Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎ.7ರಿಂದ ಸಾರಿಗೆ ನೌಕರರ ಮುಷ್ಕರ: ಕಠಿಣ...

ಎ.7ರಿಂದ ಸಾರಿಗೆ ನೌಕರರ ಮುಷ್ಕರ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರಕಾರ

''6ನೇ ವೇತನ ಆಯೋಗದ ವರದಿಯಂತೆ ವೇತನ ಕೊಡಲು ಸಾಧ್ಯವೇ ಇಲ್ಲ''

ವಾರ್ತಾಭಾರತಿವಾರ್ತಾಭಾರತಿ6 April 2021 6:59 PM IST
share
ಎ.7ರಿಂದ ಸಾರಿಗೆ ನೌಕರರ ಮುಷ್ಕರ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರಕಾರ

ಬೆಂಗಳೂರು, ಎ.6: ಸಾರಿಗೆ ನೌಕರರು ಮುಷ್ಕರ ನಡೆಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ, ಪೊಲೀಸ್ ಕಾಯ್ದೆ, ಎಸ್ಮಾ ಸೇರಿದಂತೆ ಯಾವುದಾದರೂ ಕಾಯ್ದೆಯಡಿ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ ನೀಡಿದರು.

ಸೋಮವಾರ ಮುಖ್ಯಮಂತ್ರಿ ಜೊತೆ ನಡೆದ ಸಾರಿಗೆ ನೌಕರರ ಮುಷ್ಕರ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರನೆ ವೇತನ ಆಯೋಗದ ವರದಿಯಂತೆ ಸಾರಿಗೆ ನೌಕರರಿಗೆ ವೇತನ ಕೊಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ಸಾರಿಗೆ ನೌಕರರ ವೇತನವನ್ನು ಶೇ.8ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ, ರಾಜ್ಯದಲ್ಲಿ ಉಪಚುನಾವಣಾ ಹಿನ್ನೆಲೆ ನೀತಿಸಂಹಿತೆ ಜಾರಿಯಲ್ಲಿ ಇದೆ. ಈ ಸಂಬಂಧ ವೇತನ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕ ಕೂಡಲೇ ಹೆಚ್ಚಳಕ್ಕೆ ಆದೇಶ ಹೊರಬೀಳಲಿದೆ ಎಂದರು.

ಕೋವಿಡ್ ಪರಿಸ್ಥಿತಿ ಕಾರಣಕ್ಕೆ ಮುಷ್ಕರಕ್ಕೆ ಹೋಗದಂತೆ ನೌಕರರಲ್ಲಿ ಮನವಿ ಮಾಡುತ್ತಿದ್ದೇವೆ ಎಂದ ಅವರು, ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳಲ್ಲಿ ಎಂಟನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಆದರೆ, ಸರಕಾರಿ ನೌಕರರಿಗೆ ವೇತನ ಆಯೋಗದ ಶಿಫಾರಸಿನಂತೆ ಕೊಡುವ ವೇತನ ನೀಡಲು ಸಾಧ್ಯವೇ ಇಲ್ಲ. ಸಾರಿಗೆ ನೌಕರರ ಜೊತೆ ಚರ್ಚಿಸಿ, ಸಂಧಾನ ಸಭೆ ಏರ್ಪಡಿಸಿ ಪ್ರತಿ 4 ವರ್ಷಕ್ಕೊಮ್ಮೆ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತಿದ್ದೇವೆ ಎಂದರು.

ಮುಷ್ಕರಕ್ಕೆ ಹೋದರೆ ಜನರಿಗೆ ತೊಂದರೆ ಆಗಲಿದೆ. ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ತೆಗೆದುಕೊಳ್ಳಲಿದೆ. ಮ್ಯಾಕ್ಸಿ ಕ್ಯಾಬ್‍ಗಳು ಸೇರಿದಂತೆ ಖಾಸಗಿ ವಾಹನಗಳನ್ನು ಓಡಿಸಲು ಅನುಮತಿ ನೀಡುತ್ತೇವೆ. ಅದಕ್ಕೆ ಸಾರಿಗೆ ಆಯುಕ್ತರು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ನಷ್ಟ: ಕೊರೋನ ಪರಿಣಾಮದಿಂದ ಸಾರಿಗೆ ನಿಗಮಗಳಿಗೆ ಪ್ರತಿ ದಿನ 4 ಕೋಟಿ ನಷ್ಟವಾಗುತ್ತಿದೆ. ಎಲ್ಲ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ. ಆದರೂ, ಆದಾಯ ಇಲ್ಲವೆಂದು ಸಂಬಳ ಕಡಿತ ಮಾಡಿಲ್ಲ. ಇನ್ನು, ಸಾರಿಗೆ ನೌಕರರ ವೇತನಕ್ಕೆ ಸರಕಾರ ಯಾವುದೇ ಸಮಸ್ಯೆ ಮಾಡಿಲ್ಲ. ಹೋದ ವರ್ಷ ಆದಾಯ ಇಲ್ಲದಿದ್ದರೂ ಸಾರಿಗೆ ನೌಕರರ ಸಂಬಳಕ್ಕೆ 2,100 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X