Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19 ಮಾರ್ಗಸೂಚಿ: ಮಹಾನಗರ ಪಾಲಿಕೆ...

ಕೋವಿಡ್-19 ಮಾರ್ಗಸೂಚಿ: ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಕಡ್ಡಾಯ ಪಾಲನೆಗೆ ಆಯುಕ್ತ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 April 2021 10:24 PM IST
share
ಕೋವಿಡ್-19 ಮಾರ್ಗಸೂಚಿ:  ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಕಡ್ಡಾಯ ಪಾಲನೆಗೆ ಆಯುಕ್ತ ಸೂಚನೆ

ಮಂಗಳೂರು, ಎ.5: ಕೋವಿಡ್-19 ಸೋಂಕಿನ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪಾಲಿಸಬೇಕು ಎಂದು ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಸೂಚನೆ ನೀಡಿದರು.

ನಗರದ ಲಾಲ್‌ಬಾಗ್‌ನಲ್ಲಿರುವ ಮನಪಾ ಕಟ್ಟಡದಲ್ಲಿರುವ ತನ್ನ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಹೋಟೆಲ್, ರೆಸ್ಟೋರೆಂಟ್, ಕಲ್ಯಾಣ ಮಂಟಪ, ಪಾರ್ಟಿಹಾಲ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಸಿನಿಮಾ ಹಾಲ್, ಈಜುಕೊಳ, ಜಿಮ್ ಅಸೋಸಿಯೇಶನ್ ಹಾಗೂ ರೆಸಿಡೆಂಟ್ ವೆಲ್‌ಪೇರ್ ಅಸೋಸಿಯೇಶನ್ ಮಾಲಕರು ಹಾಗೂ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಮುನ್ನೆಚ್ಚರಿಕೆಗಾಗಿ ಕಡ್ಡಾಯವಾಗಿ ಮುಖಗವಸು, ಸುರಕ್ಷಿತ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್, ಹ್ಯಾಂಡ್ ವಾಷ್‌ಗಳ ಬಳಕೆಯನ್ನು ಜಾರಿಗೊಳಿಸುವುದು ಹಾಗೂ ಸರಕಾರದ ಸೂಚನೆಯಂತೆ ಬಾರ್, ಪಬ್, ಕ್ಲಬ್, ರೆಸ್ಟೊರೆಂಟ್, ಸಿನೆಮಾ ಹಾಲ್, ಜಿಮ್‌ಗಳಲ್ಲಿ ಗರಿಷ್ಟ 50 ಸಂಖ್ಯೆ ಮೀರಿರಬಾರದು ಹಾಗೂ ಎಲ್ಲಾ ರೀತಿಯ ಈಜುಕೊಳಗಳನ್ನು ಮುಚ್ಚುವಂತೆ ಸೂಚನೆ ನೀಡಿದರು.

ಕೋವಿಡ್ ಶಿಷ್ಟಚಾರಗಳು ಪಾಲನೆಯಾಗುತ್ತಿರುವ ಬಗ್ಗೆ ಪಾಲಿಕೆ ವತಿಯಿಂದ ಅಧಿಕಾರಿ / ಸಿಬ್ಬಂದಿಯನ್ನೊಳಗೊಂಡ ಟಾಸ್ಕ್‌ಪೋರ್ಸ್ ತಂಡ ವನ್ನು ರಚಿಸಿ ನಿರಂತರ ಪರಿಶೀಲನೆ ನಡೆಸಲಾಗುವುದು. ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ವಾಣಿಜ್ಯ ಸಂಸ್ಥೆಯ ಮಾಲಕರಿಗೆ ದಂಡ ವಿಧಿಸಲಾಗುವುದು, ಪುನಾರವರ್ತನೆಯಾದಲ್ಲಿ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೆ ಮುಚ್ಚಲಾಗುವುದು ಎಂಬ ಎಚ್ಚರಿಕೆ ನೀಡಿದರು.

ಕೋವಿಡ್ ಸಂಬಂಧಿತ ದೂರುಗಳಿದ್ದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, (0824-2220306) ಬೆಳಿಗ್ಗೆ 7 ರಿಂದ ರಾತ್ರಿ 10 ಗಂಟೆಯವರೆಗೆ ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ ಎಂದರು.
 ಸಭೆಯಲ್ಲಿ ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಡಾ.ಸಂತೋಷ್ ಕುಮಾರ್ ಕಂದಾಯ ಉಪಯುಕ್ತ ಪಿ.ಕೆ. ಬಿನಾಯ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X