ಮದುವೆಗೆ ನಿರಾಕರಿಸಿದ ಯುವತಿಯ ಕೊಲೆ ಪ್ರಕರಣ: ಆರೋಪಿಯ ಬಂಧನ
ತುಮಕೂರು, ಎ.7: ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಾ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್5 ರಂದು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟ ದೊಡ್ಡಗೂಳ ಗ್ರಾಮದ ಕುಮಾರಿ ಕಾವ್ಯ ಅವರನ್ನು ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ಅದೇ ಗ್ರಾಮದ ಈರಣ್ಣ ಎಂಬಾತ ಯುವತಿ ಕಾಲೇಜಿಗೆ ನಡೆದುಕೊಂಡು ಹೋಗುವಾಗ ಬೈಕ್ನಲ್ಲಿ ಬಂದು ಆಕೆಯನ್ನು ಹತ್ತಿರದ ಪೊದೆಯೊಳಗೆ ಎಳೆದುಕೊಂಡು ಹೋಗಿ, ಕುಡುಗೊಲಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ.
ಈ ಸಂಬಂಧ ಶಿರಾ ಸಿಪಿಐ ನೇತೃತ್ವದಲ್ಲಿ ರಚಿಸಿದ್ದ ತಂಡ ತನಿಖೆ ನಡೆಸುವ ವೇಳೆ ಹಲ್ಕೂರು ಕೆರೆ ಅಂಗಳದಲ್ಲಿ ಸೀಮೆ ಜಾಲಿಯಲ್ಲಿ ಅಡಗಿ ಕುಳಿತಿದ್ದ ಆರೋಪಿ ಈರಣ್ಣನನ್ನು ಬಂಧಿಸಿದ ತಂಡ, ಕೃತ್ಯಕ್ಕಾಗಿ ಬಳಸಿದ ಕುಡುಗೋಲು ಮತ್ತು ಮೋಟಾರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ.
Next Story