Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಹೆಚ್ಚಳ: ದೇಶದಲ್ಲಿ ಲಾಕ್‌ ಡೌನ್‌...

ಕೊರೋನ ಹೆಚ್ಚಳ: ದೇಶದಲ್ಲಿ ಲಾಕ್‌ ಡೌನ್‌ ಜಾರಿ ಮಾಡುವುದಿಲ್ಲ ಎಂದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ8 April 2021 8:33 PM IST
share
ಕೊರೋನ ಹೆಚ್ಚಳ: ದೇಶದಲ್ಲಿ ಲಾಕ್‌ ಡೌನ್‌ ಜಾರಿ ಮಾಡುವುದಿಲ್ಲ ಎಂದ ಪ್ರಧಾನಿ ಮೋದಿ

ಹೊಸದಿಲ್ಲಿ,ಎ.8: ಕೊರೋನವೈರಸ್ ಸಾಂಕ್ರಾಮಿಕದ ಎರಡನೇ ಅಲೆಯನ್ನು ಎದುರಿಸಲು ಮೈಕ್ರೋ ಕಂಟೈನ್ಮೆಂಟ್ ಝೋನ್‌ಗಳ ರಚನೆ ಮತ್ತು ವ್ಯಾಪಕ ತಪಾಸಣೆ ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಒತ್ತು ನೀಡಿದರು. ಈ ವಿಷಯವನ್ನು ರಾಜ್ಯ ಸರಕಾರಗಳು ಲಘುವಾಗಿ ಪರಿಗಣಿಸಕೂಡದು ಎಂದು ಕಿವಿಮಾತನ್ನೂ ಹೇಳಿದರು.

ಗುರುವಾರ ಬೆಳಿಗ್ಗೆ ಎಂಟು ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1.26 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು,ಇದು ಈವರೆಗಿನ ಗರಿಷ್ಠ ದೈನಂದಿನ ಏರಿಕೆಯಾಗಿದೆ.

 ದೇಶದಲ್ಲಿ ಕೊರೋನವೈರಸ್ ಸ್ಥಿತಿ ಮತ್ತು ಲಸಿಕೆ ವಿತರಣೆ ಕುರಿತು ಗುರುವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಮೋದಿ,ಸೋಂಕು ಹೆಚ್ಚಾಗಿರುವ ಪ್ರದೇಶಗಳನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್‌ಗಳೆಂದು ಘೋಷಿಸಬೇಕು ಮತ್ತು ಅವುಗಳ ಬಗ್ಗೆ ಗರಿಷ್ಠ ಗಮನವನ್ನು ಹರಿಸಬೇಕು ಎಂದರು.

ವಿಶ್ವವೂ ರಾತ್ರಿ ಕರ್ಫ್ಯೂವನ್ನು ಒಪ್ಪಿಕೊಂಡಿದೆ. ತಾವು ಕೊರೋನ ಯುಗದಲ್ಲಿ ಬದುಕುತ್ತಿದ್ದೇವೆ ಎನ್ನುವುದನ್ನು ಈ ಕರ್ಫ್ಯೂ ಜನರಿಗೆ ನೆನಪಿಸಲಿದೆ. ರಾತ್ರಿ ಕರ್ಫ್ಯೂವನ್ನು ‘ಕೊರೋನ ಕರ್ಫ್ಯೂ ’ವನ್ನಾಗಿ ಜಾರಿಗೆ ತರೋಣ. ಇದು ಕೆಲಸಕಾರ್ಯಗಳನ್ನು ಹೆಚ್ಚಾಗಿ ಬಾಧಿಸುವುದೂ ಇಲ್ಲ ಎಂದು ಅವರು ಹೇಳಿದರು.

ರಾಜ್ಯಗಳಲ್ಲಿ ಕನಿಷ್ಠ ಶೇ.70ರಷ್ಟು ಜನಸಂಖ್ಯೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯ ಗುರಿಯನ್ನು ನಿಗದಿಗೊಳಿಸಿದ ಮೋದಿ,ವೈರಸ್‌ನ್ನು ಪತ್ತೆ ಹಚ್ಚಲು ಮತ್ತು ಅದರ ವಿರುದ್ಧ ಹೋರಾಡಲು ಇದೊಂದೇ ಮಾರ್ಗವಾಗಿದೆ. ಪೂರ್ವಭಾವಿಯಾಗಿ ಪರೀಕ್ಷೆಗಳನ್ನು ನಡೆಸುವುದು ಅತ್ಯಂತ ಮುಖ್ಯವಾಗಿದೆ. ಈಗ ಹೆಚ್ಚಿನ ಪ್ರಕರಣಗಳು ಲಕ್ಷಣರಹಿತವಾಗಿವೆ. ಶೀತ,ಜ್ವರದಂತಹ ಸಮಸ್ಯೆಗಳು ಕಾಡಿದಾಗ ಜನರು ಅದನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಮತ್ತು ಇಡೀ ಕುಟುಂಬಕ್ಕೆ ಸೋಂಕು ಹರಡುತ್ತಿದ್ದಾರೆ. ಪರೀಕ್ಷೆ ಮತ್ತು ಸೋಂಕು ಪತ್ತೆ ಈಗ ಅತ್ಯಂತ ಮುಖ್ಯವಾಗಿದೆ. ಪಾಸಿಟಿವಿಟಿ ದರವನ್ನು ಶೇ.5ಕ್ಕಿಂತ ಕೆಳಕ್ಕೆ ತರುವುದು ಅತ್ಯಗತ್ಯವಾಗಿದೆ ಎಂದರು.

ಲಸಿಕೆ ಉತ್ಸವ

ಎ.11ರಿಂದ ಎ.14ರವರೆಗೆ ನಾಲ್ಕು ದಿನಗಳ ಕಾಲ ದೇಶಾದ್ಯಂತ ಕೋವಿಡ್-19 ಲಸಿಕೆ ಉತ್ಸವವನ್ನು ನಡೆಸಲಾಗುವುದು ಎಂದ ಮೋದಿ,ಈ ಅವಧಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗುವುದು. 45 ವರ್ಷಕ್ಕೆ ಮೇಲ್ಪಟ್ಟ ಎಲ್ಲರೂ ಸ್ವಯಂಪ್ರೇರಿತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X