Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೈಲಟ್ ಆಗಬೇಕೆಂಬ ಕನಸು ಹೊತ್ತ ಬಾಲಕನನ್ನು...

ಪೈಲಟ್ ಆಗಬೇಕೆಂಬ ಕನಸು ಹೊತ್ತ ಬಾಲಕನನ್ನು ವಿಮಾನದೊಳಗೆ ಕರೆದೊಯ್ದು ಕಾರ್ಯವಿಧಾನ ವಿವರಿಸಿದ ರಾಹುಲ್ ಗಾಂಧಿ

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ6 April 2021 12:45 PM IST
share
ಪೈಲಟ್ ಆಗಬೇಕೆಂಬ ಕನಸು ಹೊತ್ತ ಬಾಲಕನನ್ನು ವಿಮಾನದೊಳಗೆ ಕರೆದೊಯ್ದು ಕಾರ್ಯವಿಧಾನ ವಿವರಿಸಿದ ರಾಹುಲ್ ಗಾಂಧಿ

ತಿರುವನಂತಪುರ: ಪೈಲಟ್ ಆಗಬೇಕೆಂಬ ಕನಸನ್ನು ತನ್ನೊಂದಿಗೆ ಹಂಚಿಕೊಂಡ ಕೇರಳದ 9 ವರ್ಷದ ಬಾಲಕನನ್ನು ವಿಮಾನದ ಕಾಕ್ ಪಿಟ್ ನೊಳಗೆ ಕರೆದೊಯ್ದು, ವಿಮಾನದ ಕಾರ್ಯವಿಧಾನವನ್ನು ವಿವರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿದ್ದ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ  ಭಾರೀ ವೈರಲ್ ಆಗುತ್ತಿದೆ.

ಅದ್ವೈತ್ ಎಂಬ ಪುಟ್ಟ ಹುಡುಗನೊಂದಿಗೆ ಸ್ವತಃ ಮಾತನಾಡುವ ಹಾಗೂ ಆತನ ಕನಸುಗಳು ಹಾಗೂ ಆಕಾಂಕ್ಷೆಗಳ ಬಗ್ಗೆ ಕೇಳುವ ವೀಡಿಯೊವನ್ನು ರಾಹುಲ್ ಗಾಂಧಿ ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದ್ಶಾರೆ.

ಯಾವುದೇ ಕನಸು ದೊಡ್ಡದಲ್ಲ. ಅದ್ವೈತ್ ಅವರ ಕನಸನ್ನು ನನಸಾಗಿಸಲು ನಾವು ಮೊದಲ ಹೆಜ್ಜೆ ಇಟ್ಟಿದ್ದೇವೆ. ಈಗ ಸಮಾಜವನ್ನು ನಿರ್ಮಿಸುವುದು ನಮ್ಮ ಕರ್ತವ್ಯವಾಗಿದ್ದು. ಅದು ಅವನಿಗೆ ಹಾರುವ ಎಲ್ಲ ಅವಕಾಶಗಳನ್ನು ನೀಡುತ್ತದೆ ಎಂಬ ಶೀರ್ಷಿಕೆಯೊಂದಿಗೆ ರಾಹುಲ್ ಇನ್ ಸ್ಟಾಗ್ರಾಮ್ ನಲ್ಲಿ ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ. 

ರಾಹುಲ್ ಗಾಂಧಿ ಪುಟ್ಟ ಹುಡುಗನೊಂದಿಗೆ ಮಾತನಾಡುವುದರೊಂದಿಗೆ ವೀಡಿಯೊ ಆರಂಭವಾಗುತ್ತದೆ. ದೊಡ್ಡವನಾದ ಮೇಲೆ ಏನಾಗಬೇಕೆಂದು ಬಯಸಿರುವೆ ಎಂದು ರಾಹುಲ್ ಬಾಲಕನನ್ನು ಕೇಳುತ್ತಾರೆ. ಅದಕ್ಕೆ ಪುಟ್ಟ ಬಾಲಕ, ತಾನು ಪೈಲಟ್ ಆಗಲು ಬಯಸುತ್ತೇನೆ ಎಂದು ತಕ್ಷಣ ಪ್ರತಿಕ್ರಿಯಿಸುತ್ತಾನೆ. ತಾನು ಹಾರಲು ಬಯಸಿದ್ದರಿಂದ ಪೈಲಟ್ ಆಗಲು ಬಯಸುತ್ತೇನೆ ಎಂದು ಬಾಲಕ ಹೇಳುತ್ತಾನೆ.

ಮರುದಿನ ರಾಹುಲ್ ಅವರು ಅದ್ವೈತ್ ಗೆ ವಿಮಾನದ ಕಾಕ್ ಪಿಟ್ ಗೆ ಭೇಟಿ ನೀಡಲು ವ್ಯವಸ್ಥೆ ಮಾಡುತ್ತಾರೆ. ವಿಮಾನವನ್ನು ಹಾರಿಸುವ ಕಾರ್ಯವಿಧಾನಗಳ ಬಗ್ಗೆ ರಾಹುಲ್ ಹಾಗೂ ಪೈಲಟ್ ವಿವರಿಸುವ ಎಲ್ಲ ವಿಷಯವನ್ನು ಬಾಲಕ ಆಲಿಸುತ್ತಾನೆ.

ಕೇರಳದ ಕಣ್ಣೂರು ಜಿಲ್ಲೆಯ ಇರಿಟ್ಟಿಯಲ್ಲಿ ಅದ್ವೈತ್ ಹಾಗೂ ಅವರ ಹೆತ್ತವರನ್ನು ರಾಹುಲ್ ಇತ್ತೀಚೆಗೆ ಭೇಟಿಯಾಗಿದ್ದರು. ಅವರು ಕೇರಳ ರಾಜ್ಯದಲ್ಲಿ ಎರಡು ದಿನಗಳ ಚುನಾವಣಾ ಪ್ರಚಾರದ ಪ್ರವಾಸದಲ್ಲಿದ್ದರು.

ರಾಹುಲ್ ಗಾಂಧಿ ಹಂಚಿಕೊಂಡ ವೀಡಿಯೊವನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ. ಈ ವೀಡಿಯೊ ಇನ್‍ಸ್ಟಾಗ್ರಾಮ್ ನಲ್ಲಿ 1.6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಗಳಿಸಿದೆ. 

View this post on Instagram

A post shared by Rahul Gandhi (@rahulgandhi)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X