Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಕೇಶ್ ಅಂಬಾನಿ ಏಶ್ಯದ ಅತಿ ಶ್ರೀಮಂತ...

ಮುಕೇಶ್ ಅಂಬಾನಿ ಏಶ್ಯದ ಅತಿ ಶ್ರೀಮಂತ ವ್ಯಕ್ತಿ: ಭಾರತದಲ್ಲಿ 3ನೇ ಅತಿ ಹೆಚ್ಚು ಸಂಖ್ಯೆಯ ಶತಕೋಟ್ಯಾಧೀಶರು

ಫೋರ್ಬ್ಸ್ ಮ್ಯಾಗಝಿನ್

ವಾರ್ತಾಭಾರತಿವಾರ್ತಾಭಾರತಿ7 April 2021 10:51 PM IST
share
ಮುಕೇಶ್ ಅಂಬಾನಿ ಏಶ್ಯದ ಅತಿ ಶ್ರೀಮಂತ ವ್ಯಕ್ತಿ: ಭಾರತದಲ್ಲಿ 3ನೇ ಅತಿ ಹೆಚ್ಚು ಸಂಖ್ಯೆಯ ಶತಕೋಟ್ಯಾಧೀಶರು

ಹೊಸದಿಲ್ಲಿ, ಎ. 7: ಅಮೆರಿಕ ಮತ್ತು ಚೀನಾದ ಬಳಿಕ ಭಾರತದಲ್ಲಿ ಮೂರನೇ ಅತಿ ಹೆಚ್ಚು ಸಂಖ್ಯೆಯ ಶತಕೋಟ್ಯಾಧೀಶರು ಇದ್ದಾರೆ ಎಂದು ‘ಫೋರ್ಬ್ಸ್ ಮ್ಯಾಗಝಿನ್’ ವರದಿ ಮಾಡಿದೆ. ಪತ್ರಿಕೆಯ ಶ್ರೀಮಂತರ ಹೊಸ ಪಟ್ಟಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಏಶ್ಯದ ಅತಿ ಶ್ರೀಮಂತ ವ್ಯಕ್ತಿಯ ಸ್ಥಾನವನ್ನು ಮತ್ತೆ ಪಡೆದುಕೊಂಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅವರು ಚೀನಾದ ಉದ್ಯಮಿ ಜಾಕ್ ಮಾರನ್ನು ಹಿಂದಿಕ್ಕಿದ್ದಾರೆ.

ಅಮೆಝಾನ್ ಸ್ಥಾಪಕ ಹಾಗೂ ಸಿಇಒ ಜೆಫ್ ಬೆಝಾಸ್ ಪಟ್ಟಿಯ ಮೊದಲನೇ ಸ್ಥಾನದಲ್ಲಿದ್ದಾರೆ. ಸತತ ನಾಲ್ಕನೇ ವರ್ಷ ಅವರು ಸ್ಥಾನವನ್ನು ಕಾಪಾಡಿಕೊಂಡು ಬಂದಿದ್ದಾರೆ. ಅವರ ನಿವ್ವಳ ಸಂಪತ್ತು 177 ಬಿಲಿಯ ಡಾಲರ್ ಆಗಿದ್ದು, ಕಳೆದ ವರ್ಷದಿಂದ 64 ಬಿಲಿಯ ಡಾಲರ್‌ನಷ್ಟು ಏರಿಕೆಯಾಗಿದೆ.

ಸ್ಪೇಸ್‌ಎಕ್ಸ್ ಸ್ಥಾಪಕ ಎಲಾನ್ ಮಸ್ಕ್ ಎರಡನೇ ಸ್ಥಾನದಲ್ಲಿದ್ದಾರೆ. ಅವರ ನಿವ್ವಳ ಸಂಪತ್ತು 151 ಬಿಲಿಯ ಡಾಲರ್‌ಗೆ ಏರಿಕೆಯಾಗಿದೆ. ಇದು ಅವರ ಕಳೆದ ವರ್ಷದ ಸಂಪತ್ತಿಗಿಂತ ಅಮೋಘ 126.4 ಬಿಲಿಯ ಡಾಲರ್‌ನಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಅವರು 24.6 ಬಿಲಿಯ ಡಾಲರ್‌ನೊಂದಿಗೆ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 31ನೇ ಸ್ಥಾನದಲ್ಲಿದ್ದರು.

