ಸುಳ್ಯ: ಕಾಡಾನೆ ದಾಳಿಗೆ ಒಳಗಾಗಿ ವ್ಯಕ್ತಿಯೋರ್ವರು ಸಾವನಪ್ಪಿದ ಘಟನೆ ಕಲ್ಮಕಾರಿನಿಂದ ವರದಿಯಾಗಿದೆ.
ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ (80) ಮೃತರು.
ಅವರು ನೀರಿನ ಪೈಪ್ ಸರಿ ಮಾಡಲೆಂದು ಮನೆಯ ಹೊರಗೆ ಬಂದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.