Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಲಾರ್ಪಣೆ ಮಾಡಲು ಬಂದ ಸಿಎಂಗೆ ತಟ್ಟಿದ...

ಮಾಲಾರ್ಪಣೆ ಮಾಡಲು ಬಂದ ಸಿಎಂಗೆ ತಟ್ಟಿದ ದಲಿತ ಸಂಘಟನೆಗಳ ಪ್ರತಿಭಟನೆಯ ಬಿಸಿ

ವಾರ್ತಾಭಾರತಿವಾರ್ತಾಭಾರತಿ5 April 2021 6:11 PM IST
share
ಮಾಲಾರ್ಪಣೆ ಮಾಡಲು ಬಂದ ಸಿಎಂಗೆ ತಟ್ಟಿದ ದಲಿತ ಸಂಘಟನೆಗಳ ಪ್ರತಿಭಟನೆಯ ಬಿಸಿ

ಬೆಂಗಳೂರು, ಎ. 5: ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರ ಪುತ್ಥಳಿ ಬಳಿ ಇರಿಸಿದ್ದ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ದಲಿತ ಸಂಘಟನೆಗಳ ಪ್ರತಿಭಟನೆ ಬಿಸಿ ತಟ್ಟಿತು.

ಸೋಮವಾರ ಡಾ.ಬಾಬುಜಗಜೀವನ್ ರಾಮ್ ಅವರ 114ನೆ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಸಿಎಂ ಹಾಗೂ ಸಚಿವರು ಆಗಮಿಸುತ್ತಿದ್ದಂತೆ ರಾಮನಗರ ಮತ್ತು ಮಾಗಡಿಯ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಗಡಿ ತಾಲೂಕಿನಲ್ಲಿ ಜಗಜೀವನರಾಮ್ ಭವನ ನಿರ್ಮಾಣ ಕಾಮಗಾರಿ ವಿಳಂಬ ಮಾಡುತ್ತಿದ್ದು, ಸರಕಾರ ಕೂಡಲೇ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಇಲ್ಲಿನ ವೈಟ್‍ಫೀಲ್ಡ್ ಕಾಡುಗೋಡಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲೂ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಕೂಡಲೆ ದಲಿತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ಮಧ್ಯೆ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಪ್ರಧಾನಿ ಹಾಗೂ ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಸೇವೆ ಹಾಗೂ ಅವರ ಜಾರಿಗೊಳಿಸಿ ಯೋಜನೆಗಳನ್ನು ನೆನಪು ಮಾಡಿಕೊಂಡರು. ಪ್ರತಿಭಟನೆಯ ಕುರಿತು ಗಮನಹರಿಸುವಂತೆ ಸಚಿವ ಶ್ರೀರಾಮುಲು ಅವರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಪ್ರತಿಭಟನಾನಿರತರ ಮನವಿ ಸ್ವೀಕರಿಸಿ, ನಮ್ಮ ಸರಕಾರ ದಲಿತರು, ಹಿಂದುಳಿದವರ ಬಗ್ಗೆ ಕಾಳಜಿ ಇಟ್ಟುಕೊಂಡಿದೆ. ನಿಮ್ಮ ಎಲ್ಲ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಮನವೊಲಿಸಿದ್ದರಿಂದ ದಲಿತ ಸಂಘಟನೆಗಳು ಪ್ರತಿಭಟನೆಯನ್ನು ಹಿಂಪಡೆದವು.

ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ನಾಗಾಂಬಿಕಾ ದೇವಿ, ಮಾಜಿ ಸಚಿವ ಎಚ್.ಆಂಜನೇಯ, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಎನ್.ಮೂರ್ತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X