ಪ್ರಮೀಳಾಗೆ ಪಿಎಚ್ಡಿ ಪದವಿ
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕಿ ಪ್ರಮೀಳಾ ಇವರು ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ದಲಿತ ಕಥೆಗಳಲ್ಲಿ ಅಧ್ಯಾತ್ಮದ ಸ್ವರೂಪ’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ.
ಮೂಲತ: ಮೂಡುಬಿದಿರೆಯ ಕೋಟೆಬಾಗಿಲಿನ ಆನಂದರಾವ್ ಮತ್ತು ಶಾರದಾ ಇವರ ಪುತ್ರಿಯಾಗಿರುವ ಪ್ರಮೀಳಾ ಪ್ರಸ್ತುತ ಬೆಂಗಳೂರಿನ ಹಲಸೂರು ಸೈಂಟ್ ಆನ್ಸ್ ಮಹಿಳಾ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story