Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಾಹನ ಉದ್ಯಮದ ಚೇತರಿಕೆಗಾಗಿ...

ವಾಹನ ಉದ್ಯಮದ ಚೇತರಿಕೆಗಾಗಿ ಪ್ರಯಾಣಿಕರಿಗೆ ಬರೆ: ಪ್ರಯಾಣ ದರ ಏರಿಕೆ ಭೀತಿ, ಶ್ರೀಸಾಮಾನ್ಯನ ಜೇಬಿಗೆ ಬೀಳಲಿದೆ ಕತ್ತರಿ

► ಪ್ರಯಾಣಿಕರಿಗೆ ಜಿಎಸ್‌ಟಿ, ಟೋಲ್ ಶುಲ್ಕದ ಹೊರೆ ► ಇಂಧನ, ವಾಹನ ಬಿಡಿಭಾಗಗಳ ದರ ಹೆಚ್ಚಳ

ರಹಿಮಾನ್ ತಲಪಾಡಿರಹಿಮಾನ್ ತಲಪಾಡಿ7 April 2021 4:25 PM IST
share
ವಾಹನ ಉದ್ಯಮದ ಚೇತರಿಕೆಗಾಗಿ ಪ್ರಯಾಣಿಕರಿಗೆ ಬರೆ: ಪ್ರಯಾಣ ದರ ಏರಿಕೆ ಭೀತಿ, ಶ್ರೀಸಾಮಾನ್ಯನ ಜೇಬಿಗೆ ಬೀಳಲಿದೆ ಕತ್ತರಿ

ಮಂಗಳೂರು: ಕೊರೋನ, ಲಾಕ್‌ಡೌನ್, ಇಂಧನಗಳ ದರ ಏರಿಕೆ, ವಾಹನ ಬಿಡಿಭಾಗಗಳ ದರ ಹೆಚ್ಚಳ, ನಿರ್ವಹಣೆ ದುಬಾರಿ ಸೇರಿದಂತೆ ವಿವಿಧ ಕಾರಣಗಳಿಂದ ವಾಹನ ಚಾಲಕರು ಆರ್ಥಿಕ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ನಡುವೆ ಕೊರೋನ ಎರಡನೇ ಅಲೆ ಎದುರಾಗಿದ್ದು, ಜನಸಾಮಾನ್ಯರ ಜೀವನದ ಮೇಲೆ ಮತ್ತೊಮ್ಮೆ ದರ ಏರಿಕೆ ಬಿಸಿ ತಟ್ಟಲಿದೆ. ಕೊರೋನ ಸಂಕಷ್ಟದಿಂದಾಗಿ ಸಾಲದ ಸುಳಿಯಲ್ಲಿ ಸಿಲುಕಿರುವ ವಾಹನ ಚಾಲಕರು, ಮಾಲಕರು ಚೇತರಿಕೆಗಾಗಿ ಮತ್ತೊಮ್ಮೆ ಪ್ರಯಾಣ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿದ್ದು, ಇದರಿಂದ ಗ್ರಾಹಕರಿಗೆ ಬರೆ ಮೇಲೆ ಬರೆ ಎಳೆದಂತಾಗಿದೆ.

 ತೈಲ ಬೆಲೆ ಏರಿಕೆಯಿಂದಾಗಿ ಸರಕಾರಿ ಬಸ್‌ಗಳನ್ನು ಹೊರತುಪಡಿಸಿ ಖಾಸಗಿ ಬಸ್, ಆಟೊ, ಟ್ಯಾಕ್ಸಿ, ಕೆಎಸ್‌ಟಿಡಿಸಿ ಟ್ಯಾಕ್ಸಿ, ಮಿನಿ ವ್ಯಾನ್-ಬಸ್‌ಗಳ ಪ್ರಯಾಣದರವನ್ನು ಹಿಂದಿನ ದರಕ್ಕಿಂತ ಶೇ.5ರಿಂದ 10ರಷ್ಟು ಹೆಚ್ಚಳ ಮಾಡಲಾಗಿದ್ದರೂ ಪ್ರಯಾಣಿಕರ ಕೊರತೆಯಿಂದ ವಾಹನ ಚಾಲಕರ ಆದಾಯದ ಮೇಲೆ ನೇರ ಪರಿಣಾಮ ಬೀರಿದೆ. ಇದನ್ನು ಸರಿದೂಗಿಸಲು ಪ್ರಯಾಣ ಹೆಚ್ಚಳಕ್ಕೆ ಅನುಮತಿ ಕೋರಿ ವಿವಿಧ ವಾಹನ ಚಾಲಕರ ಸಂಘಗಳು ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ.

