Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಚ್ಚನಾಡಿ ಡಂಪಿಂಗ್ ಯಾರ್ಡ್ ಅಗ್ನಿ...

ಪಚ್ಚನಾಡಿ ಡಂಪಿಂಗ್ ಯಾರ್ಡ್ ಅಗ್ನಿ ದುರಂತ; ಗುತ್ತಿಗೆ ಸಂಸ್ಥೆ ನೇರ ಹೊಣೆ: ಸುಧೀರ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ8 April 2021 2:38 PM IST
share
ಪಚ್ಚನಾಡಿ ಡಂಪಿಂಗ್ ಯಾರ್ಡ್ ಅಗ್ನಿ ದುರಂತ; ಗುತ್ತಿಗೆ ಸಂಸ್ಥೆ ನೇರ ಹೊಣೆ: ಸುಧೀರ್ ಶೆಟ್ಟಿ

ಮಂಗಳೂರು, ಎ.8: ನಗರದ ಹೊರವಲಯದ ಪಚ್ಚನಾಡಿ ಡಂಪಿಂಗ್ ಯಾಡ್‌ನ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ರವಿವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತಕ್ಕೆ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯೇ ನೇರ ಹೊಣೆ ಎಂದು ಮನಪಾ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಆರೋಪ ಮಾಡಿದ ಅವರು, ಘಟನೆಯ ಸಂದರ್ಭ ಸ್ಥಳೀಯ ಕಾರ್ಪೊರೇಟರ್, ಮೇಯರ್ ಹಾಗೂ ಶಾಸಕರು ತಕ್ಷಣ ಸ್ಪಂದಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಪರಿಸರ ಸ್ನೇಹಿ ಒಣ ಕಣ ಘಟಕವು ಇಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯಾಚರಿಸುತ್ತಿದ್ದು, ಜನವರಿಗೆ ಅವರ ಗುತ್ತಿಗೆ ಮುಗಿದಿತ್ತು. ಆಯುಕ್ತರು ಕುತ್ತಿಗೆಯನ್ನು ಮೂರು ತಿಂಗಳ ಕಾಲ ವಿಸ್ತರಿಸಿದ್ದರು. ಅಲ್ಲಿ ಆ ಘಟಕದವರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ಗೆ ಬರುವ ಕಸವನ್ನು ಟನ್‌ಗೆ 100 ರೂ.ನಂತೆ ಪಡೆದು ಪ್ಲ್ಯಾಸ್ಟಿಕ್ ಸ್ವಚ್ಛಗೊಳಿಸುವ ಹಾಗೂ ಪ್ರೆಸ್ಸಿಂಗ್ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಮೆ ಮಾಡಿಲ್ಲ ಎಂದು ಮನಪಾ ಸದಸ್ಯರಾದ ವಿನಯ್ ರಾಜ್ ಆರೋಪಿಸಿದ್ದಾರೆ. ವಿಮೆ ಮಾಡಬೇಕಿದ್ದು ಗುತ್ತಿಗೆ ವಹಿಸಿಕೊಂಡ ಸಂಸ್ಥೆಯವರು. ವಕೀಲನಾಗಿದ್ದು ಈ ರೀತಿಯ ಹೇಳಿಕೆಯನ್ನು ವಿನಯ್ ‌ರಾಜ್ ನೀಡಿರುವುದು ಹಾಸ್ಯಾಸ್ಪದ ಎಂದು ಸುಧೀರ್ ಶೆಟ್ಟಿ ಹೇಳಿದರು.

