Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಡುವುದನ್ನೆಲ್ಲಾ ಮಾಡಿ ಈಗೇಕೆ ಸರ್ವಪಕ್ಷ...

ಮಾಡುವುದನ್ನೆಲ್ಲಾ ಮಾಡಿ ಈಗೇಕೆ ಸರ್ವಪಕ್ಷ ಸಭೆ: ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ9 April 2021 5:32 PM IST
share
ಮಾಡುವುದನ್ನೆಲ್ಲಾ ಮಾಡಿ ಈಗೇಕೆ ಸರ್ವಪಕ್ಷ ಸಭೆ: ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಳಗಾವಿ, ಎ. 9: `ಕೊರೋನ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡುವುದನ್ನೆಲ್ಲಾ ಮಾಡಿ ಇದೀಗ ರಾಜ್ಯ ಬಿಜೆಪಿ ಸರಕಾರ ಏಕೆ ಸರ್ವಪಕ್ಷ ಸಭೆ ಕರೆಯುತ್ತದೆ ಎಂಬುದು ಅರ್ಥವಾಗುತ್ತಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನ ಸೋಂಕು ನಿಯಂತ್ರಣಕ್ಕೆ ಮೊದಲಿಗೆ ದೀಪ ಹಚ್ಚಿ, ಜಾಗಟೆ ಬಾರಿಸಿ ಎಂದರು. ನಾವು ಅದನ್ನು ಮಾಡಿದೆವು. ಕೇಂದ್ರ ಸರಕಾರ 20 ಲಕ್ಷ ಕೋಟಿ ರೂ.ಪ್ಯಾಕೇಜ್ ಘೋಷಣೆ ಮಾಡಿತ್ತು. ಅದನ್ನು ಯಾರಿಗೆ ಕೊಟ್ಟಿದ್ದಾರೆ. ಮೊದಲು ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.

ಇವರು ಮಾಡಬಾರದನ್ನು ಮಾಡಿ ದೇಶವನ್ನು, ರಾಜ್ಯವನ್ನು ಲೂಟಿ ಮಾಡಿದ್ದಾರೆ. 16,000 ಕೋಟಿ ರೂ.ಭ್ರಷ್ಟಾಚಾರ ನಡೆದಿದೆ. ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಪ್ರಮಾಣದ ಭ್ರಷ್ಟಾಚಾರ ಇದು. ಕ್ಷೌರಿಕರು, ಮಡಿವಾಳ, ಚಾಲನಾ ವೃತ್ತಿ ಮಾಡುವವರಿಗೆ ಐದು ಸಾವಿರ ರೂ. ನೀಡುವ ಭರವಸೆ ನೀಡಿ ಒಬ್ಬರಿಗೂ ನಯಾಪೈಸೆ ಹಣ ನೀಡಿಲ್ಲ. ಈ ಬಗ್ಗೆ ಯಾರು ಬೇಕಾದರೂ ಪರೀಕ್ಷೆ ನಡೆಸಲಿ ಎಂದು ಶಿವಕುಮಾರ್ ಸವಾಲು ಹಾಕಿದರು.

ರಾಜ್ಯದ 7 ಜಿಲ್ಲೆಗಳ 8 ನಗರಗಳಲ್ಲಿ ಕೊರೋನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಮನಸೋ ಇಚ್ಛೆ ಸರಕಾರ ನಿರ್ಣಯ ಕೈಗೊಳ್ಳುತಿದೆ. ಮಾಡಬಾರದನ್ನೆಲ್ಲಾ ಮಾಡಿ ದೇಶ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಈಗ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಹೇಳುತ್ತಿದ್ದಾರೆ. ಏಕೆ ಬೇಕು ಆ ಸಭೆ ಎಂದು ಪ್ರಶ್ನಿಸಿದ ಅವರು, ಸಾರಿಗೆ ಬಸ್‍ಗಳಲ್ಲಿ ಪೂರ್ತಿ ಜನರನ್ನು ತುಂಬುತ್ತಿದ್ದರು. ಆದರೆ, ಚಲನಚಿತ್ರ ಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಸೀಟು ಭರ್ತಿ ಮಾಡಬೇಕು ಎಂದು ನಿಯಮ ಮಾಡಿದ್ದಾರೆ ಎಂದು ಟೀಕಿಸಿದರು.

ಮಾತುಕತೆ ಮಾಡಿ: ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವರ ಜಿಲ್ಲೆಯಲ್ಲೇ ಈ ರೀತಿಯಾದರೆ ಬೇರೆ ಜಿಲ್ಲೆ ಪರಿಸ್ಥಿತಿ ಏನು? ಸಾರಿಗೆ ನೌಕರರನ್ನು ಕರೆದು ಮಾತನಾಡಬೇಕು. ಸಾರಿಗೆ ನೌಕರರನ್ನು ಕುಟುಂಬ ಸದಸ್ಯರಂತೆ ನೋಡಬೇಕು. ಎಲ್ಲ ನೌಕರರ ಮೇಲೆ ಸಂಶಯ ಪಡಬೇಡಿ ಎಂದು ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ದುರಾಡಳಿತಕ್ಕೆ ಸ್ಪಷ್ಟ ಸಂದೇಶ ನೀಡಲು ಜನ ಕಾಯುತ್ತಿದ್ದಾರೆ. ಬೆಳಗಾವಿಗೆ ಹೊರಗಡೆಯವರು ಬಂದು ರಾಜಕೀಯ ಮಾಡುವುದು ಸ್ಥಳೀಯ ಬಿಜೆಪಿ ನಾಯಕರಿಗೆ ಇಷ್ಟ ಆಗುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X