Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇವಸ್ಥಾನದ ಭೂಮಿ ಕಬಳಿಕೆ ಪ್ರಕರಣ:...

ದೇವಸ್ಥಾನದ ಭೂಮಿ ಕಬಳಿಕೆ ಪ್ರಕರಣ: ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ವಿರುದ್ಧ ಬಂಧನ ವಾರಂಟ್

ವಾರ್ತಾಭಾರತಿವಾರ್ತಾಭಾರತಿ7 April 2021 11:46 PM IST
share
ದೇವಸ್ಥಾನದ ಭೂಮಿ ಕಬಳಿಕೆ ಪ್ರಕರಣ: ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ವಿರುದ್ಧ ಬಂಧನ ವಾರಂಟ್

ಬೆಂಗಳೂರು, ಎ.7: ದೇವಸ್ಥಾನದ ಭೂಮಿ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸದ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ಕುಮಾರ್ ವಿರುದ್ಧ ಕರ್ನಾಟಕ ಭೂ ಕಬಳಿಕ ನಿಷೇಧ ವಿಶೇಷ ನ್ಯಾಯಾಲಯವು 25 ಸಾವಿರ ರೂ.ದಂಡ ಹಾಗೂ ಜಾಮೀನು ಸಹಿತ ಬಂಧನ ವಾರೆಂಟ್ ಹೊರಡಿಸಿದೆ.

ಬಿದರಹಳ್ಳಿ ಹೋಬಳಿಯ ಬೆಳತ್ತೂರು ಗ್ರಾಮದಲ್ಲಿ ಚೌಡೇಶ್ವರಿ ದೇವಾಲಯದ ಸರ್ವೇ 57 ರಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 2 ಎಕರೆ 26 ಗುಂಟೆ ಸರಕಾರಿ ಜಮೀನನ್ನು ಈ ಹಿಂದಿನ ತಹಶೀಲ್ದಾರ್ ಬಾಳಪ್ಪ ಹಂದಿಗುಂದ ಅವಧಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಒತ್ತುವರಿ ಮಾಡಿ ನಲವತ್ತಕ್ಕೂ ಹೆಚ್ಚು ಐಷಾರಾಮಿ ಬಂಗಲೆ, ವಿಲ್ಲಾಸ್, ಜಿಮ್, ಕ್ಲಬ್ ಈಜುಕೊಳ ಇತರೆ ಅಕ್ರಮ ಕಟ್ಟಡಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

ಸರಕಾರಿ ಜಮೀನು ಕಬಳಿಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮುಖಾಂತರ ನೋಟಿಸ್ ನೀಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನ ನೀಡಿದರೂ ತಹಶೀಲ್ದಾರ್ ಅಜಿತ್ ಕುಮಾರ್ ವರದಿ ಸಲ್ಲಿಸದ ಕಾರಣ ಎ.27ರಂದು ಬೆಳಗ್ಗೆ 11 ಗಂಟೆಗೆ ಖುದ್ದು ಹಾಜರಾಗಿ 25 ಸಾವಿರ ರೂ. ದಂಡ ಮತ್ತು ಜಾಮೀನು ಸಹಿತ ಬಂಧನ ವಾರಂಟ್‍ನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶ ಹೊರಡಿಸಿ ಕೆ.ಆರ್.ಪುರ ಪೊಲೀಸ್ ಠಾಣಾಧಿಕಾರಿಗೆ ರವಾನಿಸಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದೂರುದಾರ ಹಾಗೂ ಸಾಮಾಜಿಕ ಹೋರಾಟಗಾರ ಬೆಳತ್ತೂರು ಪರಮೇಶ್, ಈ ಹಿಂದೆ ದೇವಸ್ಥಾನ ಜಾಗ ಜಾತ್ರೆ ಸಮಯದಲ್ಲಿ ಪಲ್ಲಕ್ಕಿ ನಿಲ್ಲಿಸಲು, ಸರಕಾರಿ ಕಾರ್ಯಕ್ರಮ ಮಾಡಲು ಆಟದ ಮೈದಾನವಾಗಿ ಊರಿನವರಿಗೆ ಬಳಕೆ ಆಗುತ್ತಿತ್ತು. ನಾರಾಯಣಸ್ವಾಮಿ, ಲೋಕೇಶ್, ರಂಜಿತ್ ರೆಡ್ಡಿ ಸೇರಿದಂತೆ 63 ಮಂದಿ ವಿರುದ್ಧ ಭೂ ಕಬಳಿಕೆಗೆ ಸಂಬಂಧಿಸಿದಂತೆ ದೂರು ದಾಖಲು ಮಾಡಲಾಗಿದೆ ಎಂದರು.

ಸರಕಾರಿ ಜಮೀನು ಉಳಿಸಲು ಒಂಭತ್ತು ವರ್ಷದಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ತಹಶೀಲ್ದಾರ್ ಅಜಿತ್ ಕುಮಾರ್ ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಮೂರು ಸಾರಿ ನೋಟಿಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಸರಕಾರಿ ಅಧಿಕಾರಿಯಾಗಿ ಜಮೀನು ಉಳಿಸಲು ಮನಸ್ಸು ಮಾಡುತ್ತಿಲ್ಲ. ಒತ್ತುವರಿದಾರರ ಜೊತೆ ತಹಶೀಲ್ದಾರ್ ಅಜಿತ್ ಕುಮಾರ್ ಶಾಮಿಲಾಗಿದ್ದಾರೆ ಎಂದು ಪರಮೇಶ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X