್ರಕ್ರಾಂತಿಯ ಮೂಲಕ ಸೇನೆಯು ದೇಶದ ಸರಕಾರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬಳಿಕ ಪ್ರತಿಭಟನಕಾರರ ವಿರುದ್ಧ ಸೇನೆ ನಡೆಸಿರುವ ಅಮಾನುಷ ದಮನ ಕಾರ್ಯಾಚರಣೆಯಲ್ಲಿ 44 ಮಕ್ಕಳೂ ಸೇರಿದಂತೆ 543 ನಾಗರಿಕರು ಮೃತಪಟ್ಟಿದ್ದಾರೆ ಎಂದು ರಾಜಕೀಯ ಕೈದಿಗಳ ಸಹಾಯಕ ಸಂಘಟನೆ (ಎಎಪಿಪಿ) ಹೇಳಿದೆ.

ಪ್ರತಿಭಟನೆಯಲ್ಲಿ ತೊಡಗಿರುವ ಜನರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿವೆ ಹಾಗೂ ರಬ್ಬರ್ ಮತ್ತು ನೈಜ ಗುಂಡುಗಳನ್ನು ಹಾರಿಸಿವೆ. ಈವರೆಗೆ ಸುಮಾರು 2,700 ಜನರನ್ನು ಬಂಧಿಸಲಗಿದೆ.

ಇತ್ತೀಚಿನ ವಾರಗಳಲ್ಲಿ ಜನರ ಮೇಲೆ ಸೇನೆ ನಡೆಸುತ್ತಿರುವ ಹಿಂಸೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 12 ದಿನಗಳಲ್ಲಿ ಮಕ್ಕಳ ಸಾವಿನ ಸಂಖ್ಯೆ ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ ಎಂದು ಅಂತರ್‌ರಾಷ್ಟ್ರಿಯ ಸಂಘಟನೆ ‘ಸೇವ್ ದ ಚಿಲ್ಡ್ರನ್’ ಹೇಳಿದೆ.

‘‘ಮಕ್ಕಳನ್ನು ಗುರಿಯಾಗಿಸಿ ನಡೆಯುತ್ತಿರುವ ಭೀಕರ ದಾಳಿಗಳು ಮುಂದುವರಿಯುತ್ತಿರುವ ಬಗ್ಗೆ ನಾವು ಕಳವಳಗೊಂಡಿದ್ದೇವೆ. ಅಪಾಯದಿಂದ ಮಕ್ಕಳನ್ನು ರಕ್ಷಿಸಿ ಎಂಬುದಾಗಿ ನಾವು ಪದೇ ಪದೇ ಮನವಿಗಳನ್ನು ಮಾಡುತ್ತಿರುವ ಹೊರತಾಗಿಯೂ ಅವರ ಮೇಲಿನ ದಾಳಿಯಲ್ಲಿ ಹೆಚ್ಚಳವಾಗುತ್ತಿದೆ’’ ಎಂದು ಅದು ಹೇಳಿಕೆಯೊಂದರಲ್ಲಿ ತಿಳಿಸಿದೆ.

ನೂರಾರು ಜನರು ಮಾಯ: ಹ್ಯೂಮನ್ ರೈಟ್ಸ್ ವಾಚ್ ಆರೋಪ

ಮ್ಯಾನ್ಮಾರ್‌ನ ಸೇನಾಡಳಿತವು ನೂರಾರು ಜನರನ್ನು ಮಾಯ ಮಾಡಿದೆ ಎಂದು ಅಂತರ್‌ರಾಷ್ಟ್ರೀಯ ಮಾನವಹಕ್ಕುಗಳ ಸಂಘಟನೆ ‘ಹ್ಯೂಮನ್ ರೈಟ್ಸ್ ವಾಚ್’ ಹೇಳಿದೆ. ಹೀಗೆ ನಾಪತ್ತೆಯಾದವರು ಎಲ್ಲಿದ್ದಾರೆ ಎನ್ನುವುದನ್ನು ಅದು ತಿಳಿಸುತ್ತಿಲ್ಲ ಹಾಗೂ ವಕೀಲರು ಅವರನ್ನು ಸಂಪರ್ಕಿಸಲು ಬಿಡುತ್ತಿಲ್ಲ ಎಂದು ಅದು ಆರೋಪಿಸಿದೆ.

  ‘‘ಕ್ಷಿಪ್ರಕ್ರಾಂತಿ ವಿರುದ್ಧದ ಹೋರಾಟಗಾರರ ಹೃದಯದಲ್ಲಿ ಭೀತಿ ಹುಟ್ಟಿಸುವುದಕ್ಕಾಗಿ ಸೇನಾ ಸರಕಾರವು ಜನರನ್ನು ಸ್ಚೇಚ್ಚಾಚಾರದಿಂದ ಬಂಧಿಸುತ್ತಿದೆ ಹಾಗೂ ಅವರನ್ನು ಮಾಯ ಮಾಡುತ್ತಿದೆ’’ ಎಂದು ಹ್ಯೂಮನ್‌ರೈಟ್ಸ್ ವಾಚ್‌ನ ಏಶ್ಯಾ ನಿರ್ದೇಶಕ ಬ್ರಾಡ್ ಆ್ಯಡಮ್ಸ್ ಹೇಳಿದರು.

ವಯರ್‌ಲೆಸ್ ಸೇವೆ ನಿಲುಗಡೆಗೆ ಸೇನಾ ಸರಕಾರ ಆದೇಶ

ಮ್ಯಾನ್ಮಾರ್‌ನ ವಯರ್‌ಲೆಸ್ ಸೇವೆಗಳನ್ನು ನಿಲ್ಲಿಸುವಂತೆ ದೇಶದ ಸೇನಾ ಸರಕಾರ ಇಂಟರ್‌ನೆಟ್ ಪೂರೈಕೆದಾರ ಕಂಪೆನಿಗಳಿಗೆ ಆದೇಶ ನೀಡಿದೆ ಎಂದು ದೂರಸಂಪರ್ಕ ಕಂಪೆನಿ ಊರೆಡೂ ಹೇಳಿದೆ.

‘‘ನಾಳೆಯಿಂದ ಫೈಬರ್‌ಲೈನ್ ಸೇವೆಗಳು ಮಾತ್ರ ಚಾಲನೆಯಲ್ಲಿರುತ್ತವೆ’’ ಎಂದು ಕಂಪೆನಿಯು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದೆ. ‘‘ಇದಕ್ಕೆ ಸಂಬಂಧಿಸಿದ ಸೂಚನೆಗಳನ್ನು ನಮಗೆ ಇತ್ತೀಚೆಗೆ ನೀಡಲಾಗಿದೆ’’ ಎಂದು ಅದು ಹೇಳಿದೆ.

ಮ್ಯಾನ್ಮಾರ್‌ನಲ್ಲಿ ಫೈಬರ್ ಲೈನ್ ಇಂಟರ್‌ನೆಟ್ ಸೇವೆಗಳನ್ನು ಹೊಂದಿರುವವರ ಸಂಖ್ಯೆ ಅತ್ಪಲ್ಪವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X