ಮಾಜಿ ಮೇಯರ್ ಕವಿತಾ ಸನಿಲ್ ಅವಧಿಯಲ್ಲಿ ಅಲ್ಲಿ 14ನೆ ಹಣಕಾಸು ಯೋಜನೆಯಡಿ 2 ಲಕ್ಷ ಲೀಟರ್‌ನ ಟ್ಯಾಂಕ್ ನಿರ್ಮಾಣವಾಗಿದೆ. ಆದರೆ ಪಂಪಿಂಗ್ ಪೈಪ್‌ಲೈನ್ ವ್ಯವಸ್ಥೆ ಮಾಡಲಾಗಿಲ್ಲ. ಆ ಹಣವನ್ನು ಅವರು ಅಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಉಪಯೋಗಿಸಿದ್ದರು. ಹಾಗಾಗಿ ಅಲ್ಲಿ ಬೆಂಕಿ ನಂದಿಸಲು ನೀರಿನ ವ್ಯವಸ್ಥೆ ಇಲ್ಲದಿರುವುದಕ್ಕೆ ಕಾಂಗ್ರೆಸ್ ಹೊಣೆ. ಇದೀಗ ಸ್ಥಳೀಯ ಪ್ರಸಕ್ತ ಸದಸ್ಯರು ಶಾಸಕರ ವಿಶೇಷ ಮುತುವರ್ಜಿಯಲ್ಲಿ ಅಲ್ಲಿ 50 ಎಚ್‌ಪಿ ಪಂಪ್ ಅಳವಡಿಕೆ, ಸಿಸಿ ಕ್ಯಾಮರ, ದಾರಿ ದೀಪ ಅಳವಡಿಸಲು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸುಧೀಶೆಟ್ಟಿ ಹೇಳಿದರು.

ಅಲ್ಲಿದ್ದ ಪಂಪ್ ಒಂದನ್ನು ಸ್ಥಳೀಯ ಕಾರ್ಪೊರೇಟರ್ ಬೇರೆಡೆ ಸಾಗಿಸಿದ್ದಾರೆಂಬ ವಿನಯ್‌ರಾಜ್ ಅವರ ಆರೋಪ ಉಲ್ಲೇಖಿಸಿದ ಸುಧೀರ್ ಶೆಟ್ಟಿ, ಮಂದಾರ ಬೈಲ್‌ನ ಬೋರ್‌ವೆಲ್‌ಗೆ ಅಳವಡಿಸಲಾಗಿದದ 3 ಎಚ್‌ಪಿ ಪಂಪನ್ನು ಆಯುಕ್ತರಿಗೆ ಪತ್ರ ನೀಡಿ ಮನಪಾ ಮೂಲಕವೇ ಅದರ ಬದಿಯ ಪ್ರದೇಶಕ್ಕೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಸದಸ್ಯೆ ಸಂಗೀತ ಆರ್. ನಾಯಕ್, ಬಿಜೆಪಿ ಮುಖಂಡ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರಸ್ತುತ ಸಂಸ್ಕರಣಾ ಘಟಕದಲ್ಲಿ 100 ಟನ್ ಮಾತ್ರ ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ. ಪಚ್ಚನಾಡಿ ಡಂಪಿಂಗ್ ಯಾರ್ಡ್‌ಗೆ 250 ಟನ್‌ಗೂ ಅಧಿಕ ತ್ಯಾಜ್ಯ ಸೇರುತ್ತಿದೆ. ಉಳ್ಳಾಲ ಪುರಸಭೆಯ ಸುಮಾರು 75 ಟನ್‌ಗೂ ಅಧಿಕ ತ್ಯಾಜ್ಯ ಅಲ್ಲಿಗೆ ಸೇರುತ್ತಿದೆ. ನಗರಾಭಿವೃದ್ಧಿ ಸಚಿವರಾಗಿ ಅನುಭವ ಇರುವ ಅಲ್ಲಿನ ಶಾಸಕ ಯು.ಟಿ.ಖಾದರ್‌ರವರು ಉಳ್ಳಾಲದಲ್ಲಿಯೇ ಡಂಪಿಂಗ್ ಯಾರ್ಡ್ ಮಾಡಬೇಕು ಎಂದು ಸುಧೀರ್ ಶೆಟ್ಟಿ ಕಣ್ಣೂರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X