ಸಾರಿಗೆ ಬಸ್‌ಗಳಿಗೆ ಕೊಟ್ಯಂತರ ರೂ. ನಷ್ಟ:

ರಾಜ್ಯದಾದ್ಯಂತ ಪ್ರತಿದಿನ ಸಾವಿರಾರು ಬಸ್‌ಗಳು ಕಾರ್ಯಾಚರಿಸುತ್ತಿದ್ದರೂ ಕೋರೋನ ಸಂಕಷ್ಟ ಹಾಗೂ ಪ್ರಯಾಣಿಕರ ಕೊರತೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 4 ಸಾವಿರ ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದ್ದು, ಇದರಿಂದ ಅಧಿಕಾರಿ, ಸಿಬ್ಬಂದಿಗೆವೇತನ ನೀಡಲು, ಇಂಧನ, ಬಿಡಿಭಾಗಗಳ ಪೂರೈಕೆದಾರರಿಗೆ ಬಿಲ್ ಪಾವತಿಸಲು ಸಾರಿಗೆ ಇಲಾಖೆ ಪರದಾಡುತ್ತಿದೆ.

ಸಾರಿಗೆ ಪ್ರಯಾಣದರ, ಸಿಬ್ಬಂದಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಪ್ರಯಾಣದರ ಹೆಚ್ಚಿಸುವ ಪ್ರಸ್ತಾವವೂ ಸರಕಾರದ ಮುಂದಿದೆ.

ಕ್ಯಾಬ್‌ಗಳ ದರ ಮತ್ತಷ್ಟು ದುಬಾರಿ: ಮೂರು ವರ್ಷದ ಬಳಿಕ ಟ್ಯಾಕ್ಸಿ ದರ ಪರಿಷ್ಕರಿಸಿದ್ದು, ಅಗ್ರಿಗೇಟರ್ ನಿಯಮದಡಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ (ಓಲಾ, ಉಬರ್, ಸಿಟಿ ಟ್ಯಾಕ್ಸಿ, ಕೆಎಸ್‌ಟಿಡಿಸಿ ಟ್ಯಾಕ್ಸಿ ಇತ್ಯಾದಿ) ಈ ಪರಿಷ್ಕೃತ ಏಕರೂಪದ ದರ ಅನ್ವಯವಾಗಲಿದೆ. ಪರಿಷ್ಕೃತ ಪ್ರಯಾಣ ದರದ ಅನ್ವಯ ಮೊದಲ 4 ಕಿ.ಮೀ.ಗೆ ಕನಿಷ್ಠ 31 ರೂ. ಹಾಗೂ ಗರಿಷ್ಠ 70 ರೂ. ಹೆಚ್ಚಳವಾಗಿದೆ. ನಂತರದ ಪ್ರತಿ ಕಿ.ಮೀ.ಗೆ ಕನಿಷ್ಠ ದರ 7 ರೂ. ಹಾಗೂ ಗರಿಷ್ಠ ದರ 9 ರೂ. ಏರಿಕೆಯಾಗಿದೆ. ಹೊಸ ಪರಿಷ್ಕೃತ ದರ ಜಾರಿಯಲ್ಲಿದೆ.

ಆಟೊ ಪ್ರಯಾಣ ದರ ಮತ್ತೆ ಏರಿಕೆ ಸಾಧ್ಯತೆ:

ರಾಜ್ಯ ಸರಕಾರ ಟ್ಯಾಕ್ಸಿ ಪ್ರಯಾಣ ದರ ಪರಿಷ್ಕರಿಸಿದ ಬೆನ್ನಲ್ಲೇ ಶೀಘ್ರದಲ್ಲಿ ಆಟೊ ಪ್ರಯಾಣ ದರವನ್ನೂ ಪರಿಷ್ಕರಿಸುವ ಸಾಧ್ಯತೆಯಿದೆ. 2013ರಲ್ಲಿ ಕಡೆಯದಾಗಿ ಆಟೊ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಇಂಧನ, ಆಟೊ ಎಲ್‌ಪಿಜಿ ದರ ಏರಿಕೆಯಿಂದ ತತ್ತರಿಸಿರುವ ಆಟೊ ಚಾಲಕರು, ಪ್ರಯಾಣ ದರ ಪರಿಷ್ಕರಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದಾರೆ. ಪ್ರಸ್ತುತ ಆಟೊ ಪ್ರಯಾಣ ದರ ಆರಂಭದ ಮೊದಲ 1.9 ಕಿ.ಮೀ.ಗೆ 25 ರೂ. ಹಾಗೂನಂತರದ ಪ್ರತಿ ಕಿ.ಮೀ.ಗೆ 13 ರೂ. ಪ್ರಯಾಣ ದರವಿದೆ. ಇದನ್ನು ಮೊದಲ ಎರಡು ಕಿ.ಮೀ.ಗೆ 36 ರೂ. ಹಾಗೂ ನಂತರದ ಪ್ರತಿ ಕಿ.ಮೀ.ಗೆ 15 ರೂ.ಗೆ ಹೆಚ್ಚಳಕ್ಕೆ ಆಟೊ ಚಾಲಕರ ಸಂಘಟನೆಗಳು ಸರಕಾರಕ್ಕೆ ಮನವಿ ಮಾಡಿವೆ.