‘‘ಅವರ ಟೆಸ್ಲಾ ಶೇರುಗಳ ಮೌಲ್ಯ 705 ಶೇಕಡದಷ್ಟು ಹೆಚ್ಚಾಗಿರುವುದು ಇದಕ್ಕೆ ಕಾರಣವಾಗಿದೆ’’ ಎಂದು ‘ಫೋರ್ಬ್ಸ್’ ಹೇಳಿದೆ.

ಏಶ್ಯ ಮತ್ತು ಭಾರತದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ ಜಾಗತಿಕ ಬಿಲಿಯಾಧೀಶರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ. ಅವರು 84.5 ಬಿಲಿಯ ಡಾಲರ್ (ಸುಮಾರು 6,28,500 ಕೋಟಿ ರೂಪಾಯಿ) ನಿವ್ವಳ ಸಂಪತ್ತು ಹೊಂದಿದ್ದಾರೆ.

ಅದಾನಿ ಗುಂಪಿನ ಅಧ್ಯಕ್ಷ ಗೌತಮ್ ಅದಾನಿ ಭಾರತದ 2ನೇ ಅತಿ ಶ್ರೀಮಂತರಾಗಿದ್ದು, ಜಾಗತಿಕ ಬಿಲಿಯಾಧೀಶರ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದಿದ್ದಾರೆ. ಅವರು 50.5 ಬಿಲಿಯ ಡಾಲರ್ (ಸುಮಾರು 3.75 ಲಕ್ಷ ಕೋಟಿ ರೂಪಾಯಿ)ನಿವ್ವಳ ಸಂಪತ್ತು ಗಳಿಸಿದ್ದಾರೆ.

ಕಳೆದ ವರ್ಷ ಏಶ್ಯದ ಅತಿ ಶ್ರೀಮಂತರಾಗಿದ್ದ ಜಾಕ್ ಮಾ, ಈ ಬಾರಿ ಆ ಸ್ಥಾನವನ್ನು ಅಂಬಾನಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ವರ್ಷ ಜಾಗತಿಕ ಪಟ್ಟಿಯಲ್ಲಿ 17ನೇ ಸ್ಥಾನ ಹೊಂದಿದ್ದ ಅವರು ಈ ಬಾರಿ 26ನೇ ಸ್ಥಾನಕ್ಕೆ ಜಾರಿದ್ದಾರೆ. ಅವರ ನಿವ್ವಳ ಸಂಪತ್ತು 48.4 ಬಿಲಿಯ ಡಾಲರ್ ಆಗಿದೆ.

ಪೂನಾವಾಲಾ ಗ್ರೂಪ್‌ನ ಅಧ್ಯಕ್ಷ ಹಾಗೂ ಜಗತ್ತಿನ ಅತಿ ದೊಡ್ಡ ಲಸಿಕೆ ತಯಾರಿಕಾ ಸಂಸ್ಥೆ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯದ ಸ್ಥಾಪಕ ಸೈರಸ್ ಪೂನಾವಾಲಾ ಭಾರತೀಯ ಅತಿ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದಾರೆ ಹಾಗೂ ಜಾಗತಿಕ ಪಟ್ಟಿಯಲ್ಲಿ 169ನೇ ಸ್ಥಾನದಲ್ಲಿದ್ದಾರೆ. ಅವರ ನಿವ್ವಳ ಸಂಪತ್ತು 12.7 ಬಿಲಿಯ ಡಾಲರ್ (ಸುಮಾರು 94,460 ಕೋಟಿ ರೂಪಾಯಿ).

ಎಚ್‌ಸಿಎಲ್ ಟೆಕ್ನಾಲಜೀಸ್‌ನ ಸ್ಥಾಪಕ ಶಿವ್ ನಾಡಾರ್ ಭಾರತದ ಮೂರನೇ ಅತಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ ಹಾಗೂ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 71ನೇ ಸ್ಥಾನ ಗಳಿಸಿದ್ದಾರೆ. ಅವರ ನಿವ್ವಳ ಸಂಪತ್ತು 23.5 ಬಿಲಿಯ ಡಾಲರ್ (ಸುಮಾರು 1.75 ಲಕ್ಷ ಕೋಟಿ ರೂಪಾಯಿ).

ಅಮೆರಿಕದಲ್ಲಿ 724 ಬಿಲಿಯಾಧೀಶರಿದ್ದರೆ, ಚೀನಾದಲ್ಲಿ 698 ಅತಿ ಶ್ರೀಮಂತರಿದ್ದಾರೆ. ಬಿಲಿಯಾಧೀಶರ ಸಂಖ್ಯೆಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದ್ದು, 140 ಅತಿ ಶ್ರೀಮಂತರನ್ನು ಅದು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X