Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಸಿಎಂ ಮಾಡು ಎಂದು ದೇವರಿಗೆ ಲೆಟರ್...

ಡಿಸಿಎಂ ಮಾಡು ಎಂದು ದೇವರಿಗೆ ಲೆಟರ್ ಬರೆದಿದ್ದು ನೀವೇ ಅಲ್ಲವೇ?: ಶ್ರೀರಾಮುಲುರನ್ನು ಕುಟುಕಿದ ಕಾಂಗ್ರೆಸ್

ಶ್ರೀರಾಮುಲು ಪ್ರತಿಕ್ರಿಯೆ ಏನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ5 April 2021 7:59 PM IST
share
ಡಿಸಿಎಂ ಮಾಡು ಎಂದು ದೇವರಿಗೆ ಲೆಟರ್ ಬರೆದಿದ್ದು ನೀವೇ ಅಲ್ಲವೇ?: ಶ್ರೀರಾಮುಲುರನ್ನು ಕುಟುಕಿದ ಕಾಂಗ್ರೆಸ್

ಬೆಂಗಳೂರು, ಎ.5: ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಸಮಾಜಕಲ್ಯಾಣ ಸಚಿವ ಬಿ.ಶ್ರೀರಾಮುಲು ನಡುವೆ ಟ್ವೀಟ್ ಸಮರ ನಡೆದಿದೆ. ನನ್ನನ್ನು ಡಿಸಿಎಂ ಮಾಡು ಎಂದು ದೇವರಿಗೆ ಲೆಟರ್ ಬರೆದಿದ್ದು ನೀವೇ ಅಲ್ಲವೇ? ಎಂದು ಶ್ರೀರಾಮುಲುರನ್ನು ಕಾಂಗ್ರೆಸ್ ಕಿಚಾಯಿಸಿದರೆ, ಕಾಂಗ್ರೆಸ್ ಪಕ್ಷದ್ದು ಧೃತರಾಷ್ಟ್ರ ಪ್ರೇಮ ಎಂದು ಶ್ರೀರಾಮುಲು ಟ್ವೀಟರ್‍ನಲ್ಲೆ ತಿರುಗೇಟು ನೀಡಿದ್ದಾರೆ.

ಬಿ.ಶ್ರೀರಾಮುಲು ಅವರೇ, ನನ್ನನ್ನು ಡಿಸಿಎಂ ಮಾಡು ಎಂದು ದೇವರಿಗೆ ಲೆಟರ್ ಬರೆದಿದ್ದು ನೀವೇ ಅಲ್ಲವೇ? ಹಿಂದುಳಿದ ವರ್ಗದವನು ಎಂದು ನನ್ನನ್ನು ಬಿಜೆಪಿಯವರೇ ಸೋಲಿಸಿದರು ಎಂದು ಹೇಳಿದ್ದು ನೀವೇ ಅಲ್ಲವೇ? ದೇವರಿಗೆ ಅಷ್ಟೇ ಅಲ್ಲ ಮೋದಿಯವರಿಗೆ ಲೆಟರ್ ಬರೆದರೂ ನಿಮ್ಮನ್ನು ರಾಜ್ಯ ಬಿಜೆಪಿ ಡಿಸಿಎಂ ಮಾಡುವುದಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಚಾಯಿಸಿದೆ.

ಅಲ್ಲದೆ, ಅವಕಾಶ ಸಿಕ್ಕರೆ ಸೂಪರ್ ಸಿಎಂ ಬಿ.ವೈ.ವಿಜಯೇಂದ್ರ ಅವರನ್ನು ಡೆಪ್ಯುಟಿ ಸಿಎಂ ಮಾಡಬಲ್ಲರು ಹೊರತು ನಿಮ್ಮನ್ನು ಮಾಡುವುದಿಲ್ಲ. ಇದೆಲ್ಲ ಬಿಟ್ಟು ಹಿಂದುಳಿದ ವರ್ಗಗಳ ನಿಗಮಗಳಿಗೆ ಬಜೆಟ್‍ನಲ್ಲಿ ತೀವ್ರ ಅನ್ಯಾಯವಾಗಿದೆ, ಅದರ ಬಗ್ಗೆ ಧ್ವನಿ ಎತ್ತಿ. ಇಲ್ಲವಾದಲ್ಲಿ ಸಿಎಂ ಪುತ್ರನ ಸೇವೆ ಮಾಡಿಕೊಂಡಿರಿ, ಅವರು ಬೆಳೆಯುತ್ತಾರೆ, ನೀವು ಅಳಿಯುತ್ತೀರಿ ಎಂದು ಕಾಂಗ್ರೆಸ್ ಟೀಕಿಸಿದೆ.

ಇದಕ್ಕೆ ಟ್ವೀಟ್ ಮೂಲಕವೇ ತಿರುಗೇಟು ನೀಡಿರುವ ಶ್ರೀರಾಮುಲು, ಕಾಂಗ್ರೆಸ್ ಪಕ್ಷದ್ದು ಧೃತರಾಷ್ಟ್ರ ಪ್ರೇಮ. ವಿಪಕ್ಷದಲ್ಲಿ ಕುಂತಾಗ ಹಿಂದುಳಿದ ವರ್ಗದ ಬಗ್ಗೆ ಅದೇನು ಪ್ರೀತಿ-ಕಾಳಜಿ? ಅಧಿಕಾರ ಇದ್ದಾಗ ಮಾಡುವ ಕೆಲಸ ಮಾಡಿದ್ದಿದ್ದರೆ ಇವತ್ತು ಜನರು ಮೂಲೆಗೆ ಕೂರಿಸುತ್ತಿದ್ದರೆ? ಸರ್ವಾಧಿಕಾರ ಕಳೆದುಕೊಂಡ ಮೇಲೆ ಖಿನ್ನತೆಗೆ ಒಳಗಾಗುವುದು ಸಾಮಾನ್ಯ. ನಿಮ್ಮ ಪಕ್ಷಕ್ಕೆ ಜನರಿಗಿಂತ ವೈದ್ಯರ ಅವಶ್ಯಕತೆ ತುಂಬ ಇದೆ ಎಂದು ತಿಳಿಸಿದ್ದಾರೆ.

ಸಿಕ್ಕಾಗ ಸಮರ್ಥ ಆಡಳಿತ ಕೊಟ್ಟಿದ್ದಿದ್ದರೆ, ಇವತ್ತು ಡಿಸಿಎಂ ನಾನೋ ಮತ್ತೊಬ್ಬರೋ ಎಂದು ಅವರಿವರ ವಿರುದ್ಧ ಎತ್ತಿಕಟ್ಟುವ ಇಂಥ ದುರ್ಗತಿ ರಾಜ್ಯ ಕಾಂಗ್ರೆಸ್‍ಗೆ ಬರುತ್ತಿರಲಿಲ್ಲ. ಇದರಿಂದ ನಮ್ಮ ಒಗ್ಗಟ್ಟು ಒಡೆಯಬಹುದು ಎಂದುಕೊಂಡಿದ್ದರೆ, ನಿಮ್ಮ ರಾಹುಲ್ ಗಾಂಧಿಯಷ್ಟೇ ಪಕ್ಷದ ಬುದ್ಧಿಮತ್ತೆಯೂ ಇದೆ ಎಂದು ತಿಳಿಯುತ್ತದೆ. ಮುಂದಿನ ಬಾರಿಗೆ ಶುಭವಾಗಲಿ(ಬೆಟರ್ ಲಕ್ ನೆಕ್ಸ್ಟ್ ಟೈಮ್) ಎಂದು ಶ್ರೀರಾಮುಲು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X