ಆದರೆ, ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಆಟೊಗಳ ಪ್ರಯಾಣದರ 30 ರೂ. ಚಾಲ್ತಿಯಲ್ಲಿದೆ. ಈ ಜಿಲ್ಲೆಗಳ ಪ್ರಸ್ತುತದರವನ್ನು 35-40ಕ್ಕೆ ಹೆಚ್ಚಿಸುವಂತೆ ಆಟೊ ಚಾಲಕರು ಒತ್ತಾಯಿಸುತ್ತಿದ್ದು, ಶೀಘ್ರದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ಹೊಸ ಅಧಿಸೂಚನೆ ಪ್ರಕಾರ ಕ್ಯಾಬ್‌ಗಳ ಮೌಲ್ಯದ ಆಧಾರದ ವಾಹನಗಳನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಲಾಗಿದೆ. 16 ಲಕ್ಷಕ್ಕೂ ಮೇಲ್ಪಟ್ಟ ವಾಹನಗಳನ್ನು ಎ, 10 ಲಕ್ಷಕ್ಕೂ ಮೇಲ್ಪಟ್ಟ ವಾಹನಗಳನ್ನು ಬಿ, 5 ಲಕ್ಷಕ್ಕೂ ಮೇಲ್ಪಟ್ಟ ವಾಹನಗಳನ್ನು ಸಿ ಹಾಗೂ 5ಲಕ್ಷಕ್ಕಿಂತ ಕಡಿಮೆ ಮೌಲ್ಯದ ವಾಹನಗಳನ್ನು ಡಿ ವರ್ಗದ ವಾಹನಗಳಾಗಿ ವಿಂಗಡಿಸಲಾಗಿದೆ. ಅವುಗಳ ಹಿಂದಿನ ಟ್ಯಾಕ್ಸಿ ದರ ಹಾಗೂ ಪರಿಷ್ಕೃತ ದರ ಈ ಕೆಳಗಿನಂತಿವೆ.

ವಾಹನ ಹಳೆದರ ಪರಿಷ್ಕೃತ ದರ

ಖಾಸಗಿ ಬಸ್ 10 ರೂ., 15-20 ರೂ.

ಆಟೊ 25ರೂ., 30-40 ರೂ.,

ಪ್ರಯಾಣಿಕರಿಗೆ ಜಿಎಸ್‌ಟಿ, ಟೋಲ್ ಶುಲ್ಕದ ಹೊರೆ

ಟ್ಯಾಕ್ಸಿ ಚಾಲಕರು ಸರಕಾರ ನಿಗದಿಗೊಳಿಸಿರುವ ಪ್ರಯಾಣ ದರ ಮಾತ್ರ ಪಡೆಯಬೇಕು. ಜಿಎಸ್‌ಟಿ ಹಾಗೂ ಟೋಲ್ ಶುಲ್ಕವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಿ.ಮೀ. ಆಧಾರದಲ್ಲಿ ನಿಗದಿಗೊಳಿಸಿರುವ ಪ್ರಯಾಣ ದರ ಹೊರತುಪಡಿಸಿ ಅನಧಿಕೃತವಾಗಿ ಯಾವುದೇ ದರಗಳನ್ನು ಪಡೆಯುವಂತಿಲ್ಲ ಎಂದು ಸರಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಕಾಯುವಿಕೆ ದರ ಮೊದಲಿನ 20 ನಿಮಿಷದ (ಪ್ರಸ್ತುತ 15 ನಿಮಿಷ) ವರೆಗೆ ಉಚಿತ, ನಂತರದ ಪ್ರತಿ 15 ನಿಮಿಷಕ್ಕೆ 10 ರೂ. ನಿಗದಿಪಡಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಸಮಯಕ್ಕೆ ಬಾರದ ಬಸ್, ಆಟೊಗಳ ಮೊರೆ

ಕೋವಿಡ್‌ನಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದ ಹಿನ್ನೆಲೆ ಯಲ್ಲಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಅನಿವಾರ್ಯವಾಗಿ ಆಟೊಗಳಿಗೆ 30 ರೂ. ಕೊಟ್ಟು ನಗರ ಪ್ರದೇಶಗಳಿಗೆ ಹೋಗಬೇಕಾ ಗುತ್ತದೆ ಎಂದು ಪ್ರಯಾಣಿಕರು ದೂರಿದ್ದಾರೆ.

