Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರಿಗೆ ಡೀಸೆಲ್ ಬಳಿಕ ಈಗ ರಸಗೊಬ್ಬರಗಳ...

ರೈತರಿಗೆ ಡೀಸೆಲ್ ಬಳಿಕ ಈಗ ರಸಗೊಬ್ಬರಗಳ ಬೆಲೆ ಏರಿಕೆಯ ಬಿಸಿ

ಶೇ.45ರಿಂದ ಶೇ.58ರಷ್ಟು ಬೆಲೆಗಳನ್ನು ಹೆಚ್ಚಿಸಿದ ಇಫ್ಕೋ

ವಾರ್ತಾಭಾರತಿವಾರ್ತಾಭಾರತಿ8 April 2021 9:09 PM IST
share
ರೈತರಿಗೆ ಡೀಸೆಲ್ ಬಳಿಕ ಈಗ ರಸಗೊಬ್ಬರಗಳ ಬೆಲೆ ಏರಿಕೆಯ ಬಿಸಿ

ಹೊಸದಿಲ್ಲಿ,ಎ.8: ಪ.ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಮತ್ತು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮುಂದುವರಿಸಿರುವ ಪ್ರತಿಭಟನೆಗಳ ನಡುವೆಯೇ ದೇಶದ ಬೃಹತ್ ರಸಗೊಬ್ಬರ ಮಾರಾಟ ಸಂಸ್ಥೆಯಾಗಿರುವ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ (ಇಫ್ಕೋ) ತನ್ನ ಉತ್ಪನ್ನಗಳ ಬೆಲೆಗಳನ್ನು ತೀವ್ರವಾಗಿ ಹೆಚ್ಚಿಸಿದೆ.

ದೇಶದಲ್ಲಿ ಯೂರಿಯಾದ ಬಳಿಕ ಅತ್ಯಂತ ಹೆಚ್ಚು ಬಳಕೆಯಾಗುವ ಡೈ-ಅಮೋನಿಯಂ ಫಾಸ್ಫೇಟ್(ಡಿಎಪಿ)ನ 50 ಕೆ.ಜಿ.ಯ ಚೀಲಕ್ಕೆ ಈಗ ರೈತರು 1,900 ರೂ.ಗಳನ್ನು ಪಾವತಿಸಬೇಕಿದೆ. ಪ್ರತಿ ಚೀಲಕ್ಕೆ 1,200 ರೂ.ಗಳ ಹಾಲಿ ಬೆಲೆಗೆ ಹೋಲಿಸಿದರೆ ಇದು ಶೇ.58ಕ್ಕೂ ಹೆಚ್ಚಿನ ಏರಿಕೆಯಾಗಿದೆ.

ಇಫ್ಕೋ ವಿವಿಧ ಎನ್‌ಕೆಪಿಎಸ್ (ನೈಟ್ರೋಜನ್,ರಂಜಕ,ಪೊಟ್ಯಾಷ್,ಗಂಧಕ) ಅನುಪಾತಗಳ ಇತರ ಜನಪ್ರಿಯ ಸಂಕೀರ್ಣ ರಸಗೊಬ್ಬರಗಳ ಬೆಲೆಗಳನ್ನೂ ಗಣನೀಯವಾಗಿ ಹೆಚ್ಚಿಸಿದೆ. 10:26:26 (ಪ್ರತಿ ಚೀಲಕ್ಕೆ 1,175 ರೂ.ನಿಂದ 1,775 ರೂ.ಗೆ),12:32:16 (1,185 ರೂ.ನಿಂದ 1,800 ರೂ.ಗೆ) ಮತ್ತು 20:20:0:13 (925 ರೂ.ನಿಂದ 1,350 ರೂ.ಗೆ) ಅನುಪಾತಗಳ ರಸಗೊಬ್ಬರಗಳು ಇವುಗಳಲ್ಲಿ ಸೇರಿವೆ. ನೂತನ ಬೆಲೆಗಳು ಎ.1ರಿಂದಲೇ ಜಾರಿಗೊಂಡಿವೆ.

ಯೂರಿಯಾ ಹೊರತುಪಡಿಸಿ ಇತರ ಎಲ್ಲ ರಸಗೊಬ್ಬರಗಳು ಈಗಾಗಲೇ ನಿಯಂತ್ರಣಮುಕ್ತಗೊಂಡಿವೆ. ಇತರ ರಸಗೊಬ್ಬರ ಕಂಪನಿಗಳು ಮಾರ್ಚ್‌ನಲ್ಲಿ ತಮ್ಮ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಇಫ್ಕೋ ತನ್ನ ಬೆಲೆಗಳನ್ನು ಪರಿಷ್ಕರಿಸಿದ್ದು,ಇದಕ್ಕೆ ಮತ್ತು ಯಾವುದೇ ರಾಜಕೀಯ ಪಕ್ಷ ಅಥವಾ ಸರಕಾರಕ್ಕೆ ಸಂಬಂಧವಿಲ್ಲ ಎಂದು ಕಂಪನಿಯ ವಕ್ತಾರರು ತಿಳಿಸಿದರು.

