Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮುವಿನಲ್ಲಿರುವ ರೋಹಿಂಗ್ಯನ್ನರನ್ನು...

ಜಮ್ಮುವಿನಲ್ಲಿರುವ ರೋಹಿಂಗ್ಯನ್ನರನ್ನು ಮ್ಯಾನ್ಮಾರ್ ಗೆ ವಾಪಸ್ ಕಳುಹಿಸಲು ಸುಪ್ರೀಂ ಕೋರ್ಟ್ ಅನುಮತಿ

"ಜಗತ್ತಿನಲ್ಲಿರುವ ಅಕ್ರಮ ವಲಸಿಗರಿಗೆ ಭಾರತ ರಾಜಧಾನಿಯಾಗಲು ಸಾಧ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ8 April 2021 4:16 PM IST
share
ಜಮ್ಮುವಿನಲ್ಲಿರುವ ರೋಹಿಂಗ್ಯನ್ನರನ್ನು ಮ್ಯಾನ್ಮಾರ್ ಗೆ ವಾಪಸ್ ಕಳುಹಿಸಲು ಸುಪ್ರೀಂ ಕೋರ್ಟ್ ಅನುಮತಿ

ಹೊಸದಿಲ್ಲಿ: ಜಮ್ಮುವಿನಲ್ಲಿ ರೋಹಿಂಗ್ಯ ನಿರಾಶ್ರಿತರ ದಿಗ್ಬಂಧನವನ್ನು ಹಾಗೂ ಅವರನ್ನು ಅವರ ತವರು ದೇಶವಾದ ಮ್ಯಾನ್ಮಾರ್‍ಗೆ ವಾಪಸ್ ಕಳುಹಿಸುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅಪೀಲನ್ನು  ಮನ್ನಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜಮ್ಮುವಿನ ದಿಗ್ಬಂಧನ ಕೇಂದ್ರಗಳಲ್ಲಿರುವ 150 ರೊಹಿಂಗ್ಯನ್ನರ ಬಿಡುಗಡೆಗೆ ನಿರಾಕರಿಸಿದ ನ್ಯಾಯಾಲಯ ಕಾನೂನಿನ ಪ್ರಕಾರ ಅವರ ಮಾತೃ ದೇಶಕ್ಕೆ ಅವರನ್ನು ಕಳುಹಿಸಲು ಅನುಮತಿಸಿದೆ.

"ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಆದರೆ ಜಮ್ಮುವಿನಲ್ಲಿರುವ ರೊಹಿಂಗ್ಯನ್ನರ ಗಡೀಪಾರಿಗೆ ಸಂಬಂಧಿಸಿದ  ನಿಗದಿತ ಪ್ರಕ್ರಿಯೆಗಳನ್ನು ಅನುಸರಿಸದ  ಹೊರತು  ಅವರನ್ನು ಅವರ ದೇಶಕ್ಕೆ ಕಳುಹಿಸಬಾರದು" ಎಂದು ನ್ಯಾಯಾಲಯ ಹೇಳಿದೆ.

ರೊಹಿಂಗ್ಯನ್ನರ ಪರವಾಗಿ ಮೊಹಮ್ಮದ್ ಸಲೀಮುಲ್ಲಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಪೀಲಿನ ಮೇಲಿನ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಹಾಗೂ ವಿ ರಾಮಸುಬ್ರಮಣಿಯನ್ ಅವರ ಪೀಠ  ಮೇಲಿನ ಆದೇಶ ಹೊರಡಿಸಿದೆ.

ಮ್ಯಾನ್ಮಾರ್‍ನಲ್ಲಿ ಈಗ ಮಿಲಿಟರಿ ಆಡಳಿತವಿರುವುದರಿಂದ ಈ ಹಿಂದೆ ನಾಗರಿಕ ಸರಕಾರವಿರುವಾಗಲೂ ಸೇನೆಯಿಂದ ದೌರ್ಜನ್ಯವೆದುರಿಸಿದ್ದ ರೋಹಿಂಗ್ಯನ್ನರನ್ನು ಈಗ ವಾಪಸ್ ಕಳುಹಿಸಿದರೆ ಅವರಿಗೆ ಅಪಾಯವುಂಟಾಗಬಹುದು ಎಂದು ಮಾರ್ಚ್ 23ರಂದು ನಡೆದ ವಿಚಾರಣೆ ವೇಳೆ ಅಪೀಲುದಾರರ ಪರ ವಕೀಲ  ಪ್ರಶಾಂತ್ ಭೂಷಣ್ ಹೇಳಿದ್ದರಲ್ಲದೆ ರೊಹಿಂಗ್ಯನ್ನರು ತಮ್ಮ ದೇಶದಲ್ಲಿ ನರಮೇಧದ ಬೆದರಿಕೆ ಎದುರಿಸುತ್ತಿರುವ ಕುರಿತಂತೆ ಕಳೆದ ವರ್ಷದ ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನೂ ಉಲ್ಲೇಖಿಸಿದ್ದರು.

ಆದರೆ ಅಪೀಲನ್ನು ವಿರೋಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಸ್ಸಾಂನಲ್ಲಿ ರೋಹಿಂಗ್ಯನ್ನರಿಗೆ ಸಂಬಂಧಿಸಿದ ಇಂತಹುದೇ ಅಪೀಲನ್ನು  2018ರಲ್ಲಿ ತಿರಸ್ಕರಿಸಲಾಗಿತ್ತು ಎಂಬುದನ್ನು ಅಪೀಲುದಾರರು ಉಲ್ಲೇಖಿಸಿಲ್ಲ ಎಂದರು. ಮೇಲಾಗಿ ರೊಹಿಂಗ್ಯನ್ನರನ್ನು ನಿರಾಶ್ರಿತರೆಂದು ಹೇಳಬಾರದು ಅವರು ಅಕ್ರಮ ವಲಸಿಗರು ಎಂದೂ ಮೆಹ್ತಾ ಹೇಳಿದರಲ್ಲದೆ ಜಗತ್ತಿನ ಅಕ್ರಮ ವಲಸಿಗರಿಗೆ ಭಾರತ ರಾಜಧಾನಿಯಾಗಲು ಸಾಧ್ಯವಿಲ್ಲ ಎಂದರು.

ವಿಚಾರಣೆ ವೇಳೆ  ತಮ್ಮ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ಸಿಜೆಐ ಬೊಬ್ಡೆ, "ಅವರು ಮ್ಯಾನ್ಮಾರ್‍ಗೆ ಮರಳಿದರೆ ಅವರ ಹತ್ಯೆ ನಡೆಯಬಹುದೆಂಬ ಭಯವಿದೆ, ಆದರೆ ಅದೆಲ್ಲಾ ನಮ್ಮ ನಿಯಂತ್ರಣದಲ್ಲಿಲ್ಲ. ಆದರೆ ಭೂಮಿಯಲ್ಲಿ ನರಮೇಧ ಇರಬಾರದು ಎಂಬುದು ನಮ್ಮ ಇಚ್ಛೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X