Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧ್ವಜ ಹಾರಿಸುವುದು ಅಪರಾಧವಲ್ಲ, ಫೇಸ್...

ಧ್ವಜ ಹಾರಿಸುವುದು ಅಪರಾಧವಲ್ಲ, ಫೇಸ್ ಬುಕ್ ಲೈವ್ ಮಾಡಿ ತಪ್ಪು ಮಾಡಿದೆ: ನ್ಯಾಯಾಲಯಕ್ಕೆ ಹೇಳಿದ ದೀಪ್ ಸಿಧು

ವಾರ್ತಾಭಾರತಿವಾರ್ತಾಭಾರತಿ8 April 2021 4:22 PM IST
share
ಧ್ವಜ ಹಾರಿಸುವುದು ಅಪರಾಧವಲ್ಲ, ಫೇಸ್ ಬುಕ್ ಲೈವ್ ಮಾಡಿ ತಪ್ಪು ಮಾಡಿದೆ: ನ್ಯಾಯಾಲಯಕ್ಕೆ ಹೇಳಿದ ದೀಪ್ ಸಿಧು

ಹೊಸದಿಲ್ಲಿ: ಧ್ವಜ ಹಾರಿಸುವುದು ಅಪರಾಧವಲ್ಲ ಹಾಗೂ ತಾನು ಕೆಂಪುಕೋಟೆಯಲ್ಲಿ ಫೇಸ್ ಬುಕ್ ಲೈವ್ ಮಾಡಿ ತಪ್ಪೆಸಗಿದ್ದಾಗಿ ಜನವರಿ 26ರಂದು ರೈತರ ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭ ಕೆಂಪುಕೋಟೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಂಜಾಬಿ ನಟ ದೀಪ್ ಸಿಧು ತಮ್ಮ ವಕೀಲರ ಮೂಲಕ ದಿಲ್ಲಿಯ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಗುರುವಾರ ಸಿಧು ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದ ಸಂದರ್ಭ ಅವರ ವಕೀಲರು ಮೇಲಿನಂತೆ ತಿಳಿಸಿದ್ದು ಜಾಮೀನು ಅರ್ಜಿಯ ವಿಚಾರಣೆಯನ್ನು ಎಪ್ರಿಲ್ 12ಕ್ಕೆ ಮುಂದೂಡಲಾಗಿದೆ.

ಸಿಧು ಅವರು ಪ್ರಮುಖವಾಗಿ ಹಿಂಸೆಯಲ್ಲಿ ತೊಡಗಿದ್ದರು ಹಾಗೂ ಹಿಂಸೆ ಪ್ರೇರೇಪಿಸಿದ್ದರು ಮತ್ತು ಕತ್ತಿ, ಕೋಲು ಮತ್ತು ಧ್ವಜಗಳೊಂದಿಗಿರುವುದು ವೀಡಿಯೋದಲ್ಲಿ ಕಾಣಿಸಿತ್ತು ಎಂದು ದಿಲ್ಲಿ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಧು ಅವರು ಜನರನ್ನು ತಮ್ಮ ಭಾಷಣದ ಮೂಲಕ ಪ್ರಚೋದಿಸಿದ್ದಾರೆ ಎಂದೂ ಪೊಲೀಸರು ಆರೋಪಿಸಿದ್ಧಾರೆ.

"ನಾನು ಧ್ವಜವನ್ನು ಹಾರಿಸಿಲ್ಲ ಹಾಗೂ ಯಾರಿಗೂ ಧ್ವಜ ಹಾರಿಸುವಂತೆ ಹೇಳಿಲ್ಲ. ಅಷ್ಟಕ್ಕೂ ಧ್ವಜ ಹಾರಿಸುವುದು ಅಪರಾಧವಲ್ಲ, ನಾನು ತಪ್ಪು ಮಾಡಿದ್ದೇನೆ ಆದರೆ ತಪ್ಪು ಅಪರಾಧವಾಗುವುದಿಲ್ಲ, ನಾನು ಫೇಸ್ ಬುಕ್ ಲೈವ್  ಮಾಡಿ ತಪ್ಪು ಮಾಡಿದ್ದೇನೆ. ನಾನು ಫೇಸ್ ಬುಕ್ ಲೈವ್ ಮಾಡಿದ್ದಕ್ಕಾಗಿ ನನ್ನನ್ನು ದೇಶದ್ರೋಹಿ ಎಂದು ಹೇಳಲಾಯಿತು" ಎಂದು ಸಿಧು ಅವರ ಪರ ಅವರ ವಕೀಲ ಅಭಿಷೇಕ್ ಗುಪ್ತಾ ಹೇಳಿದ್ದಾರೆ.

ಸಿಧು ಅವರು ಯಾವುದೇ ಹಿಂಸೆಯಲ್ಲಿ ತೊಡಗಿಲ್ಲ, ಹಿಂಸೆ ಆರಂಭಗೊಳ್ಳುವುದಕ್ಕಿಂತ ಮುನ್ನವೇ ಅಲ್ಲಿಂದ ತೆರಳಿದ್ದಾರೆ. ತನಿಖಾ ಏಜನ್ಸಿಗಳು ಜತೆ ತಾವು ಶೇರ್ ಮಾಡಿರುವ ಎರಡು ವೀಡಿಯೋಗಳಲ್ಲಿ ತಾವು ಗುಂಪನ್ನು ಸಮಾಧಾನಿಸುತ್ತಿರುವುದು ಕಾಣಿಸುತ್ತದೆ. ಎಂದೂ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಸಿಧು ವಕೀಲ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X