Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸ್ ಗಢ ಮಾವೋವಾದಿ ದಾಳಿ ಕುರಿತು...

ಛತ್ತೀಸ್ ಗಢ ಮಾವೋವಾದಿ ದಾಳಿ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿದ ಅಸ್ಸಾಂ ಲೇಖಕಿ ವಿರುದ್ಧ ದೇಶದ್ರೋಹ ಕೇಸ್, ಬಂಧನ

ವಾರ್ತಾಭಾರತಿವಾರ್ತಾಭಾರತಿ7 April 2021 1:42 PM IST
share
ಛತ್ತೀಸ್ ಗಢ ಮಾವೋವಾದಿ ದಾಳಿ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿದ ಅಸ್ಸಾಂ ಲೇಖಕಿ ವಿರುದ್ಧ ದೇಶದ್ರೋಹ ಕೇಸ್, ಬಂಧನ

ಹೊಸದಿಲ್ಲಿ: ಛತ್ತೀಸಗಢದಲ್ಲಿ ಕಳೆದ ಶನಿವಾರ ಮಾವೋವಾದಿಗಳ ದಾಳಿಯಲ್ಲಿ 22 ಜವಾನರು ಮೃತಪಟ್ಟ ಘಟನೆಯ ನಂತರ ಮಾಡಿದ ಫೇಸ್ ಬುಕ್ ಪೋಸ್ಟ್ ಒಂದಕ್ಕಾಗಿ ಗುವಾಹಟಿ ಮೂಲದ ಲೇಖಕಿ ಶಿಖಾ ಶರ್ಮ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಐಪಿಸಿ 124ಎ (ದೇಶದ್ರೋಹ) ಸಹಿತ ವಿವಿಧ ಇತರ ಸೆಕ್ಷನ್‍ ಗಳನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಗುವಾಹಟಿ ಪೊಲೀಸ್ ಆಯುಕ್ತ ಮುನ್ನಾ ಪ್ರಸಾದ್ ಗುಪ್ತಾ ಹೇಳಿದ್ದಾರೆ.

"ಕರ್ತವ್ಯ ನಿರ್ವಹಿಸುವ ವೇಳೆ ಮೃತರಾಗುವ ಸಂಬಳ ಪಡೆಯುವ ಮಂದಿಯನ್ನು ಹುತಾತ್ಮರೆಂದು ಕರೆಯಲಾಗದು. ಅದೇ ತರ್ಕ ಅನ್ವಯಿಸುವುದಾದರೆ,  ವಿದ್ಯುದಾಘಾತದಿಂದ ಸಾವನ್ನಪ್ಪುವ ವಿದ್ಯುತ್ ಇಲಾಖೆಯ ಕೆಲಸಗಾರರನ್ನೂ ಹುತಾತ್ಮರೆಂದು ಪರಿಗಣಿಸಬೇಕು. ಮಾಧ್ಯಮಗಳೇ.. ಜನರನ್ನು ಭಾವಾತ್ಮಕರನ್ನಾಗಿಸಬೇಡಿ" ಎಂದು ಶಿಖಾ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದರೆನ್ನಲಾಗಿದೆ.

ಇದರ ಬೆನ್ನಲ್ಲೇ ಗುವಾಹಟಿ ಹೈಕೋರ್ಟಿನ ಇಬ್ಬರು ವಕೀಲರಾದ ಉಮಿ ದೇಕ ಬರುವಾ ಹಾಗೂ ಕಂಗ್‍ಕನ ಗೋಸ್ವಾಮಿ ಎಂಬವರು ಆಕೆಯ ವಿರುದ್ದ ದಾಖಲಿಸಿದ ದೂರಿನ ಆಧಾರದಲ್ಲಿ ಎಫ್‍ಐಆರ್ ದಾಖಲಾಗಿತ್ತು.

"ಇದು ನಮ್ಮ ಜವಾನರಿಗೆ ತೋರಿಸಲಾದ ಅಗೌರವ ಹಾಗೂ ಕೀಳು ಅಭಿರುಚಿಯ ಹೇಳಿಕೆಯಾಗಿದೆ. ನಮ್ಮ ಜವಾನರ ಸಾಟಿಯಿಲ್ಲದ ಬಲಿದಾನವನ್ನು ಕೇವಲ ಹಣ ಮಾಡುವ ಪ್ರಕ್ರಿಯೆಗೆ ಇಳಿಸಲಾಗಿದೆಯಲ್ಲದೆ  ದೇಶ ಸೇವೆಯ ಪಾವಿತ್ರ್ಯದ ಮೇಲೆ ನಡೆದ ವಾಗ್ದಾಳಿ" ಎಂದು ದೂರಿನಲ್ಲಿ ಆರೋಪಿಸಲಾಗಿದೆಯಲ್ಲದೆ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೂ ಆಗ್ರಹಿಸಲಾಗಿತ್ತು.

ಶಿಖಾ ಶರ್ಮ ಅವರ ಫೇಸ್ ಬುಕ್ ಪ್ರೊಫೈಲ್ ಪ್ರಕಾರ ಆಕೆ ದಿಬ್ರೂಘರ್ ಆಕಾಶವಾಣಿ ಕಲಾವಿದೆಯಾಗಿದ್ದಾರೆ ಹಾಗೂ ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಆಕೆ ಮಾಡಿದ್ದ ಸರಕಾರ ವಿರೋಧಿ ಪೋಸ್ಟ್ ಗಳಿಗೆ ಅತ್ಯಾಚಾರ ಬೆದರಿಕೆಗಳನ್ನೂ ಎದುರಿಸಿದ್ದರೆಂದು ತಿಳಿದು ಬಂದಿದೆ. ತಮ್ಮ ಫೇಸ್ ಬುಕ್ ಪೋಸ್ಟ್ ಗೆ ಬಂದಿರುವ ಟೀಕೆಗಳ ಕುರಿತು ಬಂಧನಕ್ಕೆ ಮುನ್ನ ಸೋಮವಾರ ರಾತ್ರಿ ಪ್ರತಿಕ್ರಿಯಿಸಿದ್ದ ಶಿಖಾ "ನನ್ನ ಪೋಸ್ಟ್ ಅನ್ನು ತಪ್ಪಾಗಿ ಅರ್ಥೈಸುವುದು ಮಾನಸಿಕ ಕಿರುಕುಳವಲ್ಲವೇ? ನನ್ನ ವಿರುದ್ಧದ ಅಪಪ್ರಚಾರ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುವುದೇ? ನನಗೆ ಈ ಹಿಂದೆ ಬಂದ ಕೊಲೆ ಹಾಗೂ ಬೆದರಿಕೆಗಳ ಕುರಿತು ನನ್ನ ಎಫ್‍ಐಆರ್ ಆಧಾರದಲ್ಲಿ ತನಿಖೆಯೇಕೆ ನಡೆದಿಲ್ಲ?" ಎಂದು ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X