ತೆಲ ಹಾಗೂ ಗ್ಯಾಸ್‌ನ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಮೊದಲು ಲೀ.30 ರೂ.ವಿದ್ದ ಆಟೊ ಗ್ಯಾಸ್‌ಗೆ ಈಗ 50 ರೂ. ಆಗಿದೆ. ಆದರೆ, ಲಾಕ್‌ಡೌನ್ ನಂತರದ ದಿನಗಳಲ್ಲಿಯೂ ಪ್ರಯಾಣದರಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. ದಿನದ ಖರ್ಚು ಕಳೆದು 300 ಉಳಿಯುತ್ತಿತ್ತು. ಈಗ ಅದೂ ಸಾಧ್ಯವಾಗುತ್ತಿಲ್ಲ. ಹೊಟ್ಟೆಪಾಡಿಗಾಗಿ ದಿನದೂಡುತ್ತಿದ್ದೇವೆ.

-ಅರ್ಷದ್, ಆಟೊ ಚಾಲಕರ ಯೂನಿಯನ್ ಅಧ್ಯಕ್ಷ (ಎಸ್ಡಿಟಿಯು)

ಕೊರೋನ ಲಾಕ್‌ಡೌನ್‌ನಿಂದಾಗಿ ರಾಜ್ಯದಾದ್ಯಂತ ಪ್ರವಾಸಿಗರ ದಂಡು ಕಡಿಮೆಯಾಗಿದೆ. ಇದರಿಂದ ಟ್ಯಾಕ್ಸಿ ಚಾಲಕರ ಸಂಕಷ್ಟ ಹೇಳತೀರದು. ಪ್ರಯಾಣಿಕರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿದರೆ ಅಲ್ಲಲ್ಲಿ ಟೋಲ್‌ಗೇಟ್‌ಗಳ ಹಾವಳಿ. ಇದರಿಂದ ಸುಮಾರು 2 ಸಾವಿರ ರೂ. ಟೋಲ್ ನೀಡಬೇಕಾಗುತ್ತದೆ.ಸ್ವಂತ ಟ್ಯಾಕ್ಸಿಯಿದ್ದರೆ ಅಲ್ಪಸ್ವಲ್ಪಉಳಿತಾಯ ವಾಗಬಹುದು. ನಮ್ಮಂತವರಿಗೆ ದಿನವಿಡಿ ದುಡಿದಊ ಉಳಿತಾಯ ಆಗುವುದಿಲ್ಲ. ಇನ್ನೂ ಬಾಡಿಗೆ ವಾಹನ ಚಾಲಕರ ಪರಿಸ್ಥಿತಿ ಶೋಚನೀಯ. ಮನೆ ಬಾಡಿಗೆ, ಇತರ ಖರ್ಚು, ಬ್ಯಾಂಕ್ ಇಎಂಐ-ಬಡ್ಡಿ, ಮಾಲಕರ ಕಂತು ಕೂಡ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಟ್ಯಾಕ್ಸಿ ಚಾಲಕರು ತಮ್ಮ ಕಾರುಗಳನ್ನು ಮಾರಾಟ ಮಾಡಿದರೆ, ಇನ್ನು ಕೆಲವರ ವಾಹನಗಳು ಬ್ಯಾಂಕ್, ಫೈನಾನ್ಸ್‌ಗಳ ಪಾಲಾಗಿವೆ.

-ಪ್ರಭಾಕರ್ ದೈವಗುಡ್ಡೆ,

ಟೂರಿಸ್ಟ್ ಕಾರು/ವ್ಯಾನ್ ಚಾಲಕರ ಸಂಘದ ದ.ಕ. ಜಿಲ್ಲಾಧ್ಯಕ್ಷ

share
ರಹಿಮಾನ್ ತಲಪಾಡಿ
ರಹಿಮಾನ್ ತಲಪಾಡಿ
Next Story
X