Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆಂಪು ಸಮುದ್ರದಲ್ಲಿ ಇರಾನ್‌ನ ಸರಕು...

ಕೆಂಪು ಸಮುದ್ರದಲ್ಲಿ ಇರಾನ್‌ನ ಸರಕು ಹಡಗಿನ ಮೇಲೆ ದಾಳಿ

ವಾರ್ತಾಭಾರತಿವಾರ್ತಾಭಾರತಿ7 April 2021 10:48 PM IST
share

ರಿಯಾದ್ (ಸೌದಿ ಅರೇಬಿಯ), ಎ. 7: ಯೆಮನ್ ಕರಾವಳಿಗೆ ಹೊಂದಿಕೊಂಡ ಕೆಂಪು ಸಮುದ್ರದಲ್ಲಿರುವ ಇರಾನ್‌ನ ಸರಕು ಹಡಗೊಂದರ ಮೇಲೆ ದಾಳಿ ನಡೆದಿದೆ. ಈ ಹಡಗು, ಇರಾನ್‌ನ ಅರೆಸೈನಿಕ ಪಡೆ ರೆವಲೂಶನರಿ ಗಾರ್ಡ್‌ನ ನೆಲೆ ಎಂಬುದಾಗಿ ಭಾವಿಸಲಾಗಿದ್ದು, ಹಲವು ವರ್ಷಗಳಿಂದ ಕೆಂಪು ಸಮುದ್ರದಲ್ಲಿ ಲಂಗರು ಹಾಕಿತ್ತು.

ಹಡಗಿನ ಮೇಲೆ ದಾಳಿ ನಡೆದಿರುವುದನ್ನು ಇರಾನ್‌ನ ವಿದೇಶ ಸಚಿವಾಲಯ ಬುಧವಾರ ಖಚಿತಪಡಿಸಿದೆ. ಸ್ಥಳೀಯ ಸಮಯ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಡಿಜಿಬೂಟಿ ನಗರದ ತೀರಕ್ಕೆ ಹೊಂದಿಕೊಂಡಿರುವ ಕೆಂಪು ಸಮುದ್ರದ ಭಾಗದಲ್ಲಿ ಲಂಗರು ಹಾಕಿದ್ದ ಎಂವಿ ಸವೀಝ್ ಹಡಗಿಗೆ ಸ್ಫೋಟಕವೊಂದು ಅಪ್ಪಳಿಸಿತು ಎಂದು ವಿದೇಶ ಸಚಿವಾಲಯದ ವಕ್ತಾರ ಸಯೀದ್ ಖತೀಬ್‌ಝಾದೆ ಹೇಳಿದರು. ದಾಳಿಯಿಂದಾಗಿ ಹಡಗಿಗೆ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ ಎಂದರು.

ಎಂವಿ ಸವೀಝ್ ಸೇನಾಯೇತರ ಹಡಗಾಗಿದ್ದು ಅಂತರ್‌ರಾಷ್ಟ್ರೀಯ ಸಾಗರಮಾರ್ಗ ಸಂಘಟನೆಯಲ್ಲಿ ಔಪಚಾರಿಕವಾಗಿ ನೋಂದಾಯಿಸಲಾಗಿದೆ ಎಂದು ಸಯೀದ್ ಹೇಳಿದರು. ಅದು ಕೆಂಪು ಸಮುದ್ರದಲ್ಲಿ ಇರಾನ್‌ನ ‘ಲಾಜಿಸ್ಟಿಕ್ ಸ್ಟೇಶನ್’ ಆಗಿ ಕೆಲಸ ಮಾಡುತ್ತಿದ್ದು ಕಡಲ್ಗಳ್ಳತನ ನಿಗ್ರಹ ಸೇವೆಯನ್ನು ಒದಗಿಸುತ್ತಿದೆ ಎಂದರು.

‘‘ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಘಟನೆ ಹೇಗೆ ಸಂಭವಿಸಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ’’ ಎಂದು ವಿದೇಶ ಸಚಿವಾಲಯದ ವಕ್ತಾರ ನುಡಿದರು.

ಯೆಮನ್‌ನಲ್ಲಿನ ಆಂತರಿಕ ಯುದ್ಧದಲ್ಲಿ ಅಲ್ಲಿನ ಹೌದಿ ಬಂಡುಕೋರರಿಗೆ ಇರಾನ್ ಶಸ್ತ್ರಗಳನ್ನು ಪೂರೈಸುತ್ತಿದೆ ಎಂಬುದಾಗಿ ವಿಶ್ವಸಂಸ್ಥೆ ಮತ್ತು ಪಾಶ್ಚಿಮಾತ್ಯ ದೇಶಗಳು ಆರೋಪಗಳನ್ನು ಮಾಡುತ್ತಿರುವಂತೆಯೇ, ಈ ಹಡಗು ಈ ಪ್ರದೇಶದಲ್ಲಿ ಸುದೀರ್ಘ ಸಮಯದಿಂದ ಲಂಗರು ಹಾಕಿದೆ.

ಇಸ್ರೇಲ್ ದಾಳಿ ನಡೆಸಿತೇ?

ಎಂವಿ ಸವೀಝ್ ಹಡಗಿನ ಮೇಲೆ ದಾಳಿ ನಡೆಸುವುದಾಗಿ ಇಸ್ರೇಲ್ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ ಎಂದು ಇರಾನ್‌ನ ಸರಕಾರಿ ಟಿವಿಯೊಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X