ಕಳೆದ ಐದಾರು ತಿಂಗಳುಗಳಿಂದ ರಸಗೊಬ್ಬರಗಳ ಅಂತರ್ರಾಷ್ಟ್ರೀಯ ಬೆಲೆಗಳಲ್ಲಿ ತೀವ್ರ ಏರಿಕೆಯಾಗಿರುವುದು ದೇಶಿಯ ಬೆಲೆಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಅಕ್ಟೋಬರ್‌ನಲ್ಲಿ ಪ್ರತಿ ಟನ್‌ಗೆ 400 ಡಾ.ಗಿಂತ ಕಡಿಮೆಯಿದ್ದ ಡಿಎಪಿಯ ಆಮದು ಬೆಲೆ ಈಗ ಸುಮಾರು 540 ಡಾ.ಗೇರಿದೆ. ಇದೇ ರೀತಿ ಅಮೋನಿಯಾ ಮತ್ತು ಗಂಧಕಗಳಂತಹ ಕಚ್ಚಾ ಸರಕುಗಳ ಬೆಲೆಗಳು ಪ್ರತಿ ಟನ್‌ಗೆ ಅನುಕ್ರಮವಾಗಿ 280 ಡಾ.ನಿಂದ 500 ಡಾ.ಗೆ ಮತ್ತು 85 ಡಾ.ನಿಂದ 220 ಡಾ.ಗೇರಿವೆ. ಯೂರಿಯಾ ಮತ್ತು ಪೊಟ್ಯಾಷ್ ಮ್ಯುರಿಯೇಟ್‌ಗಳೂ ದುಬಾರಿಯಾಗಿದ್ದು,ಪ್ರತಿ ಟನ್‌ಗೆ ಅನುಕ್ರಮವಾಗಿ 275 ಡಾ.ನಿಂದ 380 ಡಾ.ಗೆ ಮತ್ತು 230 ಡಾ.ನಿಂದ 280 ಡಾ.ಗೆ ಏರಿಕೆಯಾಗಿವೆ ಎಂದರು.

ಪೆಟ್ರೋಲ್,ಡೀಲ್ ಮತ್ತು ಎಲ್‌ಪಿಜಿಯ ಬಳಿಕ ಈಗ ರಸಗೊಬ್ಬರಗಳ ಬೆಲೆಗಳಲ್ಲಿಯೂ ಏರಿಕೆಯಾಗಿರುವುದು ರಾಜಕೀಯ ಮತ್ತು ಆರ್ಥಿಕ ಪರಿಣಾಮಗಳನ್ನು ಬೀರಬಹುದು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹೆಚ್ಚಿನ ಹಂತಗಳು ಇನ್ನಷ್ಟೇ ಪೂರ್ಣಗೊಳ್ಳಬೇಕಿವೆ. ಅತ್ತ ದಿಲ್ಲಿಯ ಸಿಂಘು,ಟಿಕ್ರಿ ಮತ್ತು ಘಾಝಿಪುರ ಗಡಿಗಳಲ್ಲಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನಾನಿರತ ರೈತರ ಸಂಖ್ಯೆ ಕಡಿಮೆಯಾಗಿದ್ದರೂ ಗೋಧಿ ಕೊಯ್ಲು ಮತ್ತು ಕಬ್ಬು ಬಿತ್ತನೆಯ ಬಳಿಕ ಪ್ರತಿಭಟನೆಯು ಇನ್ನಷ್ಟು ಕಾವು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಹೆಚ್ಚಿನ ರಸಗೊಬ್ಬರ ಬೆಲೆಗಳು ಬಡ್ಡಿದರವನ್ನು ಕಡಿಮೆ ಮಟ್ಟದಲ್ಲಿ ಕಾಯ್ದುಕೊಳ್ಳುವ ಆರ್‌ಬಿಐನ ಪ್ರಯತ್ನವನ್ನು ಇನ್ನಷ್ಟು ಜಟಿಲಗೊಳಿಸಬಹುದು. ರೈತರಿಗೆ ಇಂಧನ ಮತ್ತು ರಸಗೊಬ್ಬರಗಳ ಹೆಚ್ಚಿನ ವೆಚ್ಚವನ್ನು ಭರಿಸಲು ಜೂನ್‌ನಿಂದ ಆರಂಭಗೊಳ್ಳುವ ಮುಂಗಾರು ಋತುವಿನಲ್ಲಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸುವ ಒತ್ತಡಕ್ಕೆ ಮೋದಿ ಸರಕಾರವು ಸಿಲುಕಲಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X